ಬರ್ಬರ ಹತ್ಯೆಯ ಕೇಸ್ ಕ್ಲೋಸ್ ಮಾಡ್ಸೋ ಪ್ಲ್ಯಾನ್ ಇತ್ತಾ..? ಅಭಿಮಾನಿಗಳೇ ಆರೋಪಿಗಳು..ಫ್ಯಾನ್ಸ್‌ಗೆ ಇದೇನಾ ಸಂದೇಶ?

ಬರ್ಬರ ಹತ್ಯೆಯ ಕೇಸ್ ಕ್ಲೋಸ್ ಮಾಡ್ಸೋ ಪ್ಲ್ಯಾನ್ ಇತ್ತಾ..? ಅಭಿಮಾನಿಗಳೇ ಆರೋಪಿಗಳು..ಫ್ಯಾನ್ಸ್‌ಗೆ ಇದೇನಾ ಸಂದೇಶ?

Published : Jun 22, 2024, 04:28 PM IST

ದುಡ್ಡಿನ ಮದದಲ್ಲಿ ಕೇಸ್ ಕ್ಲೋಸ್ ಪ್ರಯತ್ನವಾಯ್ತಾ..?
ಅನ್ಯಾಯದ ಸಾವಿಗೆ ನ್ಯಾಯ ಕೊಡಿಸುತ್ತಾ ಆ ಸಾಕ್ಷಿ..?
ದರ್ಶನ್ ಪಟಾಲಂ ವಿರುದ್ಧ ಸಿಕ್ಕ ಮಹತ್ವದ ಸಾಕ್ಷಿ ಏನು? 

ರೇಣುಕಾಸ್ವಾಮಿಯ ಭೀಕರ ಕೊಲೆ(Renukaswamy murder case) ರಾಜ್ಯ ಇನ್ನೆಷ್ಟು ವರ್ಷಗಳ ಕಾಲ ನೆನಪಿಡಲಿದೆಯೋ ಗೊತ್ತಿಲ್ಲ.ಯಾಕಂದ್ರೆ ಅದರ ಭೀಕರತೆ ಅಂಥದ್ದು. ಆ ಭೀಕರತೆಯ ಹಿಂದಿರೋ ಕಾರಣವೂ ಅಂಥದ್ದು. ನಟ ದರ್ಶನ್ (Darshan). ಅಭಿಮಾನಿಗಳ ಪಾಲಿಗೆ ಸೋ ಕಾಲ್ಡ್, ಡಿ ಬಾಸ್. ಇವತ್ತು ರಾಜಕಾಲುವೆಯ ಮೋರಿಯಲ್ಲಿ ರೇಣುಕಾಸ್ವಾಮಿ ರಕ್ತ ಹರಿಯೋಕೆ ಕಾರಣವೇ ದರ್ಶನ್. ಅದೇ ಕಾರಣಕ್ಕಾಗಿಯೇ ಇವತ್ತು, ದರ್ಶನ್ ಮಾತ್ರವೇ ಅಲ್ಲ, ಆತನ ಪಟಾಲಂ  ಕೂಡ, ಸೆರೆವಾಸದ ಭೀತಿಯಲ್ಲಿದೆ. ರೇಣುಕಾಸ್ವಾಮಿ ಮರ್ಡರ್ ಕೇಸ್‌ನಲ್ಲಿ(Murder Case) ಆರೋಪ ಹೊತ್ತಿರೋ ನಟ ದರ್ಶನ್‌ನನ್ನ ಮತ್ತೆ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಈಗಾಗಲೇ 9 ದಿನಗಳ ಕಾಲ ಪೊಲೀಸರ ವಿಚಾರಣೆ ಎದುರಿಸಿದ್ದ ನಟ, ಈಗ ಮತ್ತೆರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಹೋಗ್ಬೇಕಾಗುತ್ತೆ. ಅಲ್ಲಿ ವಿಚಾರಣೆ ಮುಂದುವರಿದಿದೆ. ಆದ್ರೆ ದರ್ಶನ್ ಗೆಳತಿ ಪವಿತ್ರಾಗೌಡ ಸೇರಿದಂತೆ ಉಳಿದ 10 ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟಾಗಿದ್ದಾರೆ. ಈಗಾಗಲೇ ಈ ಕೊಲೆ ಕೇಸಿಗೆ ಸಂಬಂಧ ಪಟ್ಟಂತೆ, ನಟ ದರ್ಶನ್ ಹೇಳಿಕೆ ದಾಖಲಾಗಿದೆ. ಅದೂ ಅಲ್ಲದೇ ಅಗತ್ಯ ವಸ್ತುಗಳ ರಿಕವರಿ ಕೂಡ ಆಗಿದೆ. ಹಾಗಾಗಿ, ಕಸ್ಟಡಿ ಅಗತ್ಯವೇ ಇಲ್ಲ ಅಂತ ಅರೋಪಿ ದರ್ಶನ್ ಪರ ವಕೀಲರು ವಾದಿಸಿದ್ರು. ಆದ್ರೆ, ದರ್ಶನ್ ತಮ್ಮ ಕಸ್ಟಡಿಗೆ ಯಾಕೆ ಬೇಕು ಅಂತ, ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ವಾದ ನಡೆಸಿದ್ರು.

ಇದನ್ನೂ ವೀಕ್ಷಿಸಿ:  ದರ್ಶನ್‌ನನ್ನ ಮತ್ತೆ ಕಸ್ಟಡಿಗೆ ತೆಗೆದುಕೊಳ್ಳಲು ಕಾರಣವೇನು..? ಬಾಯಿ ಬಿಡಬೇಕಿದೆ 40 ಲಕ್ಷದ ಸೀಕ್ರೆಟ್ !

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!