ಏಷ್ಯಾನೆಟ್‌ ಸುವರ್ಣನ್ಯೂಸ್ ರಿಯಾಲಿಟಿ ಚೆಕ್: ಅಂಗನವಾಡಿ ಮಕ್ಕಳಿಗೆ ನೀಡುವ ಆಹಾರ ಗುಣಮಟ್ಟ ಕಳಪೆ !

ಏಷ್ಯಾನೆಟ್‌ ಸುವರ್ಣನ್ಯೂಸ್ ರಿಯಾಲಿಟಿ ಚೆಕ್: ಅಂಗನವಾಡಿ ಮಕ್ಕಳಿಗೆ ನೀಡುವ ಆಹಾರ ಗುಣಮಟ್ಟ ಕಳಪೆ !

Published : Nov 20, 2023, 09:51 AM IST

ಅಂಗನವಾಡಿಗೆ ಕಳಪೆ ಆಹಾರ ಪೂರೈಕೆ ಆರೋಪದ ಬೆನ್ನಲ್ಲೇ ಬಾಗಲಕೋಟೆಯಲ್ಲಿ ಏಷ್ಯಾನೆಟ್ ಸುವರ್ಣನ್ಯೂಸ್ ರಿಯಾಲಿಟಿ ಚೆಕ್ ನಡೆಸಿದೆ. ಈ ವೇಳೆ ಮಕ್ಕಳಿಗೆ ನೀಡ್ತಿರೋ ಕೆಲ ಆಹಾರ ಪದಾರ್ಥ ಕಳಪೆಯಾಗಿರುವುದು ಬಯಲಾಗಿದೆ.
 


ಅಪೌಷ್ಟಿಕತೆ ಸಮಸ್ಯೆ ನಿವಾರಿಸಲು ಅಂಗನವಾಡಿಗೆ(Anganwadis) ಬರುವ ಮಕ್ಕಳಿಗೆ ಸರ್ಕಾರ ಪೌಷ್ಠಿಕ ಆಹಾರ(Food) ನೀಡುತ್ತದೆ. ಆದ್ರೆ ಅದೇ ಆಹಾರ ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸುವ ಬದಲು ಅನಾರೋಗ್ಯ ಉಂಟು ಮಾಡುವ ಆತಂಕ ಕಾಡ್ತಿದೆ. ಕಾರಣ ಅಂಗನವಾಡಿಗಳಿಗೆ ಪೂರೈಕೆ ಮಾಡ್ತಿರೋ ಆಹಾರ ಪದಾರ್ಥಗಳ ಪೈಕಿ ಕೆಲ ಪದಾರ್ಥಗಳು ಕಳಪೆ ಗುಣಮಟ್ಟದಿಂದ ಕೂಡಿವೆ. ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಆರೋಪದ ಬೆನ್ನಲ್ಲೇ ಬಾಗಲಕೋಟೆಯ(Bagalkot) ಅಂಗನವಾಡಿ ಕೇಂದ್ರಗಳಲ್ಲಿ ಏಷ್ಯಾನೆಟ್ ಸುವರ್ಣನ್ಯೂಸ್ ರಿಯಾಲಿಟಿ ಚೆಕ್ ನಡೆಸ್ತು. ಈ ವೇಳೆ ಮಕ್ಕಳಿಗೆ ನೀಡ್ತಿರೋ ಗೋಧಿ ರವೆ ಕಳಪೆ ಗುಣಮಟ್ಟದಿಂದ ಕೂಡಿರುವುದು ಕಂಡುಬಂತು. ಈ ಗೋಧಿ ರವೆ ಕಳಪೆಯಾಗಿದ್ದು, ಇಂಥ ಕಳಪೆ ಆಹಾರ ಪದಾರ್ಥ ಸೇವಿಸಿದ್ರೆ ಮಕ್ಕಳು ಅನಾರೋಗ್ಯ ಪೀಡಿತರಾಗುವುದರಲ್ಲಿ ಅನುಮಾನವೇ ಇಲ್ಲ. ಅಧಿಕಾರಿಗಳು ಈ ಬಗ್ಗೆ ಕ್ರಮಕೈಗೊಳ್ಳಬೇಕೆಂಬುದು ಸ್ಥಳೀಯರ ಆಗ್ರಹವಾಗಿದೆ. ಬಾಗಲಕೋಟೆ ಅಂಗನವಾಡಿಗಳಿಗೆ ಎಂಎಸ್ಪಿಪಿಸಿ ಮೂಲಕ ಆಹಾರ ಪದಾರ್ಥಗಳ ಪೂರೈಕೆಯಾಗ್ತಿದೆ. ಶೇಂಗಾ, ಹೆಸರು ಬೇಳೆ, ಬೆಲ್ಲ ಗುಣಮಟ್ಟದಿಂದ ಕೂಡಿವೆ. ಆದ್ರೆ ಗೋಧಿ ರವೆ ಸೇರಿದಂತೆ ಇನ್ನಿತರ ಪದಾರ್ಥಗಳು ಕಳಪೆಯಾಗಿವೆ. ಮಕ್ಕಳ(Children) ಆಹಾರಕ್ಕಾಗಿ ಕೋಟಿ ಕೋಟಿ ಹಣ ಖರ್ಚು ಮಾಡುವ ಸರ್ಕಾರ ಅದರ ಗುಣಮಟ್ಟದ ಬಗ್ಗೆಯೂ ಗಮನಹರಿಸಬೇಕಿದೆ. ಗುಣಮಟ್ಟದ ಆಹಾರ ಸಿಗದಿದ್ರೆ ಮಕ್ಕಳ ಬೆಳವಣಿಗೆ ಮೇಲೂ ವ್ಯತಿರಿಕ್ತ ಪರಿಣಾಮ ಬೀರಲಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಇನ್ನಾದ್ರೂ ಅಲರ್ಟ್ ಆಗಬೇಕಿದೆ.

ಇದನ್ನೂ ವೀಕ್ಷಿಸಿ:  'ಶುಗರ್ ಫ್ಯಾಕ್ಟರಿ' ಎರಡನೇ ಟ್ರೈಲರ್ ರಿಲೀಸ್..! 'ಕೃಷ್ಣಾ'ವತಾರಕ್ಕೆ ನಿಖಿಲ್ ಕುಮಾರಸ್ವಾಮಿ ಬೌಲ್ಡ್!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more