ಪ್ರಸಿದ್ಧ ಸಿಗಂದೂರು ದೇವಾಲಯದಲ್ಲಿ ಅರ್ಚಕರ ಗಲಾಟೆ: ಪೊಲೀಸ್ ಎಂಟ್ರಿ..!

Oct 16, 2020, 6:54 PM IST

ಶಿವಮೊಗ್ಗ, (ಅ.16): ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ಭಕ್ತರು ಮತ್ತು ಅರ್ಚಕರ ನಡುವೆ ಗದ್ದಲ, ಗಲಾಟೆ ನಡೆದಿದೆ. ಪೊಲೀಸರು ದೇವಾಲಯಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಪಾಕ್‌ನಲ್ಲಿ 'ಸ್ವರ್ಗ' ಕಂಡ ರಾಹುಲ್, ರಾಧಿಕಾ ವೀಡಿಯೋ ವೈರಲ್: ಅ.16ರ ಟಾಪ್ 10 ಸುದ್ದಿ!

ದೇವಾಲಯದ ಪ್ರಧಾನ ಅರ್ಚಕ ಶೇಷಗಿರಿ ಭಟ್ ಮತ್ತು ಭಕ್ತರ ನಡುವೆ ಗದ್ದಲ ನಡೆದಿದೆ. ಕಚೇರಿಯ ಪಿಠೋಪಕರಣಗಳಿಗೆ ಹಾನಿ ಮಾಡಲಾಗಿದೆ. ಇದು ದೇವಾಲಯದ ಆಡಳಿತ ಮಂಡಳಿ ಮತ್ತು ಅರ್ಚಕರ ನಡುವಿನ ಶೀತಲ ಸಮರದ ಮುಂದವರೆದ ಭಾಗ ಎಂದು ತಿಳಿದುಬಂದಿದೆ.