ಪ್ರಕೃತಿ ವಿಕೋಪ ಸಂದರ್ಭಗಳಲ್ಲಿ ಜನರ ರಕ್ಷಣೆ ಹೇಗೆ? ಎನ್‌ಡಿಆರ್‌ಎಫ್  ಅಣಕು ಕಾರ್ಯಾಚರಣೆ

ಪ್ರಕೃತಿ ವಿಕೋಪ ಸಂದರ್ಭಗಳಲ್ಲಿ ಜನರ ರಕ್ಷಣೆ ಹೇಗೆ? ಎನ್‌ಡಿಆರ್‌ಎಫ್ ಅಣಕು ಕಾರ್ಯಾಚರಣೆ

Published : Oct 01, 2021, 05:51 PM IST

ಉತ್ತರ ಕನ್ನಡ ಜಿಲ್ಲಾ ಪೊಲೀಸರ ಉಪಸ್ಥಿತಿಯಲ್ಲಿ ಎನ್‌ಡಿಆರ್‌ಎಫ್ 10ನೇ ಬೆಟಾಲಿಯನ್ ಗುಂಟೂರು ವಿಭಾಗದಿಂದ ಇಂದು ಕದ್ರಾ ಡ್ಯಾಂ ಬಳಿಯಿರುವ ನೆರೆಪೀಡಿತ ಪ್ರದೇಶದಲ್ಲಿ ಅಣುಕು ಕಾರ್ಯಾಚರಣೆ ನಡೆಸಲಾಯಿತು. 

ಉತ್ತರ ಕನ್ನಡ (ಅ. 01):  ಜಿಲ್ಲಾ ಪೊಲೀಸರ ಉಪಸ್ಥಿತಿಯಲ್ಲಿ ಎನ್‌ಡಿಆರ್‌ಎಫ್ 10ನೇ ಬೆಟಾಲಿಯನ್ ಗುಂಟೂರು ವಿಭಾಗದಿಂದ ಇಂದು ಕದ್ರಾ ಡ್ಯಾಂ ಬಳಿಯಿರುವ ನೆರೆಪೀಡಿತ ಪ್ರದೇಶದಲ್ಲಿ ಅಣುಕು ಕಾರ್ಯಾಚರಣೆ ನಡೆಲಾಯಿತು. ಸಿಐಎಸ್‌ಎಫ್, ಜಿಲ್ಲಾ ಆಡಳಿತ ಅಧಿಕಾರಿಗಳು, ಪೊಲೀಸ್ ಅಧಿಕಾರಿ, ಅಗ್ನಿಶಾಮಕದಳ, ಗೃಹರಕ್ಷಕದಳ ಸಿಬ್ಬಂದಿ ಉಪಸ್ಥಿತಿಯಲ್ಲಿ ಎನ್‌ಡಿಆರ್‌ಎಫ್ ಇನ್ಸ್‌ಪೆಕ್ಟರ್ ಸಂಜೀವ್ ಕುಮಾರ್ ನೇತೃತ್ವದ 24 ಮಂದಿಯ ತಂಡದ ಸಹಯೋಗದಲ್ಲಿ ಈ ಅಣುಕು ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. 

ಪ್ರವಾಹದ ಸಂದರ್ಭ ನೀರಿನಲ್ಲಿ ಮುಳುಗಿದ ಜನರನ್ನು ಯಾವ ರೀತಿಯಲ್ಲಿ ರಕ್ಷಣೆ ಮಾಡೋದು, ಬೆಟ್ಟ ಭಾಗದಿಂದ ಜನರನ್ನು ಯಾವ ರೀತಿಯಲ್ಲಿ ಹಗ್ಗದ ಮೂಲಕ ಇಳಿಸೋದು, ದ್ವೀಪದ ನಡುವೆ ಸಿಲುಕಿಕೊಂಡವರನ್ನು ಯಾವ ರೀತಿಯಲ್ಲಿ ರಕ್ಷಣೆ ಮಾಡೋದು ಹಾಗೂ ಟ್ಯೂಬ್ ಬೋಟ್‌ ಚಲಾವಣೆಯೊಂದಿಗೆ ಸಾಹಸ ಮುಂತಾದವುಗಳನ್ನು ಪ್ರದರ್ಶಿಸಿತು. ಕದ್ರಾ ನೆರೆಪೀಡಿತ ಪ್ರದೇಶದಲ್ಲಿ ಎನ್‌ಡಿಆರ್‌ಎಫ್ ತಂಡದ ಸಾಹಸ ಭರಿತ ಅಣುಕು ಪ್ರದರ್ಶನ ನೋಡುಗರನ್ನು ಹುಬ್ಬೇರಿಸುವಂತೆ ಮಾಡಿದೆ. ರಕ್ಷಣಾ ಕಾರ್ಯಾಚರಣೆ ಸಂಬಂಧಿಸಿ ಸ್ಥಳೀಯರಿಗೂ ತರಬೇತಿ ನೀಡಲು ಎನ್‌ಡಿಆರ್‌ಎಫ್ ತಂಡ ಸಿದ್ಧವಾಗಿದ್ದು, ಇದರ ಉಪಯೋಗವನ್ನು ಪಡೆದುಕೊಳ್ಳಬೇಕಿದೆ ಅನ್ನೋದು ಜಿಲ್ಲೆಯ ಜನರ ಅಭಿಪ್ರಾಯ.

 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್