ಬೆಂಗಳೂರು ಪಿಜಿ‌ ಮಾಲೀಕರಿಗೆ ಬಿಬಿಎಂಪಿ‌ ಶಾ‌ಕ್..! ಅನಧಿಕೃತ, ನಿಯಮ ಬಾಹಿರ ಪಿಜಿಗಳ ವಿರುದ್ಧ ಸಮರ

ಬೆಂಗಳೂರು ಪಿಜಿ‌ ಮಾಲೀಕರಿಗೆ ಬಿಬಿಎಂಪಿ‌ ಶಾ‌ಕ್..! ಅನಧಿಕೃತ, ನಿಯಮ ಬಾಹಿರ ಪಿಜಿಗಳ ವಿರುದ್ಧ ಸಮರ

Published : Nov 18, 2023, 09:58 AM IST

ಬೆಂಗಳೂರಿನ ಪಿಜಿ ಮಾಲೀಕರಿಗೆ ಬಿಬಿಎಂಪಿ ಶಾಕ್ ನೀಡಿದೆ. ಅನಧಿಕೃತ ಹಾಗೂ ಸುರಕ್ಷಿತವಲ್ಲದ ಪಿಜಿಗಳಿಗೆ ಬಿಬಿಎಂಪಿ ನೋಟಿಸ್ ‌ನೀಡಿದೆ. ಇನ್ನೂ ‌ಕೆಲ ಪಿಜಿ‌ ಮಾಲೀಕರು ಸರ್ಕಾರಕ್ಕೆ ತೆರಿಗೆ ವಂಚಿಸ್ತಿದ್ದಾರಂತೆ. ಅಂತಹ ಮಾಲೀಕರಿಗೂ ಬಿಸಿ ಮುಟ್ಟಿಸಲು ಬಿಬಿಎಂಪಿ ‌ಮುಂದಾಗಿದೆ.
 

ಬೆಂಗಳೂರು ಐಟಿ ಸಿಟಿ ಎಲ್ಲೆಲ್ಲಿಂದಲೂ ಬಂದು ಇಲ್ಲಿ ಉದ್ಯೋಗ ಮಾಡಿಕೊಂಡು ಬದುಕು ಕಟ್ಟಿ ಕೊಳ್ಳುತ್ತಿರೋರ ಸಂಖ್ಯೆ ದೊಡ್ಡ ಮಟ್ಟದಲ್ಲೇ ಇದೆ.ಹೀಗೆ ಉದ್ಯೋಗ ಮಾಡುತ್ತಿರುವ ಬಹುತೇಕರು ಪಿಜಿಗಳಲ್ಲಿ(PGs) ಆಶ್ರಯ ಪಡೆಯುತ್ತಾರೆ. ಪಿಜಿಗಳಿಗೂ ಪಾಲಿಕೆ ಪರ್ಮಿಷನ್(BBMP) ಪಡೆಯಬೇಕು. ಮಾನದಂಡಗಳನ್ನ ಪಾಲಿಸಿಬೇಕು. ಆದ್ರೆ ನಗರದಲ್ಲಿನ ಕೆಲ ಪಿಜಿಗಳು ಕಾನೂನು‌ ಬಾಹಿರವಾಗಿ ಹಾಗೂ ಸುರಕ್ಷಿತ ಮಾನದಂಡ ಉಲ್ಲಂಘಿಸುತ್ತಿವೆ ಅನ್ನೋ ಆರೋಪವಿದೆ. ಇಂಥ ಕಾನೂನು ಬಾಹಿರ ಪಿಜಿಗಳ(Illegal PGs) ವಿರುದ್ಧ ಈಗ ಪಾಲಿಕೆ ಕ್ರಮಕ್ಕೆ ಮುಂದಾಗಿದೆ. ಹೊಸ ವರ್ಷಕ್ಕೂ ಮುಂಚಿತವಾಗಿ ವಲಯವಾರು ಇರುವ ಪಿಜಿಗಳ ಮಾಹಿತಿ ಪಡೆದು ಅಗತ್ಯ ಕ್ರಮ ಜರುಗಿಸಲು ಪಾಲಿಕೆ ನಿರ್ಧರಿಸಿದೆ. ಪಿಜಿ ನಡೆಸಲು ಪಾಲಿಕೆಯಿಂದ ವಾಣಿಜ್ಯ ಪರವಾನಿಗೆ ಪಡೆಯುವ ಜೊತೆಗೆ ಸುಕರಕ್ಷತೆಯ ಅಧಿಕೃತ ಪತ್ರವೂ ಪಡೆದುಕೊಳ್ಳಬೇಕು. ಇದು ತೆರಿಗೆ ಸಂಗ್ರಹದ ವೇಳೆ ಪಾಲಿಕೆಗೆ ಅನುಕೂಲವಾಗಲಿದೆ. ಆದರೆ ನಗರದ ಬಹುತೇಕ ಪಿಜಿಗಳು ವಾಣಿಜ್ಯ ತೆರಿಗೆ ಕಟ್ಟಲು ಮೀನಾಮೇಷ ಎಣಿಸುತ್ತಿವಿಯಂತೆ. ಇನ್ನು ಪಿಜಿ ಅಸೋಸಿಯೇಷನ್ ಪ್ರಕಾರ ನಗರದಲ್ಲಿ ಒಟ್ಟು 25 ಸಾವಿರಕ್ಕೂ ಅಧಿಕ ಪಿಜಿಗಳು ಕಾರ್ಯಾಚರಣೆಯಲ್ಲಿವೆ. ಆದರೆ ಪಾಲಿಕೆ‌ ಅಧಿಕಾರಿಗಳು, ಬೆಸ್ಕಾಂ ಹಾಗೂ ಜಲಮಂಡಳಿಯ ದಾಖಲೆ ಪ್ರಕಾರ ನಗರದಲ್ಲಿ ಒಟ್ಟು 50 ಸಾವಿರಕ್ಕೂ ಅಧಿಕ ಪಿಜಿಗಳಿವೆಯಂತೆ. ಹೀಗಾಗಿ ಪಾಲಿಕೆ ಕಣ್ತಪ್ಪಿಸಿ ಪಿಜಿ ನಡೆಸುತ್ತಿರುವವರ ವಿರುದ್ಧ ಪಾಲಿಕೆ ಕ್ರಮಕ್ಕೆ ಮುಂದಾಗಿದೆ. ಬಿಬಿಎಂಪಿಯ ವಾಣಿಜ್ಯ ಪರವಾನಗಿ ಹಾಗೂ ಸುರಕ್ಷತೆಯ ನಿಯಮ ಉಲ್ಲಂಘಿಸಿ ಹಲವು ಪಿಜಿಗಳು ನಡೆಯುತ್ತಿವೆ. ಇದನ್ನು ಪರಿಶೀಲಿಸಲು ಹಾಗೂ ವಾಣಿಜ್ಯ ತೆರಿಗೆ ಸಂಗ್ರಹಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಕ್ರಮಕ್ಕೆ ಸೂಚಿಸಲಾಗಿದೆ.. ಅಲ್ಲದೇ ಅಕ್ರಮ ಹಾಗೂ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿರುವ ಪಿಜಿಗಳ ನಿಯಂತ್ರಣಕ್ಕೆ ಪಾಲಿಕೆ ಹೊಸ ಗೈಡ್ ಲೈನ್ಸ್ ಜಾರಿಗೆ ನಿರ್ಧರಿಸಿದೆ. 

ಇದನ್ನೂ ವೀಕ್ಷಿಸಿ:  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರ? ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ದಾಖಲಾಯ್ತು ದೂರು

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more