8 ವರ್ಷವಾದ್ರೂ ಮುಗಿದಿಲ್ಲ ಕಾಮಗಾರಿ: ಸೋಮವಾರಪೇಟೆ ಹಾಕಿ ಕ್ರೀಡಾಂಗಣ ಈಗ ಪುಂಡರ ತಾಣ!

8 ವರ್ಷವಾದ್ರೂ ಮುಗಿದಿಲ್ಲ ಕಾಮಗಾರಿ: ಸೋಮವಾರಪೇಟೆ ಹಾಕಿ ಕ್ರೀಡಾಂಗಣ ಈಗ ಪುಂಡರ ತಾಣ!

Published : Apr 28, 2022, 01:27 PM IST

ಹಚ್ಚ ಹಸಿರ ಹೊದಿಕೆ ಹೊದ್ದು ಮಲಗಿರುವ ಆಕರ್ಷಕ ಕ್ರೀಡಾಂಗಣ. ಇದು ಆಸ್ಟ್ರೋ ಟರ್ಫ್ (Astro Turf) ಅಳವಡಿಸಿರೋ ಹಾಕಿ ಕ್ರೀಡಾಂಗಣ ಅನ್ನೋದು ಯಾರಿಗೂ ಅರಿವಾಗುತ್ತೆ. ಆದ್ರೆ ಈ ಕ್ರೀಡಾಂಗಣ ಆಡವಾಡಲು ಮಾತ್ರ ಲಭ್ಯವಿಲ್ಲ. 

ಹಚ್ಚ ಹಸಿರ ಹೊದಿಕೆ ಹೊದ್ದು ಮಲಗಿರುವ ಆಕರ್ಷಕ ಕ್ರೀಡಾಂಗಣ. ಇದು ಆಸ್ಟ್ರೋ ಟರ್ಫ್ (Astro Turf) ಅಳವಡಿಸಿರೋ ಹಾಕಿ ಕ್ರೀಡಾಂಗಣ ಅನ್ನೋದು ಯಾರಿಗೂ ಅರಿವಾಗುತ್ತೆ. ಆದ್ರೆ ಈ ಕ್ರೀಡಾಂಗಣ ಆಡವಾಡಲು ಮಾತ್ರ ಲಭ್ಯವಿಲ್ಲ. ಯಾಕಂದ್ರೆ ಈ ಅಂಗಣದ ಕಾಮಗಾರಿಯೇ ಮುಕ್ತಾಯವಾಗಿಲ್ಲ. ಅದೂ ಕೂಡ ಎಂಟು ವರ್ಷಗಳ ಸುಧೀರ್ಘ ಅವಧಿಯ ಬಳಿಕವೂ. ಅಂದ ಹಾಗೆ ಇದು ಹಾಕಿ ತವರು ಕೊಡಗಿನ  (Kodagu) ಸೋಮವಾರಪೇಟೆ ನಗರದಲ್ಲಿರೋ ಅಸ್ಟ್ರೋ ಟರ್ಫ್ ಕಾಮಗಾರಿ. 

ಇದೇ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ (Appacchu Ranjan) ಕ್ರೀಡಾ ಸಚಿವರಾಗಿದ್ದಾಗ ಸೋಮವಾರಪೇಟೆಗೆ ಈ ಗ್ರೌಂಡನ್ನ ಸ್ಯಾಂಕ್ಷನ್ ಮಾಡಿಸುತ್ತಾರೆ. ಆದ್ರೆ ವಿಪರ್ಯಾಸ ಅಂದ್ರೆ  ಕಳೆದ ಎಂಟು ವರ್ಷಗಳಿಂದ ಇದರ ಕಾಮಗಾರಿ ಕುಂಟುತ್ತಲೇ ಸಾಗಿದೆ. ಹೈದ್ರಾಬಾದ್ ಮೂಲದ ಸಂಸ್ಥೆಯೊಂದು ಇದರ ಕಾಮಗಾರಿ ನಡೆಸುತ್ತಿದ್ದು ಬಹಳಷ್ಟು ಕಳಪೆಯಿಂದ ಕೂಡಿದೆ ಎಂಬ ಆರೋಪವಿದೆ. ಕ್ರೀಡಾಂಗಣದ ಸುತ್ತ ಮುತ್ತ ಇನ್ನೂ ನಿಧಾನಗತಿಯಲ್ಲಿ ಕಾಮಗಾರಿ ನಡೆಸಲಾಗುತ್ತಿದ್ದು, ಅಲ್ಲಿ ಯಾವುದೇ ಭದ್ರತೆಯೂ ಇಲ್ಲ. ರಾತ್ರಿ ವೇಳೆ ಪಶುಗಳು ಓಡಾಡುವುದರ ಜೊತೆಗೆ ಪುಂಡರು ಕೂಡ ಇಲ್ಲಿ ಸ್ವೇಚ್ಛಾಚಾರದಿಂದ ವರ್ತಿಸುತ್ತಾರೆ ಎಂಬ ಆರೋಪವಿದೆ.

ಈ ಕ್ರೀಡಾಂಗಣದಲ್ಲಿ ಭಾರತ ಹಾಕಿ ತಂಡದ ನಾಯಕರಾಗಿದ್ದ ಅರ್ಜುನ್ ಹಾಲಪ್ಪ, ಎಸ್ವಿ ಸುನಿಲ್ ಆಡಿ ಬೆಳೆದವರು. ಹಾಗೆಯೇ ಭಾರತ ಹಾಕಿ ತಂಡವನ್ನು ಪ್ರತನಿಧಿಸಿದ್ದ ಗೋವಿಂದ್, ವಿಎಸ್ ವಿನಯ್ ಸೇರಿದಂತೆ ನೂರಾರು ಕ್ರೀಡಾಪಟುಗಳಿಗೆ ಇದೇ ಕ್ರೀಡಾಂಗಣ ತವರಾಗಿದೆ. ಇಷ್ಟೊಂದು ಆಟಗಾರರನ್ನ ದೇಶಕ್ಕೆ ನೀಡಿದ ಈ ಕ್ರೀಡಾಂಗಣ ಇಂದು ಯಾರಿಗೂ ಉಪಯೋಗವಾಗದೆ ಹೀಗೆ ಬಿದ್ದಿರುವುದು ಕ್ರೀಡಾಪಟುಗಳ ಅಸಮಾಧಾನಕ್ಕೆ ಕಾರಣವಾಗಿದೆ.

ಸ್ಥಳೀಯ ಶಾಸಕ ಅಪ್ಪಚ್ಚು ರಂಜನ್ ಇದೇ ಊರಿನವರಾಗಿದ್ದಾರೆ. ಆದ್ರೆ ಕಳೆದ ಎಂಟು ವರ್ಷಗಳಿಂದ ಈ ಯೋಜನೆ ಕುಂಟುತ್ತಾ ಸಾಗಿದ್ರೂ, ಇವರೂ ಕೂಡ ಅದನ್ನ ಗಟ್ಟಿಯಾಗಿ ಪ್ರಶ್ನಿಸುವ  ಧೈರ್ಯ ಮಾಡಿಲ್ಲ ಅಂತ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಂಟು ವರ್ಷಗಳಲ್ಲಿ ಆಗದ ಯೋಜನೆ ಇನ್ಯಾವತ್ತು ಆಗುತ್ತೋ ಅಂತ ಸ್ಥಳೀಯ ಹಾಕಿಪಟುಗಳು ಕಾಯುವಂತಾಗಿದೆ.

 

 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more