ಪ್ರಕೃತಿ ವಿಕೋಪ ಸಂದರ್ಭಗಳಲ್ಲಿ ಜನರ ರಕ್ಷಣೆ ಹೇಗೆ? ಎನ್‌ಡಿಆರ್‌ಎಫ್  ಅಣಕು ಕಾರ್ಯಾಚರಣೆ

ಪ್ರಕೃತಿ ವಿಕೋಪ ಸಂದರ್ಭಗಳಲ್ಲಿ ಜನರ ರಕ್ಷಣೆ ಹೇಗೆ? ಎನ್‌ಡಿಆರ್‌ಎಫ್ ಅಣಕು ಕಾರ್ಯಾಚರಣೆ

Published : Oct 01, 2021, 05:51 PM IST

ಉತ್ತರ ಕನ್ನಡ ಜಿಲ್ಲಾ ಪೊಲೀಸರ ಉಪಸ್ಥಿತಿಯಲ್ಲಿ ಎನ್‌ಡಿಆರ್‌ಎಫ್ 10ನೇ ಬೆಟಾಲಿಯನ್ ಗುಂಟೂರು ವಿಭಾಗದಿಂದ ಇಂದು ಕದ್ರಾ ಡ್ಯಾಂ ಬಳಿಯಿರುವ ನೆರೆಪೀಡಿತ ಪ್ರದೇಶದಲ್ಲಿ ಅಣುಕು ಕಾರ್ಯಾಚರಣೆ ನಡೆಸಲಾಯಿತು. 

ಉತ್ತರ ಕನ್ನಡ (ಅ. 01):  ಜಿಲ್ಲಾ ಪೊಲೀಸರ ಉಪಸ್ಥಿತಿಯಲ್ಲಿ ಎನ್‌ಡಿಆರ್‌ಎಫ್ 10ನೇ ಬೆಟಾಲಿಯನ್ ಗುಂಟೂರು ವಿಭಾಗದಿಂದ ಇಂದು ಕದ್ರಾ ಡ್ಯಾಂ ಬಳಿಯಿರುವ ನೆರೆಪೀಡಿತ ಪ್ರದೇಶದಲ್ಲಿ ಅಣುಕು ಕಾರ್ಯಾಚರಣೆ ನಡೆಲಾಯಿತು. ಸಿಐಎಸ್‌ಎಫ್, ಜಿಲ್ಲಾ ಆಡಳಿತ ಅಧಿಕಾರಿಗಳು, ಪೊಲೀಸ್ ಅಧಿಕಾರಿ, ಅಗ್ನಿಶಾಮಕದಳ, ಗೃಹರಕ್ಷಕದಳ ಸಿಬ್ಬಂದಿ ಉಪಸ್ಥಿತಿಯಲ್ಲಿ ಎನ್‌ಡಿಆರ್‌ಎಫ್ ಇನ್ಸ್‌ಪೆಕ್ಟರ್ ಸಂಜೀವ್ ಕುಮಾರ್ ನೇತೃತ್ವದ 24 ಮಂದಿಯ ತಂಡದ ಸಹಯೋಗದಲ್ಲಿ ಈ ಅಣುಕು ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. 

ಪ್ರವಾಹದ ಸಂದರ್ಭ ನೀರಿನಲ್ಲಿ ಮುಳುಗಿದ ಜನರನ್ನು ಯಾವ ರೀತಿಯಲ್ಲಿ ರಕ್ಷಣೆ ಮಾಡೋದು, ಬೆಟ್ಟ ಭಾಗದಿಂದ ಜನರನ್ನು ಯಾವ ರೀತಿಯಲ್ಲಿ ಹಗ್ಗದ ಮೂಲಕ ಇಳಿಸೋದು, ದ್ವೀಪದ ನಡುವೆ ಸಿಲುಕಿಕೊಂಡವರನ್ನು ಯಾವ ರೀತಿಯಲ್ಲಿ ರಕ್ಷಣೆ ಮಾಡೋದು ಹಾಗೂ ಟ್ಯೂಬ್ ಬೋಟ್‌ ಚಲಾವಣೆಯೊಂದಿಗೆ ಸಾಹಸ ಮುಂತಾದವುಗಳನ್ನು ಪ್ರದರ್ಶಿಸಿತು. ಕದ್ರಾ ನೆರೆಪೀಡಿತ ಪ್ರದೇಶದಲ್ಲಿ ಎನ್‌ಡಿಆರ್‌ಎಫ್ ತಂಡದ ಸಾಹಸ ಭರಿತ ಅಣುಕು ಪ್ರದರ್ಶನ ನೋಡುಗರನ್ನು ಹುಬ್ಬೇರಿಸುವಂತೆ ಮಾಡಿದೆ. ರಕ್ಷಣಾ ಕಾರ್ಯಾಚರಣೆ ಸಂಬಂಧಿಸಿ ಸ್ಥಳೀಯರಿಗೂ ತರಬೇತಿ ನೀಡಲು ಎನ್‌ಡಿಆರ್‌ಎಫ್ ತಂಡ ಸಿದ್ಧವಾಗಿದ್ದು, ಇದರ ಉಪಯೋಗವನ್ನು ಪಡೆದುಕೊಳ್ಳಬೇಕಿದೆ ಅನ್ನೋದು ಜಿಲ್ಲೆಯ ಜನರ ಅಭಿಪ್ರಾಯ.

 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?