ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ  ಶಿಷ್ಯ ಸ್ವೀಕಾರ ಮಹೋತ್ಸವ: ಸ್ವರ್ಣವಲ್ಲಿ ನೂತನ ಯತಿಗಳಿಗೆ ಸನ್ಯಾಸ ದೀಕ್ಷೆ

ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಶಿಷ್ಯ ಸ್ವೀಕಾರ ಮಹೋತ್ಸವ: ಸ್ವರ್ಣವಲ್ಲಿ ನೂತನ ಯತಿಗಳಿಗೆ ಸನ್ಯಾಸ ದೀಕ್ಷೆ

Published : Feb 23, 2024, 12:28 PM ISTUpdated : Feb 23, 2024, 12:29 PM IST

ಉತ್ತರಕನ್ನಡ ಜಿಲ್ಲೆಯ ಶಿರಸಿಯ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ  ಶಿಷ್ಯ ಸ್ವೀಕಾರ ಮಹೋತ್ಸವ ಕಾರ್ಯಕ್ರಮ ಸಂಭ್ರಮದಿಂದ ನೆರವೇರಿತು. 
 

ಉತ್ತರಕನ್ನಡ ಜಿಲ್ಲೆಯ ಶಿರಸಿ(Sirsi) ತಾಲೂಕಿನ ಸೋಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನದಲ್ಲಿ(Swarnavalli Mahasansthan) ಶಿಷ್ಯ ಸ್ವೀಕಾರ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. 55ನೇ ಯತಿಗಳಾಗಿ‌ ಬ್ರಹ್ಮಚಾರಿ ವಿದ್ವಾನ್ ನಾಗರಾಜ್ ಭಟ್ಟ ಗಂಗೆಮನೆ ಸನ್ಯಾಸ ಗ್ರಹಣ‌ ಮಾಡಿದರು. ಸ್ವರ್ಣವಲ್ಲೀ ಮಠದ  ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಗಂಗಾಧರೇಂದ್ರ ಸರಸ್ವತೀ‌ ಮಹಾ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ವಿವಿಧ ಧಾರ್ಮಿಕ ಹಾಗೂ ಸನ್ಯಾಸ ಗ್ರಹಣದ ವಿಧಿ ವಿಧಾನಗಳು ನಡೆದವು. ಮಠದಿಂದ ಸುಮಾರು ಒಂದು‌ ಕಿಲೋ ಮೀಟರ್ ದೂರದ ಶಾಲ್ಮಲಾ‌ ನದಿಯ ಬಳಿ ಸನ್ಯಾಸ ದೀಕ್ಷೆ ನೀಡುವ ಕಾರ್ಯಕ್ರಮ ನಡೆಯಿತು. ಸ್ವರ್ಣವಲ್ಲೀ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ನೂತನ ಯತಿಗೆ  ಕಾಷಾಯ ವಸ್ತ್ರ ನೀಡಿದರು. ಬಳಿಕ ಶಂಖ ಸ್ನಾನ, ಪ್ರಣವ ಮಹಾ ವಾಕ್ಯೋಪದೇಶ ನೀಡಿ ನೂತನ ಶ್ರೀಗಳಿಗೆ ಶ್ರೀಆನಂದ ಬೋಧೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ಎಂದು ಸ್ವರ್ಣವಲ್ಲೀ ಶ್ರೀಗಳು ನಾಮಕರಣ‌ ಮಾಡಿದರು.ಕಾರ್ಯಕ್ರಮದಲ್ಲಿ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಮತ್ತು ಕಿರಿಯ ಸ್ವಾಮೀಜಿ ಆನಂದ ಬೋಧೇಂದ್ರ ಸರಸ್ವತಿ ಸ್ವಾಮೀಜಿ ಆಶಿರ್ವಚನ ನೀಡಿದರು. ವಿವಿಧ ಮಠದ ಸ್ವಾಮೀಜಿಗಳು, ಮುವತ್ತು ಸಾವಿರಕ್ಕೂ ಹೆಚ್ಚು ಭಕ್ತರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. 

ಇದನ್ನೂ ವೀಕ್ಷಿಸಿ:  Rajamouli- Mahesh Babu: ನಟ ಮಹೇಶ್‌ ಬಾಬುಗೆ ಖಡಕ್‌ ಸೂಚನೆ ಕೊಟ್ಟ ರಾಜಮೌಳಿ: ಏನದು ಗೊತ್ತಾ ?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more