ರಟ್ಟಿಹಳ್ಳಿ ಹಿಂದೂ ಸಂಘಟನೆ ಬೈಕ್ ರ್ಯಾಲಿ ವೇಳೆ ಕಲ್ಲು ತೂರಾಟ: ಮಸೀದಿ, ಮನೆ, ಮಕ್ಕಳು- ಮಹಿಳೆಯರಿಗೆ ಕಲ್ಲೇಟು

ರಟ್ಟಿಹಳ್ಳಿ ಹಿಂದೂ ಸಂಘಟನೆ ಬೈಕ್ ರ್ಯಾಲಿ ವೇಳೆ ಕಲ್ಲು ತೂರಾಟ: ಮಸೀದಿ, ಮನೆ, ಮಕ್ಕಳು- ಮಹಿಳೆಯರಿಗೆ ಕಲ್ಲೇಟು

Published : Mar 14, 2023, 06:37 PM ISTUpdated : Mar 14, 2023, 07:05 PM IST

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ಹಿಂದೂ ಸಂಘಟನೆಗಳಿಂದ ನಡೆದ ಬೈಕ್‌ ರ್ಯಾಲಿಯ ವೇಳೆ ಕೆಲವು ಮುಸ್ಲಿಂ ಮನೆಗಳ ಮೇಲೆ ಕಲ್ಲು ತೂರಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ರಟ್ಟಿಹಳ್ಳಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿದೆ. 

ಹಾವೇರಿ (ಮಾ.14): ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ಹಿಂದೂ ಸಂಘಟನೆಗಳಿಂದ ನಡೆದ ಬೈಕ್‌ ರ್ಯಾಲಿಯ ವೇಳೆ ಕೆಲವು ಮುಸ್ಲಿಂ ಮನೆಗಳ ಮೇಲೆ ಕಲ್ಲು ತೂರಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ರಟ್ಟಿಹಳ್ಳಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿದೆ. 

ಕಳೆದ 5 ದಿನಗಳ ಹಿಂದೆ ರಟ್ಟಿಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣ ಕಂಚಿನ ಮೂರ್ತಿ ಉದ್ಘಾಟನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಮೆರವಣಿಗೆ ಮಾಡಲು ಮುಂದಾದಾಗ, ಕೆಲವು ಮುಸ್ಲಿಂ ಯುವಕರು ಕಲ್ಲು ತೂರಾಟ ಮಾಡಲು ಮುಂದಾಗಿದ್ದರು. ಇದಕ್ಕೆ ಪ್ರತೀಕಾರವಾಗಿ ಇಂದು ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಹಾಗೂ ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಬೈಕ್‌ ರ್ಯಾಲಿಯೊಂದಿಗೆ ಮೆರವಣಿಗೆ ಮಾಡುವ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಲ್ಲು ತೂರಾಟ ನಡೆದ ವೇಳೆ ಮನೆಯಲ್ಲಿದ್ದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಪೆಟ್ಟಾಗಿದೆ. ಮನೆಯ ಮುಂದೆ ನಿಲ್ಲಿಸಲಾಗಿದ್ದ ಕಾರು,ಆಟೋ ಮತ್ತು ಇತರೆ ವಾಹನಗಳು ಕೂಡ ಹಾನಿಗೊಳಗಾಗಿವೆ. ಈ ಕುರಿತು ಮಾತನಾಡಿರುವ ಸಂತ್ರಸ್ತ ಮುಸ್ಲಿಂ ಕುಟುಂಬದ ಸದಸ್ಯರು ಮೆರವಣಿಗೆ ವೇಳೆ ಪೊಲೀಸರು ನಮಗೆ ರಕ್ಷಣೆ ಕೊಡಬೇಕಾಗಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more