ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ  ಶಿಷ್ಯ ಸ್ವೀಕಾರ ಮಹೋತ್ಸವ: ಸ್ವರ್ಣವಲ್ಲಿ ನೂತನ ಯತಿಗಳಿಗೆ ಸನ್ಯಾಸ ದೀಕ್ಷೆ

ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಶಿಷ್ಯ ಸ್ವೀಕಾರ ಮಹೋತ್ಸವ: ಸ್ವರ್ಣವಲ್ಲಿ ನೂತನ ಯತಿಗಳಿಗೆ ಸನ್ಯಾಸ ದೀಕ್ಷೆ

Published : Feb 23, 2024, 12:28 PM ISTUpdated : Feb 23, 2024, 12:29 PM IST

ಉತ್ತರಕನ್ನಡ ಜಿಲ್ಲೆಯ ಶಿರಸಿಯ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ  ಶಿಷ್ಯ ಸ್ವೀಕಾರ ಮಹೋತ್ಸವ ಕಾರ್ಯಕ್ರಮ ಸಂಭ್ರಮದಿಂದ ನೆರವೇರಿತು. 
 

ಉತ್ತರಕನ್ನಡ ಜಿಲ್ಲೆಯ ಶಿರಸಿ(Sirsi) ತಾಲೂಕಿನ ಸೋಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನದಲ್ಲಿ(Swarnavalli Mahasansthan) ಶಿಷ್ಯ ಸ್ವೀಕಾರ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. 55ನೇ ಯತಿಗಳಾಗಿ‌ ಬ್ರಹ್ಮಚಾರಿ ವಿದ್ವಾನ್ ನಾಗರಾಜ್ ಭಟ್ಟ ಗಂಗೆಮನೆ ಸನ್ಯಾಸ ಗ್ರಹಣ‌ ಮಾಡಿದರು. ಸ್ವರ್ಣವಲ್ಲೀ ಮಠದ  ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಗಂಗಾಧರೇಂದ್ರ ಸರಸ್ವತೀ‌ ಮಹಾ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ವಿವಿಧ ಧಾರ್ಮಿಕ ಹಾಗೂ ಸನ್ಯಾಸ ಗ್ರಹಣದ ವಿಧಿ ವಿಧಾನಗಳು ನಡೆದವು. ಮಠದಿಂದ ಸುಮಾರು ಒಂದು‌ ಕಿಲೋ ಮೀಟರ್ ದೂರದ ಶಾಲ್ಮಲಾ‌ ನದಿಯ ಬಳಿ ಸನ್ಯಾಸ ದೀಕ್ಷೆ ನೀಡುವ ಕಾರ್ಯಕ್ರಮ ನಡೆಯಿತು. ಸ್ವರ್ಣವಲ್ಲೀ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ನೂತನ ಯತಿಗೆ  ಕಾಷಾಯ ವಸ್ತ್ರ ನೀಡಿದರು. ಬಳಿಕ ಶಂಖ ಸ್ನಾನ, ಪ್ರಣವ ಮಹಾ ವಾಕ್ಯೋಪದೇಶ ನೀಡಿ ನೂತನ ಶ್ರೀಗಳಿಗೆ ಶ್ರೀಆನಂದ ಬೋಧೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ಎಂದು ಸ್ವರ್ಣವಲ್ಲೀ ಶ್ರೀಗಳು ನಾಮಕರಣ‌ ಮಾಡಿದರು.ಕಾರ್ಯಕ್ರಮದಲ್ಲಿ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಮತ್ತು ಕಿರಿಯ ಸ್ವಾಮೀಜಿ ಆನಂದ ಬೋಧೇಂದ್ರ ಸರಸ್ವತಿ ಸ್ವಾಮೀಜಿ ಆಶಿರ್ವಚನ ನೀಡಿದರು. ವಿವಿಧ ಮಠದ ಸ್ವಾಮೀಜಿಗಳು, ಮುವತ್ತು ಸಾವಿರಕ್ಕೂ ಹೆಚ್ಚು ಭಕ್ತರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. 

ಇದನ್ನೂ ವೀಕ್ಷಿಸಿ:  Rajamouli- Mahesh Babu: ನಟ ಮಹೇಶ್‌ ಬಾಬುಗೆ ಖಡಕ್‌ ಸೂಚನೆ ಕೊಟ್ಟ ರಾಜಮೌಳಿ: ಏನದು ಗೊತ್ತಾ ?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more