ಡೋಂಟ್‌ ಕೇರ್..! ಕೊರೊನಾ ನಡುವೆಯೂ ಕರಿಯಪ್ಪ ‌ತಾತಾನ ಜಾತ್ರೆ!

ಡೋಂಟ್‌ ಕೇರ್..! ಕೊರೊನಾ ನಡುವೆಯೂ ಕರಿಯಪ್ಪ ‌ತಾತಾನ ಜಾತ್ರೆ!

Published : Aug 18, 2020, 11:45 AM ISTUpdated : Aug 18, 2020, 12:03 PM IST

ಭಕ್ತಿ, ಸಂಪ್ರದಾಯ, ಜಾತ್ರೆ ಅಂತ ಬಂದರೆ ನಮ್ಮ ಜನ ಯಾವುದಕ್ಕೂ ಕೇರ್ ಮಾಡುವುದಿಲ್ಲ. ಇದಕ್ಕೆ ಸಾಕ್ಷಿ ರಾಯಚೂರು ತಾಲೂಕಿನ ಕಲ್ಮಲ ಗ್ರಾಮದ ಕರಿಯಪ್ಪ ತಾತನ ಜಾತ್ರೆ. 

ಕಲ್ಮಲದ ಕರಿಯಪ್ಪ ತಾತನ ದೇವಾಲಯಕ್ಕೆ ಕೊರೊನಾ ಸೋಂಕು ಹರಡುವಿಕೆ ಭೀತಿಯನ್ನೂ ಮರೆತು ಸಾವಿರಾರು ಭಕ್ತರು ಆಗಮಿಸಿದ್ರು.  ದೇವಾಲಯಕ್ಕೆ ಪ್ರವೇಶ ನಿಷೇಧಿಸಿರುವುದರಿಂದ ದೇವಾಲಯದ ಹೊರಗಡೆ ಸಿಕ್ಕಸಿಕ್ಕಲ್ಲೆ ತೆಂಗಿನಕಾಯಿ ಹೊಡೆದು ಕೈ ಮುಗಿದು ಭಕ್ತರು ವಾಪಸ್ ಹೋಗುವುದು ಕಲ್ಮಲ ಗ್ರಾಮದಲ್ಲಿ ಕಂಡು ಬಂತು. 
 

ಬೆಂಗಳೂರು (ಆ. 18):  ಭಕ್ತಿ, ಸಂಪ್ರದಾಯ, ಜಾತ್ರೆ ಅಂತ ಬಂದರೆ ನಮ್ಮ ಜನ ಯಾವುದಕ್ಕೂ ಕೇರ್ ಮಾಡುವುದಿಲ್ಲ. ಇದಕ್ಕೆ ಸಾಕ್ಷಿ ರಾಯಚೂರು ತಾಲೂಕಿನ ಕಲ್ಮಲ ಗ್ರಾಮದ ಕರಿಯಪ್ಪ ತಾತನ ಜಾತ್ರೆ. 

ಕಲ್ಮಲದ ಕರಿಯಪ್ಪ ತಾತನ ದೇವಾಲಯಕ್ಕೆ ಕೊರೊನಾ ಸೋಂಕು ಹರಡುವಿಕೆ ಭೀತಿಯನ್ನೂ ಮರೆತು ಸಾವಿರಾರು ಭಕ್ತರು ಆಗಮಿಸಿದ್ರು.  ದೇವಾಲಯಕ್ಕೆ ಪ್ರವೇಶ ನಿಷೇಧಿಸಿರುವುದರಿಂದ ದೇವಾಲಯದ ಹೊರಗಡೆ ಸಿಕ್ಕಸಿಕ್ಕಲ್ಲೆ ತೆಂಗಿನಕಾಯಿ ಹೊಡೆದು ಕೈ ಮುಗಿದು ಭಕ್ತರು ವಾಪಸ್ ಹೋಗುವುದು ಕಲ್ಮಲ ಗ್ರಾಮದಲ್ಲಿ ಕಂಡು ಬಂತು. 

ಇನ್ನೂ ದೇವಾಲಯ ಬಳಿ ತೆಂಗಿನಕಾಯಿ ಮಾರಾಟಕ್ಕೆ ಅವಕಾಶ ನೀಡದ ಹಿನ್ನೆಲೆ ಕಲ್ಮಲದಿಂದ ರಾಯಚೂರು ಮಾರ್ಗದಲ್ಲಿ ಸುಮಾರು ಎರಡು ಕಿ.ಮೀವರೆಗೆ ರಸ್ತೆ ಪಕ್ಕ ಕುಳಿತು ನೂರಾರು ವ್ಯಾಪಾರಿಗಳು ತೆಂಗಿನಕಾಯಿ ಮಾರಾಟ ಮಾಡಿದ್ರು. ಇನ್ನೂ ದೇವಾಲಯ ಬಳಿ ಭಕ್ತರು ಗುಂಪು-ಗುಂಪಾಗಿ ಸೇರುತ್ತಿದ್ದು, ಸಾಮಾಜಿಕ ಅಂತರವನ್ನ ಮರೆತಿದ್ದರು.  

 ಪ್ರತೀ ವರ್ಷ ಕರಿಯಪ್ಪ ತಾತಾನ ಜಾತ್ರೆ ಅದ್ದೂರಿಯಿಂದ ನಡೆಯುತ್ತಿತ್ತು. ಒಂದು ತಿಂಗಳ ಕಾಲ ನಡೆಯುವ ಜಾತ್ರೆಯ ಮಹಾ ರಥೋತ್ಸವ ವೇಳೆ ಲಕ್ಷಾಂತರ ಜನ ಭಕ್ತರು ಭಾಗಿಯಾಗುತ್ತಿದ್ದರು. ಆದ್ರೆ ಈ ವರ್ಷ ಕೊರೊನಾ ಭೀತಿ ಸಂಭ್ರಮಕ್ಕೆ ತೆರೆ ಎಳೆದಿದೆ. ಜಿಲ್ಲಾಡಳಿತ ಜನ ಸೇರುವುದನ್ನ ನಿಷೇಧಿಸಿದ್ದರೂ ಭಕ್ತರ ದಂಡು ದೇವಾಲಯದ ಕಡೆ ಹರಿದು ಬಂದಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!