ಹಗರಣ Vs ಹಗರಣ..ಕೈ-ಕಮಲ ನಾಯಕರ ಮರ್ಮಯುದ್ಧ! "ಸಿಎಂ ಮುಖವಾಡ ಕಳಚಿ ಬಿದ್ದಿದೆ" ಎಂದ ಅಶೋಕ್..!

ಹಗರಣ Vs ಹಗರಣ..ಕೈ-ಕಮಲ ನಾಯಕರ ಮರ್ಮಯುದ್ಧ! "ಸಿಎಂ ಮುಖವಾಡ ಕಳಚಿ ಬಿದ್ದಿದೆ" ಎಂದ ಅಶೋಕ್..!

Published : Jul 21, 2024, 05:36 PM IST

ಹಗರಣಕ್ಕೆ ಹಗರಣದಿಂದಲೇ ಉತ್ತರ ಕೊಟ್ಟ ಸಿದ್ದರಾಮಯ್ಯ..!
'ತಂತ್ರ'ರಾಮಯ್ಯನ ಚಾಣಾಕ್ಷ ತಂತ್ರಕ್ಕೆ ಬಿಜೆಪಿ ತಿರುಮಂತ್ರ..!
ರಾಜಕೀಯ ರಣರಂಗದಲ್ಲಿ ಸೇರಿಗೆ ಸವ್ವಾ ಸೇರು ರಾಜಕಾರಣ..!

ಹಗರಣ Vs ಹಗರಣ.. ಒಬ್ಬರದ್ದು ಅಸ್ತ್ರ, ಇನ್ನೊಬ್ಬರದ್ದು ಪ್ರತ್ಯಸ್ತ್ರ. ನೀವು ಭ್ರಷ್ಟರು ಅಂತ ಒಬ್ರು, ನೀವು ಪರಮಭ್ರಷ್ಟರು ಅಂತ ಇನ್ನೊಬ್ರು. ಬಿಜೆಪಿ (BJP) ಆರಂಭಿಸಿದ್ದ ವಾಲ್ಮೀಕಿ ಯುದ್ಧದಲ್ಲಿ 21 ಅಸ್ತ್ರಗಳನ್ನ ಪ್ರಯೋಗಿಸಿದರು ಸಿಎಂ ಸಿದ್ದರಾಮಯ್ಯ(Siddaramaiah). ಕಾಂಗ್ರೆಸ್ (Congress)ಕೌಂಟರ್"ಗೆ ಕೇಸರಿ ಟಕ್ಕರ್. ಏನ್ ನಮ್ಮನ್ನ ಹೆದರಿಸ್ತಾ ಇದ್ದೀರಾ ಅಂತ ಅಬ್ಬರಿಸಿದ್ರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ. ಇದು ಆಡಳಿತ ಪಕ್ಷ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ಮಧ್ಯೆ ಶುರುವಾಗಿರೋ ಸೇರಿಗೆ ಸವ್ವಾ ಸೇರು ರಾಜಕಾರಣ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki corporation scam) 187 ಕೋಟಿಗಳ ಅಕ್ರಮ ರಾಜ್ಯ ಸರ್ಕಾರಕ್ಕೆ ಮಗ್ಗುಲ ಮುಳ್ಳಾಗಿರೋ ವಿಷ್ಯ ನಿಮ್ಗೆ ಗೊತ್ತೇ ಇದೆ. ಈ ಹಗರಣ ಸಿದ್ದರಾಮಯ್ಯ ಸರ್ಕಾರಕ್ಕೆ ತಂದಿಟ್ಟಿರೋ ತಲೆನೋವು ಅಷ್ಟಿಷ್ಟಲ್ಲ. ವಿಧಾನಸಭಾ ಅಧಿವೇಶನದ (Assemblyin Session) ಮೊದಲ ವಾರ ಪೂರ್ತಿ ವಾಲ್ಮೀಕಿ ನಿಗಮದ ಅಕ್ರಮಕ್ಕೆ ಆಹುತಿಯಾಗಿದೆ. 187 ಕೋಟಿಗಳ ಅಕ್ರಮವನ್ನೇ ಅಸ್ತ್ರ ಮಾಡಿತೊಂಡಿರುವ ಪ್ರತಿಪಕ್ಷ ಬಿಜೆಪಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿ ಬಿದ್ದಿದೆ. ವಾಲ್ಮೀಕಿ ನಿಗಮದ ಅಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಖವಾಡ ಕಳಚಿ ಬಿದ್ದಿದೆ ಅಂತಿದೆ ಬಿಜೆಪಿ. ನನ್ನ ಹೆಸರು ಹೇಳದೇ ಇದ್ರೆ ಬಿಜೆಪಿಯವ್ರಿಗೆ ತಿಂದದ್ದು ಜೀರ್ಣವಾಗಲ್ಲ ಅಂತಿದ್ದಾರೆ ಸಿದ್ದರಾಮಯ್ಯ. ಈ ಆರೋಪ-ಪ್ರತ್ಯಾರೋಪ, ಟಕ್ಕರ್-ಕೌಂಟರ್'ಗಷ್ಟೇ ಇದು ಸೀಮಿತವಾಗಿಲ್ಲ. ಸರ್ಕಾರದ ವಿರುದ್ಧ ವಾಲ್ಮೀಕಿ ಅಸ್ತ್ರ ಪ್ರಯೋಗಿಸಿರುವ ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ 21 ಅಸ್ತ್ರಗಳನ್ನು ಪ್ರಯೋಗಿಸಿ ಹೊಸ ಯುದ್ಧ ಶುರು ಮಾಡಿದ್ದಾರೆ. ಇದು ಸಿದ್ದರಾಮಯ್ಯನವರು ಹೆಣೆದಿರೋ "ಮುಳ್ಳನ್ನು ಮುಳ್ಳಿನಿಂದಲೇ ತೆಗೆಯುವ ವ್ಯೂಹ". ವಿಧಾನಸಭಾ ಅಧಿವೇಶದಲ್ಲಿ ಪ್ರತಿಪಕ್ಷ ಬಿಜೆಪಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಲ್ಮೀಕಿ ಅಸ್ತ್ರ ಝಳಪಿಸುತ್ತಿದ್ದಂತೆ ಸಿದ್ದರಾಮಯ್ಯ ಹಳೇ ಹಗರಣಗಳನ್ನು ಕೆದಕಿದ್ದಾರೆ. ಕಳೆದ ಬಿಜೆಪಿ ಸರ್ಕಾರದಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣಗಳನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ. ಅದೂ ಒಂದಲ್ಲ, ಎರಡಲ್ಲ, 21 ಹಗರಣಗಳು.

ಇದನ್ನೂ ವೀಕ್ಷಿಸಿ:  Yadgir Crime News: ಮದುವೆಯಾಗಿ ಒಂದು ವರ್ಷಕ್ಕೆ ಅವಳು ಬೇಡವಾದಳು..ಇಡೀ ಕುಟುಂಬವನ್ನೇ ಕೊಂದು ಶವವನ್ನು ಎಸೆದರು!

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more