ಬರ್ಬರ ಹತ್ಯೆಯ ಕೇಸ್ ಕ್ಲೋಸ್ ಮಾಡ್ಸೋ ಪ್ಲ್ಯಾನ್ ಇತ್ತಾ..? ಅಭಿಮಾನಿಗಳೇ ಆರೋಪಿಗಳು..ಫ್ಯಾನ್ಸ್‌ಗೆ ಇದೇನಾ ಸಂದೇಶ?

ಬರ್ಬರ ಹತ್ಯೆಯ ಕೇಸ್ ಕ್ಲೋಸ್ ಮಾಡ್ಸೋ ಪ್ಲ್ಯಾನ್ ಇತ್ತಾ..? ಅಭಿಮಾನಿಗಳೇ ಆರೋಪಿಗಳು..ಫ್ಯಾನ್ಸ್‌ಗೆ ಇದೇನಾ ಸಂದೇಶ?

Published : Jun 22, 2024, 04:28 PM IST

ದುಡ್ಡಿನ ಮದದಲ್ಲಿ ಕೇಸ್ ಕ್ಲೋಸ್ ಪ್ರಯತ್ನವಾಯ್ತಾ..?
ಅನ್ಯಾಯದ ಸಾವಿಗೆ ನ್ಯಾಯ ಕೊಡಿಸುತ್ತಾ ಆ ಸಾಕ್ಷಿ..?
ದರ್ಶನ್ ಪಟಾಲಂ ವಿರುದ್ಧ ಸಿಕ್ಕ ಮಹತ್ವದ ಸಾಕ್ಷಿ ಏನು? 

ರೇಣುಕಾಸ್ವಾಮಿಯ ಭೀಕರ ಕೊಲೆ(Renukaswamy murder case) ರಾಜ್ಯ ಇನ್ನೆಷ್ಟು ವರ್ಷಗಳ ಕಾಲ ನೆನಪಿಡಲಿದೆಯೋ ಗೊತ್ತಿಲ್ಲ.ಯಾಕಂದ್ರೆ ಅದರ ಭೀಕರತೆ ಅಂಥದ್ದು. ಆ ಭೀಕರತೆಯ ಹಿಂದಿರೋ ಕಾರಣವೂ ಅಂಥದ್ದು. ನಟ ದರ್ಶನ್ (Darshan). ಅಭಿಮಾನಿಗಳ ಪಾಲಿಗೆ ಸೋ ಕಾಲ್ಡ್, ಡಿ ಬಾಸ್. ಇವತ್ತು ರಾಜಕಾಲುವೆಯ ಮೋರಿಯಲ್ಲಿ ರೇಣುಕಾಸ್ವಾಮಿ ರಕ್ತ ಹರಿಯೋಕೆ ಕಾರಣವೇ ದರ್ಶನ್. ಅದೇ ಕಾರಣಕ್ಕಾಗಿಯೇ ಇವತ್ತು, ದರ್ಶನ್ ಮಾತ್ರವೇ ಅಲ್ಲ, ಆತನ ಪಟಾಲಂ  ಕೂಡ, ಸೆರೆವಾಸದ ಭೀತಿಯಲ್ಲಿದೆ. ರೇಣುಕಾಸ್ವಾಮಿ ಮರ್ಡರ್ ಕೇಸ್‌ನಲ್ಲಿ(Murder Case) ಆರೋಪ ಹೊತ್ತಿರೋ ನಟ ದರ್ಶನ್‌ನನ್ನ ಮತ್ತೆ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಈಗಾಗಲೇ 9 ದಿನಗಳ ಕಾಲ ಪೊಲೀಸರ ವಿಚಾರಣೆ ಎದುರಿಸಿದ್ದ ನಟ, ಈಗ ಮತ್ತೆರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಹೋಗ್ಬೇಕಾಗುತ್ತೆ. ಅಲ್ಲಿ ವಿಚಾರಣೆ ಮುಂದುವರಿದಿದೆ. ಆದ್ರೆ ದರ್ಶನ್ ಗೆಳತಿ ಪವಿತ್ರಾಗೌಡ ಸೇರಿದಂತೆ ಉಳಿದ 10 ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟಾಗಿದ್ದಾರೆ. ಈಗಾಗಲೇ ಈ ಕೊಲೆ ಕೇಸಿಗೆ ಸಂಬಂಧ ಪಟ್ಟಂತೆ, ನಟ ದರ್ಶನ್ ಹೇಳಿಕೆ ದಾಖಲಾಗಿದೆ. ಅದೂ ಅಲ್ಲದೇ ಅಗತ್ಯ ವಸ್ತುಗಳ ರಿಕವರಿ ಕೂಡ ಆಗಿದೆ. ಹಾಗಾಗಿ, ಕಸ್ಟಡಿ ಅಗತ್ಯವೇ ಇಲ್ಲ ಅಂತ ಅರೋಪಿ ದರ್ಶನ್ ಪರ ವಕೀಲರು ವಾದಿಸಿದ್ರು. ಆದ್ರೆ, ದರ್ಶನ್ ತಮ್ಮ ಕಸ್ಟಡಿಗೆ ಯಾಕೆ ಬೇಕು ಅಂತ, ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ವಾದ ನಡೆಸಿದ್ರು.

ಇದನ್ನೂ ವೀಕ್ಷಿಸಿ:  ದರ್ಶನ್‌ನನ್ನ ಮತ್ತೆ ಕಸ್ಟಡಿಗೆ ತೆಗೆದುಕೊಳ್ಳಲು ಕಾರಣವೇನು..? ಬಾಯಿ ಬಿಡಬೇಕಿದೆ 40 ಲಕ್ಷದ ಸೀಕ್ರೆಟ್ !

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!