ಡೋಂಟ್‌ ಕೇರ್..! ಕೊರೊನಾ ನಡುವೆಯೂ ಕರಿಯಪ್ಪ ‌ತಾತಾನ ಜಾತ್ರೆ!

ಡೋಂಟ್‌ ಕೇರ್..! ಕೊರೊನಾ ನಡುವೆಯೂ ಕರಿಯಪ್ಪ ‌ತಾತಾನ ಜಾತ್ರೆ!

Published : Aug 18, 2020, 11:45 AM ISTUpdated : Aug 18, 2020, 12:03 PM IST

ಭಕ್ತಿ, ಸಂಪ್ರದಾಯ, ಜಾತ್ರೆ ಅಂತ ಬಂದರೆ ನಮ್ಮ ಜನ ಯಾವುದಕ್ಕೂ ಕೇರ್ ಮಾಡುವುದಿಲ್ಲ. ಇದಕ್ಕೆ ಸಾಕ್ಷಿ ರಾಯಚೂರು ತಾಲೂಕಿನ ಕಲ್ಮಲ ಗ್ರಾಮದ ಕರಿಯಪ್ಪ ತಾತನ ಜಾತ್ರೆ. 

ಕಲ್ಮಲದ ಕರಿಯಪ್ಪ ತಾತನ ದೇವಾಲಯಕ್ಕೆ ಕೊರೊನಾ ಸೋಂಕು ಹರಡುವಿಕೆ ಭೀತಿಯನ್ನೂ ಮರೆತು ಸಾವಿರಾರು ಭಕ್ತರು ಆಗಮಿಸಿದ್ರು.  ದೇವಾಲಯಕ್ಕೆ ಪ್ರವೇಶ ನಿಷೇಧಿಸಿರುವುದರಿಂದ ದೇವಾಲಯದ ಹೊರಗಡೆ ಸಿಕ್ಕಸಿಕ್ಕಲ್ಲೆ ತೆಂಗಿನಕಾಯಿ ಹೊಡೆದು ಕೈ ಮುಗಿದು ಭಕ್ತರು ವಾಪಸ್ ಹೋಗುವುದು ಕಲ್ಮಲ ಗ್ರಾಮದಲ್ಲಿ ಕಂಡು ಬಂತು. 
 

ಬೆಂಗಳೂರು (ಆ. 18):  ಭಕ್ತಿ, ಸಂಪ್ರದಾಯ, ಜಾತ್ರೆ ಅಂತ ಬಂದರೆ ನಮ್ಮ ಜನ ಯಾವುದಕ್ಕೂ ಕೇರ್ ಮಾಡುವುದಿಲ್ಲ. ಇದಕ್ಕೆ ಸಾಕ್ಷಿ ರಾಯಚೂರು ತಾಲೂಕಿನ ಕಲ್ಮಲ ಗ್ರಾಮದ ಕರಿಯಪ್ಪ ತಾತನ ಜಾತ್ರೆ. 

ಕಲ್ಮಲದ ಕರಿಯಪ್ಪ ತಾತನ ದೇವಾಲಯಕ್ಕೆ ಕೊರೊನಾ ಸೋಂಕು ಹರಡುವಿಕೆ ಭೀತಿಯನ್ನೂ ಮರೆತು ಸಾವಿರಾರು ಭಕ್ತರು ಆಗಮಿಸಿದ್ರು.  ದೇವಾಲಯಕ್ಕೆ ಪ್ರವೇಶ ನಿಷೇಧಿಸಿರುವುದರಿಂದ ದೇವಾಲಯದ ಹೊರಗಡೆ ಸಿಕ್ಕಸಿಕ್ಕಲ್ಲೆ ತೆಂಗಿನಕಾಯಿ ಹೊಡೆದು ಕೈ ಮುಗಿದು ಭಕ್ತರು ವಾಪಸ್ ಹೋಗುವುದು ಕಲ್ಮಲ ಗ್ರಾಮದಲ್ಲಿ ಕಂಡು ಬಂತು. 

ಇನ್ನೂ ದೇವಾಲಯ ಬಳಿ ತೆಂಗಿನಕಾಯಿ ಮಾರಾಟಕ್ಕೆ ಅವಕಾಶ ನೀಡದ ಹಿನ್ನೆಲೆ ಕಲ್ಮಲದಿಂದ ರಾಯಚೂರು ಮಾರ್ಗದಲ್ಲಿ ಸುಮಾರು ಎರಡು ಕಿ.ಮೀವರೆಗೆ ರಸ್ತೆ ಪಕ್ಕ ಕುಳಿತು ನೂರಾರು ವ್ಯಾಪಾರಿಗಳು ತೆಂಗಿನಕಾಯಿ ಮಾರಾಟ ಮಾಡಿದ್ರು. ಇನ್ನೂ ದೇವಾಲಯ ಬಳಿ ಭಕ್ತರು ಗುಂಪು-ಗುಂಪಾಗಿ ಸೇರುತ್ತಿದ್ದು, ಸಾಮಾಜಿಕ ಅಂತರವನ್ನ ಮರೆತಿದ್ದರು.  

 ಪ್ರತೀ ವರ್ಷ ಕರಿಯಪ್ಪ ತಾತಾನ ಜಾತ್ರೆ ಅದ್ದೂರಿಯಿಂದ ನಡೆಯುತ್ತಿತ್ತು. ಒಂದು ತಿಂಗಳ ಕಾಲ ನಡೆಯುವ ಜಾತ್ರೆಯ ಮಹಾ ರಥೋತ್ಸವ ವೇಳೆ ಲಕ್ಷಾಂತರ ಜನ ಭಕ್ತರು ಭಾಗಿಯಾಗುತ್ತಿದ್ದರು. ಆದ್ರೆ ಈ ವರ್ಷ ಕೊರೊನಾ ಭೀತಿ ಸಂಭ್ರಮಕ್ಕೆ ತೆರೆ ಎಳೆದಿದೆ. ಜಿಲ್ಲಾಡಳಿತ ಜನ ಸೇರುವುದನ್ನ ನಿಷೇಧಿಸಿದ್ದರೂ ಭಕ್ತರ ದಂಡು ದೇವಾಲಯದ ಕಡೆ ಹರಿದು ಬಂದಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!