Seeds Price Rise  :   ಬಿತ್ತನೆ ಆಲೂಗಡ್ಡೆ ಬೆಲೆ ಗಗನಕ್ಕೆ - ರೈತರು ಕಂಗಾಲು

Seeds Price Rise : ಬಿತ್ತನೆ ಆಲೂಗಡ್ಡೆ ಬೆಲೆ ಗಗನಕ್ಕೆ - ರೈತರು ಕಂಗಾಲು

Suvarna News   | Asianet News
Published : Dec 24, 2021, 03:53 PM IST

ನೂರಾರು ಚೀಲಗಳಲ್ಲಿ ತುಂಬಿಸಿಟ್ಟಿರುವ ಬಿತ್ತನೆ ಬೀಜದ ಆಲೂಗಡ್ಡೆ ಬೆಲೆ ಗಗನಕ್ಕೇರಿದ್ದು, ರೈತರು ಕಂಗಾಲಾಗಿದ್ದಾರೆ.  ಜಿಲ್ಲೆಯಲ್ಲಿ ಸುರಿದ ಬಾರೀ ಮಳೆಯಿಂದ ರೈತರು ಬೆಳೆದ ಬೆಳೆಗಳೆಲ್ಲಾ ಮಣ್ಣುಪಾಲಾಗಿ ಹೋಗಿದೆ. ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಿದ್ದ ಬೆಳೆಗಳೆಲ್ಲಾ ನೀರಿನಲ್ಲಿ ಕೊಚ್ಚಿ ಹೋಗಿದೆ. ಈಗಾಗಲೇ ನಷ್ಟದಲ್ಲಿರುವ ಜಿಲ್ಲೆಯ ರೈತರು ಸದ್ಯ ಹೊಸದಾಗಿ ಬೆಳೆಗಳನ್ನು ಬೆಳೆಯುವ ಬಗ್ಗೆ ಚಿಂತನೆ ನಡೆಸುವಷ್ಟರಲ್ಲೇ ರೈತರಿಗೆ ಮತ್ತೊಂದು ಆಘಾತ ಎದುರಾದಂತಾಗಿದೆ

ಕೋಲಾರ(ಡಿ.24):  ಬಿತ್ತನೆ ಬೀಜದ ಆಲೂಗಡ್ಡೆ (Potato) ಬೆಲೆ ಗಗನಕ್ಕೇರಿದ್ದು, ರೈತರು (Farmers) ಕಂಗಾಲಾಗಿದ್ದಾರೆ.  ಜಿಲ್ಲೆಯಲ್ಲಿ ಸುರಿದ ಬಾರೀ ಮಳೆಯಿಂದ  ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಿದ್ದ ಬೆಳೆಗಳೆಲ್ಲಾ ನೀರಿನಲ್ಲಿ ಕೊಚ್ಚಿ ಹೋಗಿದೆ. ಈಗಾಗಲೇ ನಷ್ಟದಲ್ಲಿರುವ ಜಿಲ್ಲೆಯ ರೈತರು ಸದ್ಯ ಹೊಸದಾಗಿ ಬೆಳೆಗಳನ್ನು ಬೆಳೆಯುವ ಬಗ್ಗೆ ಚಿಂತನೆ ನಡೆಸುವಷ್ಟರಲ್ಲೇ ರೈತರಿಗೆ ಮತ್ತೊಂದು ಆಘಾತ ಎದುರಾಗಿದ್ದು, ಬಿತ್ತನೆ ಆಲೂಗಡ್ಡೆಯ ಬೆಲೆ ಗಗನಕ್ಕೇರಿದೆ. 

PepsiCo India: ವಿಶೇಷ ತಳಿ ಆಲೂಗಡ್ಡೆ ಮೇಲಿನ ಪೆಪ್ಸಿಕೋ ಹಕ್ಕುಸ್ವಾಮ್ಯ ರದ್ದು

 ಬಂಗಾರಪೇಟೆ ಎಪಿಎಂಸಿ ಸೇರಿದಂತೆ ಜಿಲ್ಲೆಯ ಹಲವು ಎಪಿಎಂಸಿಗಳಲ್ಲಿ(APMC)  ಮೊದಲು ಒಂದುವರೆ ಸಾವಿರ ಇದ್ದ ಬಿತ್ತನೆ ಆಲೂಗೆಡ್ಡೆ ಬೆಲೆ  ಐದು ಸಾವಿರಕ್ಕೇರಿದೆ. ಜಿಲ್ಲೆಯಲ್ಲಿ ಆಲೂಗಡ್ಡೆ ಬಿತ್ತನೆ ಮಾಡಲು ಒಂದಷ್ಟು ಉತ್ತಮ ವಾತಾವರಣ ಇರುವ ಪರಿಣಾಮ, ಹಲವು ಜನ ರೈತರು ಆಲೂಗಡ್ಡೆ ಬಿತ್ತನೆ ಮಾಡಲು ಮುಂದಾಗಿದ್ದು, ಇತ್ತ ಬೆಲೆ ಕೈಗೆಟುಕದಂತಾಗಿದೆ.   ಆಲೂಗೆಡ್ಡೆ ವ್ಯಾಪಾರಿಗಳು ಹಾಗೂ ದಳ್ಳಾಳಿಗಳು ರೈತರ ಪರಿಸ್ಥಿತಿಯನ್ನು ದುರುಪಯೋಗ ಮಾಡಿಕೊಂಡು ದುಪ್ಪಟ್ಟು ಹಣ ಪಡೆಯುತ್ತಿದ್ದಾರೆ. ಇದರಿಂದ  ಜಿಲ್ಲಾಡಳಿತ ಬಿತ್ತನೆ ಆಲೂಗಡ್ಡೆಗೆ ದರ ನಿಗದಿ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more