May 11, 2019, 5:53 PM IST
ಹಣ ಸಂಗ್ರಹಿಸಿಟ್ಟಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಲಾಡ್ಜ್ನಲ್ಲಿ ತಂಗಿದ್ದ ಬಿಜೆಪಿ ನಾಯಕರ ರೂಂ ಮೇಲೆ ಚುನಾವಣಾಧಿಕಾರಿಗಳು ದಾಳಿ ಮಾಡಿದ್ದಾರೆ. ಕುಂದಗೋಳ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಣ ಹಂಚಲು ಬಿಜೆಪಿ ನಾಯಕರು ಹಣ ಸಂಗ್ರಹಿಸಿಟ್ಟಿದ್ದರು ಎನ್ನಲಾಗಿತ್ತು.