ಡೋಂಟ್‌ ಕೇರ್..! ಕೊರೊನಾ ನಡುವೆಯೂ ಕರಿಯಪ್ಪ ‌ತಾತಾನ ಜಾತ್ರೆ!

ಡೋಂಟ್‌ ಕೇರ್..! ಕೊರೊನಾ ನಡುವೆಯೂ ಕರಿಯಪ್ಪ ‌ತಾತಾನ ಜಾತ್ರೆ!

Published : Aug 18, 2020, 11:45 AM ISTUpdated : Aug 18, 2020, 12:03 PM IST

ಭಕ್ತಿ, ಸಂಪ್ರದಾಯ, ಜಾತ್ರೆ ಅಂತ ಬಂದರೆ ನಮ್ಮ ಜನ ಯಾವುದಕ್ಕೂ ಕೇರ್ ಮಾಡುವುದಿಲ್ಲ. ಇದಕ್ಕೆ ಸಾಕ್ಷಿ ರಾಯಚೂರು ತಾಲೂಕಿನ ಕಲ್ಮಲ ಗ್ರಾಮದ ಕರಿಯಪ್ಪ ತಾತನ ಜಾತ್ರೆ. 

ಕಲ್ಮಲದ ಕರಿಯಪ್ಪ ತಾತನ ದೇವಾಲಯಕ್ಕೆ ಕೊರೊನಾ ಸೋಂಕು ಹರಡುವಿಕೆ ಭೀತಿಯನ್ನೂ ಮರೆತು ಸಾವಿರಾರು ಭಕ್ತರು ಆಗಮಿಸಿದ್ರು.  ದೇವಾಲಯಕ್ಕೆ ಪ್ರವೇಶ ನಿಷೇಧಿಸಿರುವುದರಿಂದ ದೇವಾಲಯದ ಹೊರಗಡೆ ಸಿಕ್ಕಸಿಕ್ಕಲ್ಲೆ ತೆಂಗಿನಕಾಯಿ ಹೊಡೆದು ಕೈ ಮುಗಿದು ಭಕ್ತರು ವಾಪಸ್ ಹೋಗುವುದು ಕಲ್ಮಲ ಗ್ರಾಮದಲ್ಲಿ ಕಂಡು ಬಂತು. 
 

ಬೆಂಗಳೂರು (ಆ. 18):  ಭಕ್ತಿ, ಸಂಪ್ರದಾಯ, ಜಾತ್ರೆ ಅಂತ ಬಂದರೆ ನಮ್ಮ ಜನ ಯಾವುದಕ್ಕೂ ಕೇರ್ ಮಾಡುವುದಿಲ್ಲ. ಇದಕ್ಕೆ ಸಾಕ್ಷಿ ರಾಯಚೂರು ತಾಲೂಕಿನ ಕಲ್ಮಲ ಗ್ರಾಮದ ಕರಿಯಪ್ಪ ತಾತನ ಜಾತ್ರೆ. 

ಕಲ್ಮಲದ ಕರಿಯಪ್ಪ ತಾತನ ದೇವಾಲಯಕ್ಕೆ ಕೊರೊನಾ ಸೋಂಕು ಹರಡುವಿಕೆ ಭೀತಿಯನ್ನೂ ಮರೆತು ಸಾವಿರಾರು ಭಕ್ತರು ಆಗಮಿಸಿದ್ರು.  ದೇವಾಲಯಕ್ಕೆ ಪ್ರವೇಶ ನಿಷೇಧಿಸಿರುವುದರಿಂದ ದೇವಾಲಯದ ಹೊರಗಡೆ ಸಿಕ್ಕಸಿಕ್ಕಲ್ಲೆ ತೆಂಗಿನಕಾಯಿ ಹೊಡೆದು ಕೈ ಮುಗಿದು ಭಕ್ತರು ವಾಪಸ್ ಹೋಗುವುದು ಕಲ್ಮಲ ಗ್ರಾಮದಲ್ಲಿ ಕಂಡು ಬಂತು. 

ಇನ್ನೂ ದೇವಾಲಯ ಬಳಿ ತೆಂಗಿನಕಾಯಿ ಮಾರಾಟಕ್ಕೆ ಅವಕಾಶ ನೀಡದ ಹಿನ್ನೆಲೆ ಕಲ್ಮಲದಿಂದ ರಾಯಚೂರು ಮಾರ್ಗದಲ್ಲಿ ಸುಮಾರು ಎರಡು ಕಿ.ಮೀವರೆಗೆ ರಸ್ತೆ ಪಕ್ಕ ಕುಳಿತು ನೂರಾರು ವ್ಯಾಪಾರಿಗಳು ತೆಂಗಿನಕಾಯಿ ಮಾರಾಟ ಮಾಡಿದ್ರು. ಇನ್ನೂ ದೇವಾಲಯ ಬಳಿ ಭಕ್ತರು ಗುಂಪು-ಗುಂಪಾಗಿ ಸೇರುತ್ತಿದ್ದು, ಸಾಮಾಜಿಕ ಅಂತರವನ್ನ ಮರೆತಿದ್ದರು.  

 ಪ್ರತೀ ವರ್ಷ ಕರಿಯಪ್ಪ ತಾತಾನ ಜಾತ್ರೆ ಅದ್ದೂರಿಯಿಂದ ನಡೆಯುತ್ತಿತ್ತು. ಒಂದು ತಿಂಗಳ ಕಾಲ ನಡೆಯುವ ಜಾತ್ರೆಯ ಮಹಾ ರಥೋತ್ಸವ ವೇಳೆ ಲಕ್ಷಾಂತರ ಜನ ಭಕ್ತರು ಭಾಗಿಯಾಗುತ್ತಿದ್ದರು. ಆದ್ರೆ ಈ ವರ್ಷ ಕೊರೊನಾ ಭೀತಿ ಸಂಭ್ರಮಕ್ಕೆ ತೆರೆ ಎಳೆದಿದೆ. ಜಿಲ್ಲಾಡಳಿತ ಜನ ಸೇರುವುದನ್ನ ನಿಷೇಧಿಸಿದ್ದರೂ ಭಕ್ತರ ದಂಡು ದೇವಾಲಯದ ಕಡೆ ಹರಿದು ಬಂದಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?