ಜನರನ್ನು ಆಕರ್ಷಿಸುತ್ತಿದೆ ವಿನೂತನ ಶಿಲೋದ್ಯಾನ..ಜಿಲ್ಲಾಡಳಿತದಿಂದ ವೀರಗಲ್ಲುಗಳ ರಕ್ಷಣಾ ಕಾರ್ಯ

ಜನರನ್ನು ಆಕರ್ಷಿಸುತ್ತಿದೆ ವಿನೂತನ ಶಿಲೋದ್ಯಾನ..ಜಿಲ್ಲಾಡಳಿತದಿಂದ ವೀರಗಲ್ಲುಗಳ ರಕ್ಷಣಾ ಕಾರ್ಯ

Published : Nov 27, 2023, 11:04 AM IST

ಆಧುನಿಕತೆ ಭರಾಟೆಯಲ್ಲಿ ಇತಿಹಾಸದ ಕುರುಹುಗಳು ಕಣ್ಮರೆಯಾಗುತ್ತಿವೆ. ಆದ್ರೆ ಕೋಲಾರ ಜಿಲ್ಲಾಡಳಿತ ಮಾತ್ರ ಶತ್ರುಗಳ ವಿರುದ್ಧ ಹೋರಾಡಿ ವೀರಮರಣವನ್ನಪ್ಪಿದವರನ್ನು ಜನರ ಮನಸ್ಸಲ್ಲಿ ಜೀವಂತವಾಗಿಡುವ ಕೆಲಸಕ್ಕೆ ಮುಂದಾಗಿದೆ. ಕೋಲಾರ ಜಿಲ್ಲೆಯಲ್ಲಿ ನಿರ್ಮಾಣವಾಗಿರುವ ವೀರಗಲ್ಲುಗಳ ಪಾರ್ಕ್ ಜನರ ಗಮನ ಸೆಳೆಯುತ್ತಿದೆ.

ಆಂಧ್ರ, ತಮಿಳುನಾಡಿಗೆ ಹೊಂದಿಕೊಂಡಿರುವ ಕೋಲಾರ ಜಿಲ್ಲೆಗೆ ಪ್ರಾಚೀನ ಇತಿಹಾಸವಿದೆ. ಕೋಲಾರ(Kolar) ಜಿಲ್ಲೆಯಲ್ಲಿ ಪಾಳೇಗಾರರು, ಸಾಮಂತ ರಾಜರುಗಳು ಆಳಿದ ಕುರುಹುಗಳಿವೆ. ವೀರ ಮರಣ ಹೊಂದಿದವರ ಸ್ಮರಣಾರ್ಥ ಸ್ಥಾಪಿಸಿದ ವೀರಗಲ್ಲುಗಳು(Veeragallus) ಚರಿತ್ರೆ ನೆನಪಿಸುತ್ತಿವೆ. ಇದು ಕೋಲಾರದ ಅರಾಬಿಕೊತ್ತನೂರು ಗ್ರಾಮ. ಬೃಹದಾಕಾರವಾದ ಬೆಟ್ಟಗಳ ಸಾಲಿಂದ ಆವೃತವಾಗಿರುವ ಈ ಗ್ರಾಮವನ್ನು ಹಿಂದೆ ಅನೇಕ ಪಾಳೇಗಾರರು ಆಳಿದ ಇತಿಹಾಸವಿದೆ. ಅಲ್ಲದೆ ಊರಿನ ಮೇಲೆ ಆಕ್ರಮಣಗೈದವರ ವಿರುದ್ಧ ಹೋರಾಡಿ ವೀರ ಮರಣವನ್ನಪ್ಪಿದವರ ಸಾಹಸಗಾಥೆಗಳು ಕಲ್ಲು ಕಲ್ಲಿನಲ್ಲೂ ಅಜರಾಮರವಾಗಿ ಉಳಿದಿವೆ. ಈಗ ಎಲ್ಲೆಂದರಲ್ಲಿ ಅನಾಥವಾಗಿ ಬಿದ್ದಿದ್ದ ವೀರಗಲ್ಲುಗಳಿಗೆ ಗೌರವ ನೀಡುವ ಕೆಲಸಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಊರಿನಲ್ಲಿ ಶಿಲೋದ್ಯಾನ ನಿರ್ಮಿಸಿ, ವೀರಗಲ್ಲುಗಳನ್ನು ಸಂರಕ್ಷಿಸಲು ಟೊಂಕಕಟ್ಟಿ ನಿಂತಿದೆ. ಸದ್ಯ ಅರಾಬಿಕೊತ್ತನೂರು ಗ್ರಾಮದಲ್ಲಿ ನಿರ್ಮಿಸಿರುವ ಶಿಲೋದ್ಯಾನದಲ್ಲಿ ಹತ್ತಕ್ಕೂ ಹೆಚ್ಚು ವೀರಗಲ್ಲು ಮತ್ತು ಮಾಸ್ತಿಗಲ್ಲುಗಳಿವೆ. ಇವುಗಳ ಜೊತೆಗೆ ಹಿಂದಿನವರು ಬಳಸುತ್ತಿದ್ದ ಕಲ್ಲಿನ ಗಾಣ, ಚಿರತೆ ಸೆರೆ ಹಿಡಿಯಲು ಬಳಸುತ್ತಿದ್ದ ಬೋನನ್ನೂ ಇಡಲಾಗಿದೆ. ವೀರಗಲ್ಲುಗಳ ಶಿಲೋದ್ಯಾನದ ಮಾದರಿಯನ್ನು ಮೈಸೂರು ದಸರಾ ಮೆರವಣಿಗೆಯಲ್ಲೂ ಸ್ತಬ್ಧಚಿತ್ರವಾಗಿ ಪ್ರದರ್ಶಿಸಲಾಗಿದ್ದು, ಜನ ಮೆಚ್ಚುಗೆಪಡೆದುಕೊಂಡಿದೆ. ಇದರಿಂದ ಪ್ರೇರಣೆಗೊಂಡ ಕೋಲಾರ ಜಿಲ್ಲಾಡಳಿತ ಕೋಲಾರದಾದ್ಯಂತ ಇರುವ ವೀರಗಲ್ಲುಗಳನ್ನು ಸಂರಕ್ಷಣೆ ಮಾಡಲು ಪಣ ತೊಟ್ಟಿದೆ.  ಎಲ್ಲಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ದೊರೆಯುವ ವೀರಗಲ್ಲುಗಳನ್ನು ಸಂಗ್ರಹಿಸಲು ಜಿಲ್ಲಾಡಳಿತ ಮುಂದಾಗಿದೆ. 

ಇದನ್ನೂ ವೀಕ್ಷಿಸಿ:  ಶಿಥಿಲಾವಸ್ಥೆ ತಲುಪಿದ ಚಿಕ್ಕಮಗಳೂರಿನ ಹಳೆಯ ಸೇತುವೆ..ಭಯದಿಂದಲೇ ವಾಹನ ಸವಾರರ ಸಂಚಾರ

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more