ಧನಂಜಯ್ ಸರ್ಜಿಯಿಂದ ಸರ್ಕಾರ ರಚನೆಯಾಗಲ್ಲ ಎಂದಿದ್ದ ರಘುಪತಿ ಭಟ್! ತಿರುಗೇಟು ನೀಡಿದ ಅಭ್ಯರ್ಥಿ

ಧನಂಜಯ್ ಸರ್ಜಿಯಿಂದ ಸರ್ಕಾರ ರಚನೆಯಾಗಲ್ಲ ಎಂದಿದ್ದ ರಘುಪತಿ ಭಟ್! ತಿರುಗೇಟು ನೀಡಿದ ಅಭ್ಯರ್ಥಿ

Published : May 28, 2024, 06:11 PM ISTUpdated : May 28, 2024, 06:12 PM IST

ಧನಂಜಯ್ ಸರ್ಜಿಯಿಂದ ಸರ್ಕಾರ ರಚನೆಯಾಗಲ್ಲ, ಹೀಗಾಗಿ ಅವರ ಸೋಲಿನಿಂದ ಬಿಜೆಪಿಗೆ ನಷ್ಟವಿಲ್ಲ ಎಂದಿದ್ದ ರಘುಪತಿ ಭಟ್ ಹೇಳಿಕೆಗೆ ಧನಂಜಯ ಸರ್ಜಿ ತಿರುಗೇಟು ನೀಡಿದ್ದಾರೆ. ಭಾರತೀತ ಜನತಾ ಪಾರ್ಟಿ ನಿಂತಿರೋದು ಕಾರ್ಯಕರ್ತರ ಬಲದಿಂದ ಎಂದು ಹರಿಹಾಯ್ದಿದ್ದಾರೆ. 
 

ವಿಧಾನ ಪರಿಷತ್‌ ಚುನಾವಣೆ (Legislative Council Elections) ಹಿನ್ನೆಲೆ ದಿನಕ್ಕೊಂದು ಬೆಳವಣಿಗೆ ಬಿಜೆಪಿಯಲ್ಲಿ ಆಗುತ್ತಿದೆ. ಈ ನಡುವೆ ಧನಂಜಯ್ ಸರ್ಜಿಯಿಂದ (Dhananjaya Sarji) ಸರ್ಕಾರ ರಚನೆಯಾಗಲ್ಲ, ಹೀಗಾಗಿ ಅವರ ಸೋಲಿನಿಂದ ಬಿಜೆಪಿಗೆ ನಷ್ಟವಿಲ್ಲ ಎಂದಿದ್ದ ರಘುಪತಿ ಭಟ್ (Raghupati Bhat) ಹೇಳಿಕೆಗೆ ಧನಂಜಯ ಸರ್ಜಿ ತಿರುಗೇಟು ನೀಡಿದ್ದಾರೆ. ಭಾರತೀತ ಜನತಾ ಪಾರ್ಟಿ ನಿಂತಿರೋದು ಕಾರ್ಯಕರ್ತರ ಬಲದಿಂದ, ರಘುಪತಿ ಭಟ್ ಒಳ್ಳೆಯ ಕೆಲಸ ಮಾಡಿದ್ದಾರೆ, ಅವರು ಕೂಡ ಮೂರು ಬಾರಿ ಶಾಸಕರಾಗಿದ್ದವರು, ಅವರ ಬಗ್ಗೆ ನಮಗೆ ಬಹಳ ಗೌರವವಿದೆ‌. ಆದರೆ ಭಾರತೀಯ ಜನತಾ ಪಾರ್ಟಿಗೆ ಇರೋದು ಒಬ್ಬರೆ ಅಭ್ಯರ್ಥಿ, ಸೂಕ್ತ ಅಭ್ಯರ್ಥಿಯನ್ನ ಸಂಘಟನೆಯ ಹಿರಿಯರು ಸೂಚಿಸಿದ್ದಾರೆ, ಸಾಮಾಜಿಕ, ಆರೋಗ್ಯ ಕ್ಷೇತ್ರದಲ್ಲಿ ದುಡಿದ ಒಳ್ಳೆಯ ಅಭ್ಯರ್ಥಿಯನ್ನ ನಿಲ್ಲಿಸಿದ್ದಾರೆ ಎಂದು ಹೇಳಿದ್ದಾರೆ. 

ಹಾಗೆಯೇ ಧನಂಜಯ ಸರ್ಜಿ ಬಿಜೆಪಿ(BJP) ಪಕ್ಷಕ್ಕೆ ಹೊಸಬನಲ್ಲ, 10 ನೇ ವಯಸ್ಸಿನಿಂದಲೇ ಸ್ವಯಂ ಸೇವಕನಾಗಿ ಕೆಲಸ ಮಾಡುತ್ತಿದ್ದೇನೆ,  ಈಗಲು ಸ್ವಯಂ ಸೇವಕ, ನನ್ನ ಜೀವ ಇರುವ ತನಕ ನಾನು ಸ್ವಯಂ ಸೇವಕ, ರಘುಪತಿ ಭಟ್‌ಗೆ ಮೂರು ಬಾರಿ ಎಂ.ಎಲ್.ಎ ಸೀಟ್ ಕೊಟ್ಟಿರೋದು ಬಿಜೆಪಿ, ಅದು ಅವರಿಗೆ ಗೊತ್ತಿರಲಿ. ಪಕ್ಷದ ಹಿರಿಯರ ತೀರ್ಮಾನ ಅಂತಿಮ‌, ಅದರಂತೆ ಚುನಾಚಣಾ ಕೆಲಸ ಆಗುತ್ತೆ‌, ಸರ್ಜಿ ಬಗ್ಗೆ ಮಾತನಾಡಲು ರಘುಪತಿ ಭಟ್ ಗೆ ಬೇರೆ ಏನು ವಿಚಾರ ಇಲ್ಲ ಎಂದು ಹರಿಹಾಯ್ದಿದ್ದಾರೆ. 

ಉಡುಪಿಯ ಮನೆಗೆ ಹೋದಾಗಲು ಸಹ ಸೌಜನ್ಯಕ್ಕೂ ಮನೆಯ ಒಳಗೆ ಕರೆದಿಲ್ಲ‌, ರಘುಪತಿ ಭಟ್ ಹೇಳ್ತಾರೆ ನಾನು ಕಾಂಗ್ರೆಸ್‌ನಿಂದ ಬಂದಿದ್ದೇನೆ ಅಂತ. ಆದರೆ. ಬಿಜೆಪಿ ಬರೋ ಮುಂಚಿತವಾಗಿ ಸಂಘಟನೆಯಲ್ಲಿ ಇದ್ದವನು ನಾನು, ಕಾಂಗ್ರೆಸ್ ನಿಂದ ಟಿಕೆಟ್ ನೀಡುತ್ತೇವೆ ಅಂತ ಬಹಳ ಒತ್ತಡ ಇತ್ತು, ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ ಯಾವುದಕ್ಕೂ ಮಣಿಯದೆ ಬಿಜೆಪಿಯಲ್ಲಿ ಇದ್ದೇನೆ‌. ಹೀಗಾಗಿ ರಘುಪತಿ ಭಟ್ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಬೆಂಗಳೂರಿನಲ್ಲಿ ಬಿಪಿಎಲ್‌ನಿಂದ ಹೊಸ ಘಟಕ ಸ್ಥಾಪನೆ: ಮೇಕ್‌ ಇನ್‌ ಇಂಡಿಯಾ ಅಭಿಯಾನದ ಭಾಗ!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!