ಏಷ್ಯಾನೆಟ್‌ ಸುವರ್ಣನ್ಯೂಸ್ ರಿಯಾಲಿಟಿ ಚೆಕ್: ಅಂಗನವಾಡಿ ಮಕ್ಕಳಿಗೆ ನೀಡುವ ಆಹಾರ ಗುಣಮಟ್ಟ ಕಳಪೆ !

ಏಷ್ಯಾನೆಟ್‌ ಸುವರ್ಣನ್ಯೂಸ್ ರಿಯಾಲಿಟಿ ಚೆಕ್: ಅಂಗನವಾಡಿ ಮಕ್ಕಳಿಗೆ ನೀಡುವ ಆಹಾರ ಗುಣಮಟ್ಟ ಕಳಪೆ !

Published : Nov 20, 2023, 09:51 AM IST

ಅಂಗನವಾಡಿಗೆ ಕಳಪೆ ಆಹಾರ ಪೂರೈಕೆ ಆರೋಪದ ಬೆನ್ನಲ್ಲೇ ಬಾಗಲಕೋಟೆಯಲ್ಲಿ ಏಷ್ಯಾನೆಟ್ ಸುವರ್ಣನ್ಯೂಸ್ ರಿಯಾಲಿಟಿ ಚೆಕ್ ನಡೆಸಿದೆ. ಈ ವೇಳೆ ಮಕ್ಕಳಿಗೆ ನೀಡ್ತಿರೋ ಕೆಲ ಆಹಾರ ಪದಾರ್ಥ ಕಳಪೆಯಾಗಿರುವುದು ಬಯಲಾಗಿದೆ.
 


ಅಪೌಷ್ಟಿಕತೆ ಸಮಸ್ಯೆ ನಿವಾರಿಸಲು ಅಂಗನವಾಡಿಗೆ(Anganwadis) ಬರುವ ಮಕ್ಕಳಿಗೆ ಸರ್ಕಾರ ಪೌಷ್ಠಿಕ ಆಹಾರ(Food) ನೀಡುತ್ತದೆ. ಆದ್ರೆ ಅದೇ ಆಹಾರ ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸುವ ಬದಲು ಅನಾರೋಗ್ಯ ಉಂಟು ಮಾಡುವ ಆತಂಕ ಕಾಡ್ತಿದೆ. ಕಾರಣ ಅಂಗನವಾಡಿಗಳಿಗೆ ಪೂರೈಕೆ ಮಾಡ್ತಿರೋ ಆಹಾರ ಪದಾರ್ಥಗಳ ಪೈಕಿ ಕೆಲ ಪದಾರ್ಥಗಳು ಕಳಪೆ ಗುಣಮಟ್ಟದಿಂದ ಕೂಡಿವೆ. ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಆರೋಪದ ಬೆನ್ನಲ್ಲೇ ಬಾಗಲಕೋಟೆಯ(Bagalkot) ಅಂಗನವಾಡಿ ಕೇಂದ್ರಗಳಲ್ಲಿ ಏಷ್ಯಾನೆಟ್ ಸುವರ್ಣನ್ಯೂಸ್ ರಿಯಾಲಿಟಿ ಚೆಕ್ ನಡೆಸ್ತು. ಈ ವೇಳೆ ಮಕ್ಕಳಿಗೆ ನೀಡ್ತಿರೋ ಗೋಧಿ ರವೆ ಕಳಪೆ ಗುಣಮಟ್ಟದಿಂದ ಕೂಡಿರುವುದು ಕಂಡುಬಂತು. ಈ ಗೋಧಿ ರವೆ ಕಳಪೆಯಾಗಿದ್ದು, ಇಂಥ ಕಳಪೆ ಆಹಾರ ಪದಾರ್ಥ ಸೇವಿಸಿದ್ರೆ ಮಕ್ಕಳು ಅನಾರೋಗ್ಯ ಪೀಡಿತರಾಗುವುದರಲ್ಲಿ ಅನುಮಾನವೇ ಇಲ್ಲ. ಅಧಿಕಾರಿಗಳು ಈ ಬಗ್ಗೆ ಕ್ರಮಕೈಗೊಳ್ಳಬೇಕೆಂಬುದು ಸ್ಥಳೀಯರ ಆಗ್ರಹವಾಗಿದೆ. ಬಾಗಲಕೋಟೆ ಅಂಗನವಾಡಿಗಳಿಗೆ ಎಂಎಸ್ಪಿಪಿಸಿ ಮೂಲಕ ಆಹಾರ ಪದಾರ್ಥಗಳ ಪೂರೈಕೆಯಾಗ್ತಿದೆ. ಶೇಂಗಾ, ಹೆಸರು ಬೇಳೆ, ಬೆಲ್ಲ ಗುಣಮಟ್ಟದಿಂದ ಕೂಡಿವೆ. ಆದ್ರೆ ಗೋಧಿ ರವೆ ಸೇರಿದಂತೆ ಇನ್ನಿತರ ಪದಾರ್ಥಗಳು ಕಳಪೆಯಾಗಿವೆ. ಮಕ್ಕಳ(Children) ಆಹಾರಕ್ಕಾಗಿ ಕೋಟಿ ಕೋಟಿ ಹಣ ಖರ್ಚು ಮಾಡುವ ಸರ್ಕಾರ ಅದರ ಗುಣಮಟ್ಟದ ಬಗ್ಗೆಯೂ ಗಮನಹರಿಸಬೇಕಿದೆ. ಗುಣಮಟ್ಟದ ಆಹಾರ ಸಿಗದಿದ್ರೆ ಮಕ್ಕಳ ಬೆಳವಣಿಗೆ ಮೇಲೂ ವ್ಯತಿರಿಕ್ತ ಪರಿಣಾಮ ಬೀರಲಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಇನ್ನಾದ್ರೂ ಅಲರ್ಟ್ ಆಗಬೇಕಿದೆ.

ಇದನ್ನೂ ವೀಕ್ಷಿಸಿ:  'ಶುಗರ್ ಫ್ಯಾಕ್ಟರಿ' ಎರಡನೇ ಟ್ರೈಲರ್ ರಿಲೀಸ್..! 'ಕೃಷ್ಣಾ'ವತಾರಕ್ಕೆ ನಿಖಿಲ್ ಕುಮಾರಸ್ವಾಮಿ ಬೌಲ್ಡ್!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more