ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ  ಶಿಷ್ಯ ಸ್ವೀಕಾರ ಮಹೋತ್ಸವ: ಸ್ವರ್ಣವಲ್ಲಿ ನೂತನ ಯತಿಗಳಿಗೆ ಸನ್ಯಾಸ ದೀಕ್ಷೆ

ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಶಿಷ್ಯ ಸ್ವೀಕಾರ ಮಹೋತ್ಸವ: ಸ್ವರ್ಣವಲ್ಲಿ ನೂತನ ಯತಿಗಳಿಗೆ ಸನ್ಯಾಸ ದೀಕ್ಷೆ

Published : Feb 23, 2024, 12:28 PM ISTUpdated : Feb 23, 2024, 12:29 PM IST

ಉತ್ತರಕನ್ನಡ ಜಿಲ್ಲೆಯ ಶಿರಸಿಯ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ  ಶಿಷ್ಯ ಸ್ವೀಕಾರ ಮಹೋತ್ಸವ ಕಾರ್ಯಕ್ರಮ ಸಂಭ್ರಮದಿಂದ ನೆರವೇರಿತು. 
 

ಉತ್ತರಕನ್ನಡ ಜಿಲ್ಲೆಯ ಶಿರಸಿ(Sirsi) ತಾಲೂಕಿನ ಸೋಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನದಲ್ಲಿ(Swarnavalli Mahasansthan) ಶಿಷ್ಯ ಸ್ವೀಕಾರ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. 55ನೇ ಯತಿಗಳಾಗಿ‌ ಬ್ರಹ್ಮಚಾರಿ ವಿದ್ವಾನ್ ನಾಗರಾಜ್ ಭಟ್ಟ ಗಂಗೆಮನೆ ಸನ್ಯಾಸ ಗ್ರಹಣ‌ ಮಾಡಿದರು. ಸ್ವರ್ಣವಲ್ಲೀ ಮಠದ  ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಗಂಗಾಧರೇಂದ್ರ ಸರಸ್ವತೀ‌ ಮಹಾ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ವಿವಿಧ ಧಾರ್ಮಿಕ ಹಾಗೂ ಸನ್ಯಾಸ ಗ್ರಹಣದ ವಿಧಿ ವಿಧಾನಗಳು ನಡೆದವು. ಮಠದಿಂದ ಸುಮಾರು ಒಂದು‌ ಕಿಲೋ ಮೀಟರ್ ದೂರದ ಶಾಲ್ಮಲಾ‌ ನದಿಯ ಬಳಿ ಸನ್ಯಾಸ ದೀಕ್ಷೆ ನೀಡುವ ಕಾರ್ಯಕ್ರಮ ನಡೆಯಿತು. ಸ್ವರ್ಣವಲ್ಲೀ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ನೂತನ ಯತಿಗೆ  ಕಾಷಾಯ ವಸ್ತ್ರ ನೀಡಿದರು. ಬಳಿಕ ಶಂಖ ಸ್ನಾನ, ಪ್ರಣವ ಮಹಾ ವಾಕ್ಯೋಪದೇಶ ನೀಡಿ ನೂತನ ಶ್ರೀಗಳಿಗೆ ಶ್ರೀಆನಂದ ಬೋಧೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ಎಂದು ಸ್ವರ್ಣವಲ್ಲೀ ಶ್ರೀಗಳು ನಾಮಕರಣ‌ ಮಾಡಿದರು.ಕಾರ್ಯಕ್ರಮದಲ್ಲಿ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಮತ್ತು ಕಿರಿಯ ಸ್ವಾಮೀಜಿ ಆನಂದ ಬೋಧೇಂದ್ರ ಸರಸ್ವತಿ ಸ್ವಾಮೀಜಿ ಆಶಿರ್ವಚನ ನೀಡಿದರು. ವಿವಿಧ ಮಠದ ಸ್ವಾಮೀಜಿಗಳು, ಮುವತ್ತು ಸಾವಿರಕ್ಕೂ ಹೆಚ್ಚು ಭಕ್ತರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. 

ಇದನ್ನೂ ವೀಕ್ಷಿಸಿ:  Rajamouli- Mahesh Babu: ನಟ ಮಹೇಶ್‌ ಬಾಬುಗೆ ಖಡಕ್‌ ಸೂಚನೆ ಕೊಟ್ಟ ರಾಜಮೌಳಿ: ಏನದು ಗೊತ್ತಾ ?

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more