Seeds Price Rise  :   ಬಿತ್ತನೆ ಆಲೂಗಡ್ಡೆ ಬೆಲೆ ಗಗನಕ್ಕೆ - ರೈತರು ಕಂಗಾಲು

Seeds Price Rise : ಬಿತ್ತನೆ ಆಲೂಗಡ್ಡೆ ಬೆಲೆ ಗಗನಕ್ಕೆ - ರೈತರು ಕಂಗಾಲು

Suvarna News   | Asianet News
Published : Dec 24, 2021, 03:53 PM IST

ನೂರಾರು ಚೀಲಗಳಲ್ಲಿ ತುಂಬಿಸಿಟ್ಟಿರುವ ಬಿತ್ತನೆ ಬೀಜದ ಆಲೂಗಡ್ಡೆ ಬೆಲೆ ಗಗನಕ್ಕೇರಿದ್ದು, ರೈತರು ಕಂಗಾಲಾಗಿದ್ದಾರೆ.  ಜಿಲ್ಲೆಯಲ್ಲಿ ಸುರಿದ ಬಾರೀ ಮಳೆಯಿಂದ ರೈತರು ಬೆಳೆದ ಬೆಳೆಗಳೆಲ್ಲಾ ಮಣ್ಣುಪಾಲಾಗಿ ಹೋಗಿದೆ. ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಿದ್ದ ಬೆಳೆಗಳೆಲ್ಲಾ ನೀರಿನಲ್ಲಿ ಕೊಚ್ಚಿ ಹೋಗಿದೆ. ಈಗಾಗಲೇ ನಷ್ಟದಲ್ಲಿರುವ ಜಿಲ್ಲೆಯ ರೈತರು ಸದ್ಯ ಹೊಸದಾಗಿ ಬೆಳೆಗಳನ್ನು ಬೆಳೆಯುವ ಬಗ್ಗೆ ಚಿಂತನೆ ನಡೆಸುವಷ್ಟರಲ್ಲೇ ರೈತರಿಗೆ ಮತ್ತೊಂದು ಆಘಾತ ಎದುರಾದಂತಾಗಿದೆ

ಕೋಲಾರ(ಡಿ.24):  ಬಿತ್ತನೆ ಬೀಜದ ಆಲೂಗಡ್ಡೆ (Potato) ಬೆಲೆ ಗಗನಕ್ಕೇರಿದ್ದು, ರೈತರು (Farmers) ಕಂಗಾಲಾಗಿದ್ದಾರೆ.  ಜಿಲ್ಲೆಯಲ್ಲಿ ಸುರಿದ ಬಾರೀ ಮಳೆಯಿಂದ  ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಿದ್ದ ಬೆಳೆಗಳೆಲ್ಲಾ ನೀರಿನಲ್ಲಿ ಕೊಚ್ಚಿ ಹೋಗಿದೆ. ಈಗಾಗಲೇ ನಷ್ಟದಲ್ಲಿರುವ ಜಿಲ್ಲೆಯ ರೈತರು ಸದ್ಯ ಹೊಸದಾಗಿ ಬೆಳೆಗಳನ್ನು ಬೆಳೆಯುವ ಬಗ್ಗೆ ಚಿಂತನೆ ನಡೆಸುವಷ್ಟರಲ್ಲೇ ರೈತರಿಗೆ ಮತ್ತೊಂದು ಆಘಾತ ಎದುರಾಗಿದ್ದು, ಬಿತ್ತನೆ ಆಲೂಗಡ್ಡೆಯ ಬೆಲೆ ಗಗನಕ್ಕೇರಿದೆ. 

PepsiCo India: ವಿಶೇಷ ತಳಿ ಆಲೂಗಡ್ಡೆ ಮೇಲಿನ ಪೆಪ್ಸಿಕೋ ಹಕ್ಕುಸ್ವಾಮ್ಯ ರದ್ದು

 ಬಂಗಾರಪೇಟೆ ಎಪಿಎಂಸಿ ಸೇರಿದಂತೆ ಜಿಲ್ಲೆಯ ಹಲವು ಎಪಿಎಂಸಿಗಳಲ್ಲಿ(APMC)  ಮೊದಲು ಒಂದುವರೆ ಸಾವಿರ ಇದ್ದ ಬಿತ್ತನೆ ಆಲೂಗೆಡ್ಡೆ ಬೆಲೆ  ಐದು ಸಾವಿರಕ್ಕೇರಿದೆ. ಜಿಲ್ಲೆಯಲ್ಲಿ ಆಲೂಗಡ್ಡೆ ಬಿತ್ತನೆ ಮಾಡಲು ಒಂದಷ್ಟು ಉತ್ತಮ ವಾತಾವರಣ ಇರುವ ಪರಿಣಾಮ, ಹಲವು ಜನ ರೈತರು ಆಲೂಗಡ್ಡೆ ಬಿತ್ತನೆ ಮಾಡಲು ಮುಂದಾಗಿದ್ದು, ಇತ್ತ ಬೆಲೆ ಕೈಗೆಟುಕದಂತಾಗಿದೆ.   ಆಲೂಗೆಡ್ಡೆ ವ್ಯಾಪಾರಿಗಳು ಹಾಗೂ ದಳ್ಳಾಳಿಗಳು ರೈತರ ಪರಿಸ್ಥಿತಿಯನ್ನು ದುರುಪಯೋಗ ಮಾಡಿಕೊಂಡು ದುಪ್ಪಟ್ಟು ಹಣ ಪಡೆಯುತ್ತಿದ್ದಾರೆ. ಇದರಿಂದ  ಜಿಲ್ಲಾಡಳಿತ ಬಿತ್ತನೆ ಆಲೂಗಡ್ಡೆಗೆ ದರ ನಿಗದಿ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more