'ಕನ್ನಡಪ್ರಭ' ಬೆಳಗಾವಿ ಆವೃತ್ತಿಗೆ ರಜತ ಸಂಭ್ರಮ: 24 ಮಂದಿಗೆ ಪ್ರಶಸ್ತಿ ಪ್ರದಾನ

Dec 5, 2022, 1:11 PM IST

ಕನ್ನಡಪ್ರಭ ದಿನಪತ್ರಿಕೆಯ ಬೆಳಗಾವಿ ಆವೃತ್ತಿ 25 ವರ್ಷಗಳನ್ನು ಪೂರೈಸಿದ ಹಿನ್ನೆಲೆ, ಬೆಂಗಳೂರಿನಲ್ಲಿ ಸಮಾರಂಭ ಏರ್ಪಡಿಸಲಾಗಿತ್ತು. ಇದೇ ವೇಳೆ, ವಿವಿಧ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆಗೈದ ಬೆಳಗಾವಿ ಆವೃತ್ತಿಯ ಮೂರು ಜಿಲ್ಲೆಗಳ 24 ಗಣ್ಯರಿಗೆ ‘ರಜತ ಸಾಧಕರು’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ವೇಳೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಐಟಿ-ಬಿಟಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ ಸಿ.ಎನ್‌.ಅಶ್ವತ್ಥನಾರಾಯಣ, ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಸೇರಿ ಮತ್ತಿತರರು ಉಪಸ್ಥಿತರಿದ್ದರು.