ಮೇರಾ ಮಿಟ್ಟಿ ಮೇರಾ ಭಾರತ್ ಮೋದಿ ಕನಸಿಗೆ ಎಲ್ಲರೂ ಕೆಲಸ ಮಾಡಿ: ರಾಜೀವ್‌ ಚಂದ್ರಶೇಖರ್‌

ಮೇರಾ ಮಿಟ್ಟಿ ಮೇರಾ ಭಾರತ್ ಮೋದಿ ಕನಸಿಗೆ ಎಲ್ಲರೂ ಕೆಲಸ ಮಾಡಿ: ರಾಜೀವ್‌ ಚಂದ್ರಶೇಖರ್‌

Published : Aug 14, 2023, 10:44 AM IST

ಬೆಂಗಳೂರಿನ ಯಲಹಂಕದ ಬಳಿ ವನಮಹೋತ್ಸವವನ್ನು ಆಚರಿಸಲಾಯಿತು. ಗಿಡಗಳನ್ನು ನೆಡುವ ಮೂಲಕ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು.

ಬೆಂಗಳೂರು: 75ನೇ ಸ್ವಾತಂತ್ರ್ಯ ಅಮೃತ್ ಮಹೋತ್ಸವದ ಹಿನ್ನೆಲೆ ಹಾಗೂ 76ನೇ ಸ್ವಾತಂತ್ರ್ಯ ದಿನವನ್ನು ಬಿಬಿಎಂಪಿ(BBMP) ವಿಶೇಷವಾಗಿ ಆಚರಿಸಿತು. ಬಿಬಿಎಂಪಿ ಯಲಹಂಕ ವಿಭಾಗದಲ್ಲಿ ವಿಭಿನ್ನವಾಗಿ ಮರ ನೆಡುವ ಕಾರ್ಯಕ್ರಮ ಆಯೋಜಿಸಲಾಯ್ತು. ಯಲಹಂಕ ಕೆರೆ ಬಳಿ 76 ವಿವಿಧ ಬಗೆಯ ಗಿಡಗಳನ್ನು  ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್(Rajeev Chandrasekhar) ನೆಡುವ ಮೂಲಕ ಚಾಲನೆ ನೀಡಿದ್ರು. 76ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ(Independence Day) ಹಿನ್ನಲೆ ಮಹಾಗಣಿ, ತಬೂಬಿಯಾ ಅವ್ಲಾಂಡ, ನೇರಳೆ, ಹಲಸು, ಇಂಡಿಯನ್ ಚಾರ್ಕೊಲ್, ಹೊಳೆ ದಾಸವಾಳ, ಹತ್ತಿ ಸೇರಿದಂತೆ 76 ವೆರೈಟಿ ಗಿಡಗಳನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ  ಎಸ್. ಆರ್. ವಿಶ್ವನಾಥ್, ಬಿಬಿಎಂಪಿ ಜಂಟಿ ಆಯುಕ್ತ ಮೊಹಮ್ಮದ್ ನಯೀನ್, ಬಿಬಿಎಂಪಿ ಅಧಿಕಾರಿಗಳು ಭಾಗಿಯಾಗಿದ್ರು. ಈ ವೇಳೆ ಮಾತನಾಡಿದ ರಾಜೀವ್ ಚಂದ್ರಶೇಖರ್, ಮೇರಾ ಮಿಟ್ಟಿ ಮೇರಾ ಭಾರತ್ ಇದು ಮೋದಿಯವರ ಕನಸು. ಇದಕ್ಕಾಗಿ ಎಲ್ಲರೂ ಜೊತೆಯಾಗಿ ಕೆಲಸ ಮಾಡ್ಬೇಕು. ಮೋದಿಯವರ ಕನಸು ದೇಶ ಅಭಿವೃದ್ಧಿ ಆಗ್ಬೇಕು ಅನ್ನೋದು. 2024ರಲ್ಲಿ ಮೂರನೇ ಅತಿದೊಡ್ಡ ಅಭಿವೃದ್ದಿ ದೇಶ ಆಗ್ಬೇಕು ಅನ್ನೋ ಕನಸು ನನಸಾಗ್ಬೇಕು ಎಂದು ಹೇಳಿದರು.

ಇದನ್ನೂ ವೀಕ್ಷಿಸಿ:  ರಾಷ್ಟ್ರಧ್ವಜ ನೇಕಾರರಿಗೆ ಇದೆಂಥಾ ದುಸ್ಥಿತಿ..? ನೇಕಾರ ಕೇಂದ್ರದಲ್ಲಿ ಹಾವು-ಚೇಳುಗಳದ್ದೇ ಸಾಮ್ರಾಜ್ಯ !

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more