ಪ್ರಕೃತಿ ವಿಕೋಪ ಸಂದರ್ಭಗಳಲ್ಲಿ ಜನರ ರಕ್ಷಣೆ ಹೇಗೆ? ಎನ್‌ಡಿಆರ್‌ಎಫ್  ಅಣಕು ಕಾರ್ಯಾಚರಣೆ

ಪ್ರಕೃತಿ ವಿಕೋಪ ಸಂದರ್ಭಗಳಲ್ಲಿ ಜನರ ರಕ್ಷಣೆ ಹೇಗೆ? ಎನ್‌ಡಿಆರ್‌ಎಫ್ ಅಣಕು ಕಾರ್ಯಾಚರಣೆ

Published : Oct 01, 2021, 05:51 PM IST

ಉತ್ತರ ಕನ್ನಡ ಜಿಲ್ಲಾ ಪೊಲೀಸರ ಉಪಸ್ಥಿತಿಯಲ್ಲಿ ಎನ್‌ಡಿಆರ್‌ಎಫ್ 10ನೇ ಬೆಟಾಲಿಯನ್ ಗುಂಟೂರು ವಿಭಾಗದಿಂದ ಇಂದು ಕದ್ರಾ ಡ್ಯಾಂ ಬಳಿಯಿರುವ ನೆರೆಪೀಡಿತ ಪ್ರದೇಶದಲ್ಲಿ ಅಣುಕು ಕಾರ್ಯಾಚರಣೆ ನಡೆಸಲಾಯಿತು. 

ಉತ್ತರ ಕನ್ನಡ (ಅ. 01):  ಜಿಲ್ಲಾ ಪೊಲೀಸರ ಉಪಸ್ಥಿತಿಯಲ್ಲಿ ಎನ್‌ಡಿಆರ್‌ಎಫ್ 10ನೇ ಬೆಟಾಲಿಯನ್ ಗುಂಟೂರು ವಿಭಾಗದಿಂದ ಇಂದು ಕದ್ರಾ ಡ್ಯಾಂ ಬಳಿಯಿರುವ ನೆರೆಪೀಡಿತ ಪ್ರದೇಶದಲ್ಲಿ ಅಣುಕು ಕಾರ್ಯಾಚರಣೆ ನಡೆಲಾಯಿತು. ಸಿಐಎಸ್‌ಎಫ್, ಜಿಲ್ಲಾ ಆಡಳಿತ ಅಧಿಕಾರಿಗಳು, ಪೊಲೀಸ್ ಅಧಿಕಾರಿ, ಅಗ್ನಿಶಾಮಕದಳ, ಗೃಹರಕ್ಷಕದಳ ಸಿಬ್ಬಂದಿ ಉಪಸ್ಥಿತಿಯಲ್ಲಿ ಎನ್‌ಡಿಆರ್‌ಎಫ್ ಇನ್ಸ್‌ಪೆಕ್ಟರ್ ಸಂಜೀವ್ ಕುಮಾರ್ ನೇತೃತ್ವದ 24 ಮಂದಿಯ ತಂಡದ ಸಹಯೋಗದಲ್ಲಿ ಈ ಅಣುಕು ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. 

ಪ್ರವಾಹದ ಸಂದರ್ಭ ನೀರಿನಲ್ಲಿ ಮುಳುಗಿದ ಜನರನ್ನು ಯಾವ ರೀತಿಯಲ್ಲಿ ರಕ್ಷಣೆ ಮಾಡೋದು, ಬೆಟ್ಟ ಭಾಗದಿಂದ ಜನರನ್ನು ಯಾವ ರೀತಿಯಲ್ಲಿ ಹಗ್ಗದ ಮೂಲಕ ಇಳಿಸೋದು, ದ್ವೀಪದ ನಡುವೆ ಸಿಲುಕಿಕೊಂಡವರನ್ನು ಯಾವ ರೀತಿಯಲ್ಲಿ ರಕ್ಷಣೆ ಮಾಡೋದು ಹಾಗೂ ಟ್ಯೂಬ್ ಬೋಟ್‌ ಚಲಾವಣೆಯೊಂದಿಗೆ ಸಾಹಸ ಮುಂತಾದವುಗಳನ್ನು ಪ್ರದರ್ಶಿಸಿತು. ಕದ್ರಾ ನೆರೆಪೀಡಿತ ಪ್ರದೇಶದಲ್ಲಿ ಎನ್‌ಡಿಆರ್‌ಎಫ್ ತಂಡದ ಸಾಹಸ ಭರಿತ ಅಣುಕು ಪ್ರದರ್ಶನ ನೋಡುಗರನ್ನು ಹುಬ್ಬೇರಿಸುವಂತೆ ಮಾಡಿದೆ. ರಕ್ಷಣಾ ಕಾರ್ಯಾಚರಣೆ ಸಂಬಂಧಿಸಿ ಸ್ಥಳೀಯರಿಗೂ ತರಬೇತಿ ನೀಡಲು ಎನ್‌ಡಿಆರ್‌ಎಫ್ ತಂಡ ಸಿದ್ಧವಾಗಿದ್ದು, ಇದರ ಉಪಯೋಗವನ್ನು ಪಡೆದುಕೊಳ್ಳಬೇಕಿದೆ ಅನ್ನೋದು ಜಿಲ್ಲೆಯ ಜನರ ಅಭಿಪ್ರಾಯ.

 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!