8 ವರ್ಷವಾದ್ರೂ ಮುಗಿದಿಲ್ಲ ಕಾಮಗಾರಿ: ಸೋಮವಾರಪೇಟೆ ಹಾಕಿ ಕ್ರೀಡಾಂಗಣ ಈಗ ಪುಂಡರ ತಾಣ!

8 ವರ್ಷವಾದ್ರೂ ಮುಗಿದಿಲ್ಲ ಕಾಮಗಾರಿ: ಸೋಮವಾರಪೇಟೆ ಹಾಕಿ ಕ್ರೀಡಾಂಗಣ ಈಗ ಪುಂಡರ ತಾಣ!

Published : Apr 28, 2022, 01:27 PM IST

ಹಚ್ಚ ಹಸಿರ ಹೊದಿಕೆ ಹೊದ್ದು ಮಲಗಿರುವ ಆಕರ್ಷಕ ಕ್ರೀಡಾಂಗಣ. ಇದು ಆಸ್ಟ್ರೋ ಟರ್ಫ್ (Astro Turf) ಅಳವಡಿಸಿರೋ ಹಾಕಿ ಕ್ರೀಡಾಂಗಣ ಅನ್ನೋದು ಯಾರಿಗೂ ಅರಿವಾಗುತ್ತೆ. ಆದ್ರೆ ಈ ಕ್ರೀಡಾಂಗಣ ಆಡವಾಡಲು ಮಾತ್ರ ಲಭ್ಯವಿಲ್ಲ. 

ಹಚ್ಚ ಹಸಿರ ಹೊದಿಕೆ ಹೊದ್ದು ಮಲಗಿರುವ ಆಕರ್ಷಕ ಕ್ರೀಡಾಂಗಣ. ಇದು ಆಸ್ಟ್ರೋ ಟರ್ಫ್ (Astro Turf) ಅಳವಡಿಸಿರೋ ಹಾಕಿ ಕ್ರೀಡಾಂಗಣ ಅನ್ನೋದು ಯಾರಿಗೂ ಅರಿವಾಗುತ್ತೆ. ಆದ್ರೆ ಈ ಕ್ರೀಡಾಂಗಣ ಆಡವಾಡಲು ಮಾತ್ರ ಲಭ್ಯವಿಲ್ಲ. ಯಾಕಂದ್ರೆ ಈ ಅಂಗಣದ ಕಾಮಗಾರಿಯೇ ಮುಕ್ತಾಯವಾಗಿಲ್ಲ. ಅದೂ ಕೂಡ ಎಂಟು ವರ್ಷಗಳ ಸುಧೀರ್ಘ ಅವಧಿಯ ಬಳಿಕವೂ. ಅಂದ ಹಾಗೆ ಇದು ಹಾಕಿ ತವರು ಕೊಡಗಿನ  (Kodagu) ಸೋಮವಾರಪೇಟೆ ನಗರದಲ್ಲಿರೋ ಅಸ್ಟ್ರೋ ಟರ್ಫ್ ಕಾಮಗಾರಿ. 

ಇದೇ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ (Appacchu Ranjan) ಕ್ರೀಡಾ ಸಚಿವರಾಗಿದ್ದಾಗ ಸೋಮವಾರಪೇಟೆಗೆ ಈ ಗ್ರೌಂಡನ್ನ ಸ್ಯಾಂಕ್ಷನ್ ಮಾಡಿಸುತ್ತಾರೆ. ಆದ್ರೆ ವಿಪರ್ಯಾಸ ಅಂದ್ರೆ  ಕಳೆದ ಎಂಟು ವರ್ಷಗಳಿಂದ ಇದರ ಕಾಮಗಾರಿ ಕುಂಟುತ್ತಲೇ ಸಾಗಿದೆ. ಹೈದ್ರಾಬಾದ್ ಮೂಲದ ಸಂಸ್ಥೆಯೊಂದು ಇದರ ಕಾಮಗಾರಿ ನಡೆಸುತ್ತಿದ್ದು ಬಹಳಷ್ಟು ಕಳಪೆಯಿಂದ ಕೂಡಿದೆ ಎಂಬ ಆರೋಪವಿದೆ. ಕ್ರೀಡಾಂಗಣದ ಸುತ್ತ ಮುತ್ತ ಇನ್ನೂ ನಿಧಾನಗತಿಯಲ್ಲಿ ಕಾಮಗಾರಿ ನಡೆಸಲಾಗುತ್ತಿದ್ದು, ಅಲ್ಲಿ ಯಾವುದೇ ಭದ್ರತೆಯೂ ಇಲ್ಲ. ರಾತ್ರಿ ವೇಳೆ ಪಶುಗಳು ಓಡಾಡುವುದರ ಜೊತೆಗೆ ಪುಂಡರು ಕೂಡ ಇಲ್ಲಿ ಸ್ವೇಚ್ಛಾಚಾರದಿಂದ ವರ್ತಿಸುತ್ತಾರೆ ಎಂಬ ಆರೋಪವಿದೆ.

ಈ ಕ್ರೀಡಾಂಗಣದಲ್ಲಿ ಭಾರತ ಹಾಕಿ ತಂಡದ ನಾಯಕರಾಗಿದ್ದ ಅರ್ಜುನ್ ಹಾಲಪ್ಪ, ಎಸ್ವಿ ಸುನಿಲ್ ಆಡಿ ಬೆಳೆದವರು. ಹಾಗೆಯೇ ಭಾರತ ಹಾಕಿ ತಂಡವನ್ನು ಪ್ರತನಿಧಿಸಿದ್ದ ಗೋವಿಂದ್, ವಿಎಸ್ ವಿನಯ್ ಸೇರಿದಂತೆ ನೂರಾರು ಕ್ರೀಡಾಪಟುಗಳಿಗೆ ಇದೇ ಕ್ರೀಡಾಂಗಣ ತವರಾಗಿದೆ. ಇಷ್ಟೊಂದು ಆಟಗಾರರನ್ನ ದೇಶಕ್ಕೆ ನೀಡಿದ ಈ ಕ್ರೀಡಾಂಗಣ ಇಂದು ಯಾರಿಗೂ ಉಪಯೋಗವಾಗದೆ ಹೀಗೆ ಬಿದ್ದಿರುವುದು ಕ್ರೀಡಾಪಟುಗಳ ಅಸಮಾಧಾನಕ್ಕೆ ಕಾರಣವಾಗಿದೆ.

ಸ್ಥಳೀಯ ಶಾಸಕ ಅಪ್ಪಚ್ಚು ರಂಜನ್ ಇದೇ ಊರಿನವರಾಗಿದ್ದಾರೆ. ಆದ್ರೆ ಕಳೆದ ಎಂಟು ವರ್ಷಗಳಿಂದ ಈ ಯೋಜನೆ ಕುಂಟುತ್ತಾ ಸಾಗಿದ್ರೂ, ಇವರೂ ಕೂಡ ಅದನ್ನ ಗಟ್ಟಿಯಾಗಿ ಪ್ರಶ್ನಿಸುವ  ಧೈರ್ಯ ಮಾಡಿಲ್ಲ ಅಂತ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಂಟು ವರ್ಷಗಳಲ್ಲಿ ಆಗದ ಯೋಜನೆ ಇನ್ಯಾವತ್ತು ಆಗುತ್ತೋ ಅಂತ ಸ್ಥಳೀಯ ಹಾಕಿಪಟುಗಳು ಕಾಯುವಂತಾಗಿದೆ.

 

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more