8 ವರ್ಷವಾದ್ರೂ ಮುಗಿದಿಲ್ಲ ಕಾಮಗಾರಿ: ಸೋಮವಾರಪೇಟೆ ಹಾಕಿ ಕ್ರೀಡಾಂಗಣ ಈಗ ಪುಂಡರ ತಾಣ!

8 ವರ್ಷವಾದ್ರೂ ಮುಗಿದಿಲ್ಲ ಕಾಮಗಾರಿ: ಸೋಮವಾರಪೇಟೆ ಹಾಕಿ ಕ್ರೀಡಾಂಗಣ ಈಗ ಪುಂಡರ ತಾಣ!

Published : Apr 28, 2022, 01:27 PM IST

ಹಚ್ಚ ಹಸಿರ ಹೊದಿಕೆ ಹೊದ್ದು ಮಲಗಿರುವ ಆಕರ್ಷಕ ಕ್ರೀಡಾಂಗಣ. ಇದು ಆಸ್ಟ್ರೋ ಟರ್ಫ್ (Astro Turf) ಅಳವಡಿಸಿರೋ ಹಾಕಿ ಕ್ರೀಡಾಂಗಣ ಅನ್ನೋದು ಯಾರಿಗೂ ಅರಿವಾಗುತ್ತೆ. ಆದ್ರೆ ಈ ಕ್ರೀಡಾಂಗಣ ಆಡವಾಡಲು ಮಾತ್ರ ಲಭ್ಯವಿಲ್ಲ. 

ಹಚ್ಚ ಹಸಿರ ಹೊದಿಕೆ ಹೊದ್ದು ಮಲಗಿರುವ ಆಕರ್ಷಕ ಕ್ರೀಡಾಂಗಣ. ಇದು ಆಸ್ಟ್ರೋ ಟರ್ಫ್ (Astro Turf) ಅಳವಡಿಸಿರೋ ಹಾಕಿ ಕ್ರೀಡಾಂಗಣ ಅನ್ನೋದು ಯಾರಿಗೂ ಅರಿವಾಗುತ್ತೆ. ಆದ್ರೆ ಈ ಕ್ರೀಡಾಂಗಣ ಆಡವಾಡಲು ಮಾತ್ರ ಲಭ್ಯವಿಲ್ಲ. ಯಾಕಂದ್ರೆ ಈ ಅಂಗಣದ ಕಾಮಗಾರಿಯೇ ಮುಕ್ತಾಯವಾಗಿಲ್ಲ. ಅದೂ ಕೂಡ ಎಂಟು ವರ್ಷಗಳ ಸುಧೀರ್ಘ ಅವಧಿಯ ಬಳಿಕವೂ. ಅಂದ ಹಾಗೆ ಇದು ಹಾಕಿ ತವರು ಕೊಡಗಿನ  (Kodagu) ಸೋಮವಾರಪೇಟೆ ನಗರದಲ್ಲಿರೋ ಅಸ್ಟ್ರೋ ಟರ್ಫ್ ಕಾಮಗಾರಿ. 

ಇದೇ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ (Appacchu Ranjan) ಕ್ರೀಡಾ ಸಚಿವರಾಗಿದ್ದಾಗ ಸೋಮವಾರಪೇಟೆಗೆ ಈ ಗ್ರೌಂಡನ್ನ ಸ್ಯಾಂಕ್ಷನ್ ಮಾಡಿಸುತ್ತಾರೆ. ಆದ್ರೆ ವಿಪರ್ಯಾಸ ಅಂದ್ರೆ  ಕಳೆದ ಎಂಟು ವರ್ಷಗಳಿಂದ ಇದರ ಕಾಮಗಾರಿ ಕುಂಟುತ್ತಲೇ ಸಾಗಿದೆ. ಹೈದ್ರಾಬಾದ್ ಮೂಲದ ಸಂಸ್ಥೆಯೊಂದು ಇದರ ಕಾಮಗಾರಿ ನಡೆಸುತ್ತಿದ್ದು ಬಹಳಷ್ಟು ಕಳಪೆಯಿಂದ ಕೂಡಿದೆ ಎಂಬ ಆರೋಪವಿದೆ. ಕ್ರೀಡಾಂಗಣದ ಸುತ್ತ ಮುತ್ತ ಇನ್ನೂ ನಿಧಾನಗತಿಯಲ್ಲಿ ಕಾಮಗಾರಿ ನಡೆಸಲಾಗುತ್ತಿದ್ದು, ಅಲ್ಲಿ ಯಾವುದೇ ಭದ್ರತೆಯೂ ಇಲ್ಲ. ರಾತ್ರಿ ವೇಳೆ ಪಶುಗಳು ಓಡಾಡುವುದರ ಜೊತೆಗೆ ಪುಂಡರು ಕೂಡ ಇಲ್ಲಿ ಸ್ವೇಚ್ಛಾಚಾರದಿಂದ ವರ್ತಿಸುತ್ತಾರೆ ಎಂಬ ಆರೋಪವಿದೆ.

ಈ ಕ್ರೀಡಾಂಗಣದಲ್ಲಿ ಭಾರತ ಹಾಕಿ ತಂಡದ ನಾಯಕರಾಗಿದ್ದ ಅರ್ಜುನ್ ಹಾಲಪ್ಪ, ಎಸ್ವಿ ಸುನಿಲ್ ಆಡಿ ಬೆಳೆದವರು. ಹಾಗೆಯೇ ಭಾರತ ಹಾಕಿ ತಂಡವನ್ನು ಪ್ರತನಿಧಿಸಿದ್ದ ಗೋವಿಂದ್, ವಿಎಸ್ ವಿನಯ್ ಸೇರಿದಂತೆ ನೂರಾರು ಕ್ರೀಡಾಪಟುಗಳಿಗೆ ಇದೇ ಕ್ರೀಡಾಂಗಣ ತವರಾಗಿದೆ. ಇಷ್ಟೊಂದು ಆಟಗಾರರನ್ನ ದೇಶಕ್ಕೆ ನೀಡಿದ ಈ ಕ್ರೀಡಾಂಗಣ ಇಂದು ಯಾರಿಗೂ ಉಪಯೋಗವಾಗದೆ ಹೀಗೆ ಬಿದ್ದಿರುವುದು ಕ್ರೀಡಾಪಟುಗಳ ಅಸಮಾಧಾನಕ್ಕೆ ಕಾರಣವಾಗಿದೆ.

ಸ್ಥಳೀಯ ಶಾಸಕ ಅಪ್ಪಚ್ಚು ರಂಜನ್ ಇದೇ ಊರಿನವರಾಗಿದ್ದಾರೆ. ಆದ್ರೆ ಕಳೆದ ಎಂಟು ವರ್ಷಗಳಿಂದ ಈ ಯೋಜನೆ ಕುಂಟುತ್ತಾ ಸಾಗಿದ್ರೂ, ಇವರೂ ಕೂಡ ಅದನ್ನ ಗಟ್ಟಿಯಾಗಿ ಪ್ರಶ್ನಿಸುವ  ಧೈರ್ಯ ಮಾಡಿಲ್ಲ ಅಂತ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಂಟು ವರ್ಷಗಳಲ್ಲಿ ಆಗದ ಯೋಜನೆ ಇನ್ಯಾವತ್ತು ಆಗುತ್ತೋ ಅಂತ ಸ್ಥಳೀಯ ಹಾಕಿಪಟುಗಳು ಕಾಯುವಂತಾಗಿದೆ.

 

 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more