ದರ್ಶನ್‌ಗೆ ಮುಳುವಾಗುತ್ತಾ ಮತ್ತೊಂದು ಸಾಕ್ಷಿ? ಶವ ಬಿಸಾಕಿದ ಬಳಿಕ ಸ್ನೇಹಿತನ ಬಳಿ ಕಥೆ ಹೇಳಿದ್ದ ಆರೋಪಿ!

ದರ್ಶನ್‌ಗೆ ಮುಳುವಾಗುತ್ತಾ ಮತ್ತೊಂದು ಸಾಕ್ಷಿ? ಶವ ಬಿಸಾಕಿದ ಬಳಿಕ ಸ್ನೇಹಿತನ ಬಳಿ ಕಥೆ ಹೇಳಿದ್ದ ಆರೋಪಿ!

Published : Jul 21, 2024, 01:01 PM IST

ರೇಣುಕಾಸ್ವಾಮಿ ಕೊಲೆ ಮಾಡಿ ಶವ ಬಿಸಾಕಿದ ನಂತರ ಆರೋಪಿ ರವಿಶಂಕರ್‌ ತನ್ನ ಸ್ನೇಹಿತನಿಗೆ ಈ ಬಗ್ಗೆ ಕಥೆ ಹೇಳಿದ್ದನಂತೆ.
 

ನಟ ದರ್ಶನ್‌ಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy murder case ) ಮತ್ತೊಂದು ಸಾಕ್ಷಿ ಮುಳುವಾಗುವ ಸಾಧ್ಯತೆ ಇದೆ. ಕೊಲೆ ಮಾಡಿದ ಬಳಿಕ 8ನೇ ಆರೋಪಿ ರವಿಶಂಕರ್‌ (accused Ravi Shankar) ತನ್ನ ಸ್ನೇಹಿತ ಬಳಿ ಕಥೆ ಹೇಳಿದ್ದನಂತೆ. ರೇಣುಕಾಸ್ವಾಮಿ ಕೊಲೆ ಮಾಡಿ ಶವ ಬಿಸಾಕಿದ ನಂತರ ಸ್ನೇಹಿತನಿಗೆ ಕಥೆ ಹೇಳಿದ್ದನಂತೆ. ಈ ವಿಚಾರವನ್ನ ಪೊಲೀಸರು (Police)ಬಾಯ್ಬಿಡಿಸಿದ್ದಾರೆ. ಅಲ್ಲದೇ ಕತೆ ಕೇಳಿಸಿಕೊಂಡಿದ್ದ ಸ್ನೇಹಿತನನ್ನ ಈಗ ಪೊಲೀಸರು ಸಾಕ್ಷ್ಯ ಮಾಡಿದ್ದಾರೆ. ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನ ಕಿಡ್ನಾಫ್ ಮಾಡಿದ್ದು ಇದೇ ರವಿಶಂಕರ್ ಕಾರಲ್ಲಿ. ಶವ ಬಿಸಾಕಿ ಚಿತ್ರದುರ್ಗಕ್ಕೆ ತೆರಳಿ ನಡೆದಿದ್ದನ್ನೆಲ್ಲ ಸ್ನೇಹಿತನ ಬಳಿ ಹೇಳಿದ್ದನಂತೆ. ಈಗ ಆತನನ್ನು ಪ್ರಮುಖ‌ಸಾಕ್ಷಿಯಾಗಿ ಪೊಲೀಸರು ಮಾಡಿದ್ದಾರೆ. ದರ್ಶನ್‌ಗೆ ಮನೆ ಕೆಲಸದವರ ಕಂಟಕ ಆಯ್ತು ಈಗ ಮ್ಯಾನೇಜರ್ ಕಾಸ್ಟ್ಯೂಮ್‌ ಡಿಸೈನರ್ (Manager Costume Designer) ಕಂಟಕ ಶುರುವಾಗಿದೆ. ದರ್ಶನ್(Darshan) ವಿರುದ್ಧವೇ ಸಾಕ್ಷಿಯಾದ ಮ್ಯಾನೇಜರ್ ಕಾಸ್ಟ್ಯೂಮ್ ಡಿಸೈನರ್, ದರ್ಶನ್ ಪಡೆದುಕೊಂಡಿದ್ದ ಹಣಕ್ಕೆ ಸಂಬಂಧಿಸಿ ಮ್ಯಾನೇಜರ್ ಸಾಕ್ಷಿ ಇದೆ. ಕೃತ್ಯ ಎಸಗಿದ ಬಳಿಕ‌ ಬಟ್ಟೆಗಳನ್ನ ವಿಜಯಲಕ್ಷ್ಮಿ ಮನೆಗೆ ಕಳುಹಿಸಿದ್ದಕ್ಕೆ ಕಾಸ್ಟ್ಯೂಮ್ ಡಿಸೈನರ್ ಸಾಕ್ಷಿ ಇದೆ. ರೇಣುಕಾಸ್ವಾಮಿ ಕೊಲೆ ಬಳಿಕ ಮೋಹನ್ ರಾಜ್ ಹಾಗೂ ಮಿಲನ ಪ್ರಕಾಶ್ ಮೂಲಕ‌ ದರ್ಶನ್‌ ಹಣ ಪಡೆದಿದ್ದರು. ಇದನ್ನ ತನ್ನ ಮ್ಯಾನೇಜರ್ ಮುಖಾಂತರವೇ ಇಬ್ಬರಿಗೂ ದರ್ಶನ್‌ ಸಂಪರ್ಕ ಮಾಡಿದ್ದರು. 

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸಿಕ್ತು ಮಹತ್ವದ ಸಾಕ್ಷ್ಯ! ದರ್ಶನ್‌ ಗ್ಯಾಂಗ್‌ ಬಚಾವ್‌ ಆಗಲು ಸಾಧ್ಯವೆ ಇಲ್ವಾ?

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!