ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಬಿದ್ದ ವೃದ್ಧ, ಸಿನಿಮೀಯ ರೀತಿಯಲ್ಲಿ ರಕ್ಷಣೆ:  ವಿಡಿಯೋ ವೈರಲ್

ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಬಿದ್ದ ವೃದ್ಧ, ಸಿನಿಮೀಯ ರೀತಿಯಲ್ಲಿ ರಕ್ಷಣೆ: ವಿಡಿಯೋ ವೈರಲ್

Published : May 27, 2022, 04:02 PM IST

ರೈಲಿನಿಂದ ಇಳಿಯುತ್ತಿದ್ದಾಗ ಆಯತಪ್ಪಿ ಬಿದ್ದ ವ್ಯಕ್ತಿಯನ್ನು ಸಿನಿಮೀಯ ರೀತಿಯಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರು ರಕ್ಷಿಸಿದ್ದು, ಆ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.

ಉಡುಪಿ, (ಮೇ.27): ರೈಲಿನಿಂದ ಇಳಿಯುತ್ತಿದ್ದಾಗ ಆಯತಪ್ಪಿ ಬಿದ್ದ ವ್ಯಕ್ತಿಯನ್ನು ಸಿನಿಮೀಯ ರೀತಿಯಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರು ರಕ್ಷಿಸಿದ್ದು, ಆ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ. ಉಡುಪಿ ರೈಲ್ವೆ ನಿಲ್ದಾಣದಲ್ಲಿ ನಡೆದಿರುವ ಈ ಘಟನೆಯ ಸಾಹಸಕಾರಿ ದೃಶ್ಯಾವಳಿಗಳು  ಸದ್ಯ ವೈರಲ್ ಆಗುತ್ತಿದೆ. ರೈಲ್ವೆ ಸಿಬ್ಬಂದಿಯ ಸಮಯೋಚಿತ ಸಾಹಸಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಉಡುಪಿ ಜಿಲ್ಲೆಯ ಪೆರ್ಡೂರು ಮೂಲದ ಕುತಿ ಕುಂದನ್ 70ರ ಇಳಿವಯಸ್ಸಿನ ವೃದ್ಧರು. ಇವರು ತಮ್ಮ ಮಗಳನ್ನು ರೈಲಿನಲ್ಲಿ ಕುಳ್ಳಿರಿಸಿ, ಆಕೆಯ ಜೊತೆಗೆ ತಂದಿದ್ದ ಬ್ಯಾಗುಗಳನ್ನು ರೈಲಿನಲ್ಲಿ ಇರಿಸಿ, ಇನ್ನೇನು ರೈಲಿನಿಂದ ಇಳಿಯಲು ಸಜ್ಜಾಗಿದ್ದರು. ಅಷ್ಟರಲ್ಲಾಗಲೇ ಒಂದು ಕಾಲನ್ನು ರೈಲಿನಿಂದ ಹೊರಗೆ ಇರಿಸಿದ್ದರು. ಇದ್ದಕ್ಕಿದ್ದಂತೆ ರೈಲು ಚಲಿಸಲು ಆರಂಭಿಸಿದೆ. ವೃದ್ಧರಾದ ಕುತಿ ಕುಂದನ್ ಗೆ ತಕ್ಷಣ ಏನು ಮಾಡಬೇಕೆಂದು ಗೊತ್ತಾಗಲಿಲ್ಲ. ರೈಲಿನ ಹ್ಯಾಂಡಲ್ ನ್ನು ಬಲವಾಗಿ ಹಿಡಿದು ಕೊಂಡರು. ಚಲಿಸುತ್ತಿರುವ ರೈಲಿನ ಜೊತೆಗೆ ಎಳೆದೊಯ್ಯಲ್ಪಡುತ್ತಿದ್ದರು.‌ ಇನ್ನೇನು ಸಂಪೂರ್ಣ ಆಯತಪ್ಪಿ ಬಿದ್ದೇಬಿಟ್ಟರು ಎನ್ನುವಷ್ಟರಲ್ಲಿ, ಒಂದು ವಿಶೇಷ ಕಾರ್ಯಾಚರಣೆ ನಡೆದಿದೆ.

ಚಲಿಸುತ್ತಿರುವ ರೈಲಿನಲ್ಲಿ ಎಳೆದೊಯ್ಯಲ್ಪಡುತ್ತಿದ್ದ ಈ ವೃದ್ದರನ್ನು ಗಮನಿಸಿದ ರೈಲ್ವೆ ಸಿಬ್ಬಂದಿ ಸಜೀರ್ ತಕ್ಷಣ ಅಲ್ಲಿಗೆ ಬಂದಿದ್ದಾರೆ.  ಬೀಳುವ ಹಂತದಲ್ಲಿದ್ದ ವೃದ್ಧರನ್ನು ಎಳೆದು ಅಲ್ಲಿಂದ ಪಾರು ಮಾಡಿದ್ದಾರೆ. ಕಣ್ಣುಮುಚ್ಚಿ ತೆರೆಯುವಷ್ಟರಲ್ಲಿ ಎಲ್ಲವೂ ನಡೆದು ಹೋಗಿದೆ. ರಕ್ಷಣಾ ಕಾರ್ಯಾಚರಣೆ ಒಂದು ಸೆಕೆಂಡು ತಡವಾಗಿದ್ದರೂ, ಕುತಿ ಕುಂದನ್ ಅವರ ಜೀವಕ್ಕೆ ಅಪಾಯ ಬರುತ್ತಿತ್ತು. ರಕ್ಷಣಾ ಕಾರ್ಯಾಚರಣೆ ಬಳಿಕ ಅವರಿಗೆ ಪ್ರಥಮ ಚಿಕಿತ್ಸೆಯನ್ನು ನೀಡಿ, ಕುಟುಂಬಸ್ಥರೊಂದಿಗೆ ಕಳುಹಿಸಿಕೊಡಲಾಗಿದೆ. ಅಲ್ಲಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿರುವ ಕುತಿ ಕುಂದನ್ ಸದ್ಯ ಚೇತರಿಸಿಕೊಂಡಿದ್ದಾರೆ.

ಸಜೀರ್ ಅವರ ಈ ಸಕಾಲಿಕ ನೆರವಿನಿಂದ ಒಂದು ಅಮೂಲ್ಯ ಜೀವ ಉಳಿದಿದೆ. ಅವರ ಸಮಯೋಚಿತ ಸಹಾಯಕ್ಕೆ ಕುಟುಂಬಸ್ಥರು ಅಭಿನಂದಿಸಿದ್ದಾರೆ.‌ ಸದ್ಯ ಈ ರಕ್ಷಣಾ ಕಾರ್ಯಾಚರಣೆ ವಿಡಿಯೋ ಎಲ್ಲಾ ಕಡೆ ವೈರಲ್ ಆಗುತ್ತಿದೆ

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more