ಗ್ಯಾರಂಟಿ ಯೋಜನೆಗಾಗಿ ಪೆಟ್ರೋಲ್ ಬೆಲೆ ಏರಿಸಿದ್ರಾ..? ಎಡವಟ್ಟಿಗೆಲ್ಲಾ ಗ್ಯಾರಂಟಿನೇ ಕಾರಣನಾ..?

ಗ್ಯಾರಂಟಿ ಯೋಜನೆಗಾಗಿ ಪೆಟ್ರೋಲ್ ಬೆಲೆ ಏರಿಸಿದ್ರಾ..? ಎಡವಟ್ಟಿಗೆಲ್ಲಾ ಗ್ಯಾರಂಟಿನೇ ಕಾರಣನಾ..?

Published : Jun 17, 2024, 05:55 PM ISTUpdated : Jun 17, 2024, 06:01 PM IST

ಧಿಡೀರ್ ಪೆಟ್ರೋಲ್,ಡೀಸಲ್ ಬೆಲೆ ಏರಿದ್ಯಾಕೆ?
ರಾಜ್ಯ ಸರ್ಕಾರದ ವಿರುದ್ಧ ರೊಚ್ಚಿಗೆದ್ದ ಜನ!
ಬೆಲೆ ಏರಿಕೆ ವಿರುದ್ಧ ತಿರುಗಿಬಿದ್ದ ಕಮಲಪಡೆ!

ಜನರಲ್ ಎಲೆಕ್ಷನ್ ಮುಗಿದಿದ್ದೇ ಮುಗಿದಿದ್ದು, ಶ್ರೀಸಾಮಾನ್ಯನ ಜೇಬು ಸುಡೋಕೆ ಶುರುವಾಗಿದೆ. ಆದ್ರೆ ಈ ಸಮಸ್ಯೆ ಕಾಡ್ತಾ ಇರೋದು ಸಧ್ಯಕ್ಕೆ ಕರ್ನಾಟಕದ ಜನರನ್ನ ಮಾತ್ರ. ಯಾಕಂದ್ರೆ, ಗ್ಯಾರಂಟಿ ಯೋಜನೆಗೆ(Guarantee scheme) ದುಡ್ಡು ಜೋಡಿಸೋಕೆ ಗಾಯದ ಮೇಲೆ ಬರೆ ಎಳೆಯೋಕೆ ಮುಂದಾದಂತಿದೆ, ಸಿದ್ದರಾಮಯ್ಯನೋರ(Siddaramaiah) ಸರ್ಕಾರ.ಸರಿಸುಮಾರ 30% ಪೆಟ್ರೋಲ್ ಬೆಲೆ(Petrol-diesel prices hike) ಏರಿಕೆಯಾಗಿದೆ. ಇಷ್ಟೇ ಅಲ್ಲ, ಇನ್ನೂ ಶಾಕ್ ಮೇಲೆ ಶಾಕ್ ಕಾದಿದೆ ಅನ್ನೋ ಭಯಾನಕ ಭವಿಷ್ಯ ಬೇರೆ ಕೇಳುಸ್ತಾ ಇದೆ. ರಾಜ್ಯದಲ್ಲಿ ಸರ್ಕಾರ(State government) ನಡೆಸ್ತಾ ಇರೋದು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್. ಈ ಕಾಂಗ್ರೆಸ್ ಆಡಳಿತಕ್ಕೆ ಬರೋದ್ರಲ್ಲಿ, ಅತಿ ಮಹತ್ವದ ಪಾತ್ರವಹಿಸಿದ ಸಂಗತಿ ಏನು ಅಂತ ಕೇಳಿದ್ರೆ, ಅನೇಕ ಮಂದಿ ಹೇಳೋದೇ, ಗ್ಯಾರಂಟಿ ಘೋಷಣೆ ಅಂತ. ರಾಜ್ಯದ ಜನಕ್ಕೆ ಗ್ಯಾರಂಟಿ ಭರವಸೆ ಕೊಡೋ ಮೂಲಕ, ಕಾಂಗ್ರೆಸ್ ಹೊಸ ಅಲೆ ಸೃಷ್ಟಿಸಿತ್ತು. ಒಂದೆಡೆ ಆಗಿನ ಬಿಜೆಪಿ ಸರ್ಕಾರದ ವಿರುದ್ಧ ಇದ್ದ ಅಸಮಾಧಾನ, ಮತ್ತೊಂದು ಕಡೆ ಬದಲಾವಣೆಯ ಬಯಕೆ, ಅದೆರಡರ ಜೊತೆ, ಎಲ್ಲರಿಗೂ ಫ್ರೀ, ಫ್ರೀ ಅನ್ನೋ ಸಿದ್ದರಾಮಯ್ಯನೋರ ಅಭಯ.

ಇದನ್ನೂ ವೀಕ್ಷಿಸಿ:  ಹೆಚ್ಚಿನ ವಿಚಾರಣೆಗಾಗಿ ಪೊಲೀಸರ ವಶದಲ್ಲಿ ದರ್ಶನ್‌ ಗ್ಯಾಂಗ್‌: ಪೊಲೀಸರು ಕೊಟ್ಟ ಆ 6 ಕಾರಣಗಳೇನು?

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more