ಮುಸ್ಲಿಂ ಸಂಘಟನೆಗಳ ಪ್ರತಿಭಟನೆ: ಮಂಗಳೂರಲ್ಲಿ ಹೈ ಅಲರ್ಟ್..!

ಮುಸ್ಲಿಂ ಸಂಘಟನೆಗಳ ಪ್ರತಿಭಟನೆ: ಮಂಗಳೂರಲ್ಲಿ ಹೈ ಅಲರ್ಟ್..!

Suvarna News   | Asianet News
Published : Jan 14, 2020, 02:31 PM ISTUpdated : Jan 14, 2020, 02:36 PM IST

ಬುಧವಾರ ಮಂಗಳೂರಿನಲ್ಲಿ ಮುಸ್ಲಿಂ ಸಂಘಟನೆಗಳ ಪ್ರತಿಭಟನೆ ನಡೆಯುವ ಹಿನ್ನೆಲೆಯಲ್ಲಿ ದ‌.ಕ ಜಿಲ್ಲೆಯಾದ್ಯಂತ ಹೈ ಅಲಟ್‌ಗೆ ಡಿಜಿಪಿ ನೀಲಮಣಿ ರಾಜು ಸೂಚನೆ ನೀಡಿದ್ದಾರೆ.

ಮಂಗಳೂರು(ಜ.14): ಬುಧವಾರ ಮಂಗಳೂರಿನಲ್ಲಿ ಮುಸ್ಲಿಂ ಸಂಘಟನೆಗಳ ಪ್ರತಿಭಟನೆ ನಡೆಯುವ ಹಿನ್ನೆಲೆಯಲ್ಲಿ ದ‌.ಕ ಜಿಲ್ಲೆಯಾದ್ಯಂತ ಹೈ ಅಲರ್ಟ್ ಗೆ ಡಿಜಿಪಿ ನೀಲಮಣಿ ರಾಜು ಸೂಚನೆ ನೀಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆಗೆ ಖಡಕ್ ಆದೇಶ ನೀಡಲಾಗಿದೆ. ಸದ್ಯ ಮಂಗಳೂರು ಸೇರಿ ಇಡೀ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಸರ್ಪಗಾವಲು ನಿಯೋಜಿಸಲಾಗಿದೆ.

ರಾಜ್ಯದ 10ಕ್ಕೂ ಅಧಿಕ ಜಿಲ್ಲೆಗಳಿಂದ ಪೊಲೀಸರು ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 2500 ಪೊಲೀಸರನ್ನು ನಿಯೋಜಿಸಲಾಗಿದೆ. ಧಾರವಾಡ, ಬಿಜಾಪುರ, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಗದಗ, ಬಳ್ಳಾರಿ ಜಿಲ್ಲೆಗಳ ಪೊಲೀಸರು ಆಗಮಿಸಿದ್ದಾರೆ. ಡಿ.19ರ ಗಲಭೆ ಬಳಿಕ ಮೊದಲ ಬಾರಿಗೆ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರಿನ ಶಹಾ ಗಾರ್ಡನ್ ಮೈದಾನದಲ್ಲಿ ಪ್ರತಿಭಟನೆ ನಡೆಯಲಿದೆ.

ಸಂಚಾರ ಬದಲಾವಣೆ

ನಾಳೆ ಬೆಳಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಸಂಚಾರ ಬದಲಾವಣೆಯಾಗಲಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುವ ವಾಹನಗಳು ಮೆಲ್ಕಾರ್, ಕೊಣಾಜೆ, ತೊಕ್ಕೊಟ್ಟು ಮೂಲಕ ಮಂಗಳೂರು ತಲುಪಲಿದ್ದು, ಮಂಗಳೂರಿನಿಂದ ಬೆಂಗಳೂರು ಕಡೆ ಸಾಗುವ ವಾಹನಗಳು ಪಂಪ್ ವೆಲ್, ತೊಕ್ಕೊಟ್ಟು, ಕೊಣಾಜೆ, ಬಿ.ಸಿ.ರೋಡ್ ಮೂಲಕ ಸಾಗಲಿವೆ.

ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಗ್ಯಾಂಗ್‌ಸ್ಟರ್‌ ಪರಾರಿ: ಮಂಗಳೂರಲ್ಲಿ ಹೈಅಲರ್ಟ್‌

ಉಡುಪಿಯಿಂದ ಬೆಂಗಳೂರು ಕಡೆಗೆ ಪಡುಬಿದ್ರೆ, ಕಾರ್ಕಳ, ಧರ್ಮಸ್ಥಳ, ಶಿರಾಡಿ ಮೂಲಕ ಹೋಗಲಿದ್ದು, ಬಿ.ಸಿ.ರೋಡ್, ಕೈಕಂಬ, ಪೊಳಲಿ ಮೂಲಕವೂ ಮಂಗಳೂರು ಸಂಪರ್ಕಿಸಲು ಅವಕಾಶವಿದೆ. ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರಿನ ಶಹಾ ಗಾರ್ಡನ್ ಮೈದಾನದಲ್ಲಿ ಪ್ರತಿಭಟನೆ ನಡೆಯಲಿದೆ. ಮಂಗಳೂರು ನಗರದಲ್ಲಿ ಅನುಮತಿ ಸಿಗದ ಹಿನ್ನೆಲೆ ಸ್ಥಳ ಬದಲಾವಣೆ ಮಾಡಲಾಗಿದೆ. ಮುಸ್ಲಿಂ ಸೆಂಟ್ರಲ್ ಕಮಿಟಿ ನೇತೃತ್ವದಲ್ಲಿ ಹಲವು ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿಯಾಗಲಿವೆ.

ದ.ಕ ಮತ್ತು ಉಡುಪಿ ಜಿಲ್ಲೆಯ ಲಕ್ಷಕ್ಕೂ ಅಧಿಕ ಜನ ಸೇರುವ ಸಾಧ್ಯತೆ ಇದ್ದು, ನಿವೃತ್ತ ಐಎಎಸ್ ಅಧಿಕಾರಿ ಹರ್ಷ ಮಂದರ್, ಕಣ್ಣನ್ ಗೋಪಿನಾಥನ್, ವಿಶ್ರಾಂತ ನ್ಯಾಯಮೂರ್ತಿ ಗೋಪಾಲಗೌಡ ಮುಖ್ಯ ಭಾಷಣ ಮಾಡಲಿದ್ದಾರೆ. ಪಿಎಫ್‌ಐ, ಎಸ್ ಡಿಪಿಐ ಸೇರಿ ಹಲವು ಸಂಘಟನೆಗಳು ಭಾಗಿಯಾಗಲಿವೆ. ಮಧ್ಯಾಹ್ನ 3 ಗಂಟೆಗೆ ಬೃಹತ್ ಪ್ರತಿಭಟನೆ ‌ನಡೆಯಲಿದೆ.

ಸೀಕ್ವೆನ್ಸ್‌ ಬದಲಿಸಿ ವಿಡಿಯೋ ಬಿಡುಗಡೆ ಮಾಡಿದ್ರಾ ಕುಮಾರಸ್ವಾಮಿ..?

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್