Uttara Kannada: ನಿವೃತ್ತ ಅರಣ್ಯಾಧಿಕಾರಿಯಿಂದ ನೂತನ ಶೈಲಿಯಲ್ಲಿ ಪರಿಸರ ಸಂರಕ್ಷಣೆ..!

Uttara Kannada: ನಿವೃತ್ತ ಅರಣ್ಯಾಧಿಕಾರಿಯಿಂದ ನೂತನ ಶೈಲಿಯಲ್ಲಿ ಪರಿಸರ ಸಂರಕ್ಷಣೆ..!

Suvarna News   | Asianet News
Published : Feb 12, 2022, 01:10 PM IST

*  ನೂರಾರು ವರ್ಷ ಕಾಲ ಬಾಳುವ ಮರಗಳು, ಔಷಧಿ ಗುಣವುಳ್ಳ ಗಿಡಗಳ ಕಾಡು 
*  37 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಎಲ್.ಆರ್. ಹೆಗಡೆ 
*  ಇಳಿ ವಯಸ್ಸಿನಲ್ಲೂ ಕಾಡು ಸಂರಕ್ಷಣೆ ಮಾಡುವ, ಮರ ಬೆಳೆಸುವ ಆಸಕ್ತಿ
 

ಕಾರವಾರ(ಫೆ.12):  ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರುಕಲ್ಲಬ್ಬೆ ಗ್ರಾಮದ ನಿವಾಸಿಯಾಗಿರುವ ನಿವೃತ್ತ ಅರಣ್ಯಾಧಿಕಾರಿ ಎಲ್.ಆರ್. ಹೆಗಡೆ ವಿಶೇಷ ಪದ್ಧತಿಯ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಿದ್ದಾರೆ. ನೂರಾರು ವರ್ಷಗಳ ಕಾಲ ಬೆಳೆಯುವ ಮರಗಳು ಸೇರಿದಂತೆ ಹಲವು ಬಗೆಯ ಔಷಧೀಯ ಗಿಡಗಳನ್ನು ಬೋನ್ಸಾಯ್ ಪದ್ಧತಿಯ ಮೂಲಕ ಬೆಳೆಸಿರುವ ಅವರು ಮನೆಯ ಮುಂದೆ ಅರಣ್ಯವನ್ನೇ ಸೃಷ್ಠಿಸಿದ್ದಾರೆ. 

ಎಲ್.ಆರ್. ಹೆಗಡೆ ಅರಣ್ಯ ಇಲಾಖೆಯಲ್ಲಿ 37 ವರ್ಷಗಳ ಕಾಲ ಸೇವೆ ಸಲ್ಲಿಸಿ ಅರಣ್ಯ ವಲಯಾಧಿಕಾರಿಯಾಗಿ ನಿವೃತ್ತಿಯಾಗಿದ್ದರು. ತಾನು ನಿವೃತ್ತಿಯಾಗಿದ್ದರೂ ತನ್ನ ಅಭ್ಯಾಸ ಹಾಗೂ ಪ್ರಕೃತಿ ಮೇಲಿನ ಪ್ರೀತಿಗೆ ನಿವೃತ್ತಿಯಾಗದಂತೆ ಇಳಿ ವಯಸ್ಸಿನಲ್ಲೂ ಕಾಡು ಸಂರಕ್ಷಣೆ ಮಾಡುವ, ಮರ ಬೆಳೆಸುವ ಆಸಕ್ತಿ ಬೆಳೆಸಿಕೊಂಡಿದ್ದಾರೆ. ಕಳೆದ 7 ವರ್ಷದಿಂದ ಬೋನ್ಸಾಯ್ ಪದ್ಧತಿಯಲ್ಲಿ ಕೃಷಿ ಮಾಡುವ ಮೂಲಕ ಎಲ್ಲರ ಗಮನ ಸೆಳೆಯುತ್ತಿರುವ ಅವರು, ಭಾರತೀಯ ಪರಂಪರೆ ಮತ್ತು ಸಂಸ್ಕೃತಿಯನ್ನು ಅಳವಡಿಸಿಕೊಂಡು, ವರಹಾಮಿಹೀರ ಹಾಗೂ ಇತರ ಋಷಿಮುನಿಗಳು ಬರೆದಂತ ಗ್ರಂಥದ ಅನುಗುಣವಾಗಿ ವನ ನಿರ್ಮಾಣ ಮಾಡಿದ್ದಾರೆ. ಸಪ್ತರ್ಷಿ ವನ, ರಾಶಿ ವನ, ಪಂಚಫಲ ವನ, ನಕ್ಷತ್ರ ವನ, ನವಗ್ರಹವನ ಸೇರಿದಂತೆ ಸುಮಾರು 175ಕ್ಕೂ ಅಧಿಕ ಜಾತಿಯ ಔಷಧಿ ಗುಣವುಳ್ಳ ಹಾಗೂ ಬಹುವರ್ಷ ಬಾಳುವ ಮರಗಳನ್ನು, ಗಿಡಗಳನ್ನು ಬೆಳೆಸಿದ್ದಾರೆ. 

Dharwad: ಕಾಮಗಾರಿ ಓಕೆ, ತೆರಿಗೆ ಕಟ್ಟಲ್ಲ ಯಾಕೆ?: ಟ್ಯಾಕ್ಸ್‌ ಕಟ್ಟದ ಕಂಪನಿಗೆ ಗ್ರಾಪಂ ನೋಟಿಸ್

ಬೋನ್ಸಾಯ್ ಕೃಷಿ ಪದ್ಧತಿಯಲ್ಲಿ ಮರವು ತನ್ನ ಮೂಲ ಗುಣದಲ್ಲಿಯೇ ಬೆಳೆಯುತ್ತಾದರೂ, ಕುಬ್ಜವಾಗಿರುತ್ತೆ. ಈ ಕಾರಣದಿಂದ ಇವುಗಳನ್ನು ಹುಂಡದಲ್ಲಿ ಬೆಳೆಸಲಾಗುತ್ತದೆ. ಈ ಮಾದರಿಯಲ್ಲಿ ಎಲ್.ಆರ್.ಹೆಗಡೆ ಅವರು ಕಲ್ಲಬ್ಬೆಯ ತಮ್ಮ ಮನೆ ಆವರಣದಲ್ಲೇ ಕಲಾನಿಕೇತನ ಕುಬ್ಜವನ ಎಂಬ ಅರಣ್ಯ ನಿರ್ಮಾಣ ಮಾಡಿದ್ದು, ನೂರಾರು ವರ್ಷಗಳ ಕಾಲ ಬದುಕುವ ಮರಗಳನ್ನು ಇಲ್ಲಿ ನೋಡಬಹುದಾಗಿದೆ. ಇನ್ನು ಇಲ್ಲಿ ಔಷಧೀಯ ಗುಣಗಳುಳ್ಳ ಗಿಡಗಳನ್ನು ಬೆಳೆಸಲಾಗಿದ್ದು, ಆಲ, ಅರಳಿ, ಅಶ್ವತ, ಬೀಟೆ, ರಕ್ತ ಚಂದನ, ರುದ್ರಾಕ್ಷಿ, ನೆಲ್ಲಿ, ಅಶ್ವಿನಿ, ದೇವವೃಕ್ಷ ಸೇರಿದಂತೆ ವಿವಿಧ ಜಾತಿಯ 400 ಗಿಡಗಳನ್ನು ಬೆಳೆಸಲಾಗಿದೆ. ಅತೀ ಕಡಿಮೆ ನೀರು ಹಾಗೂ ಕಡಿಮೆ ಜಾಗದಲ್ಲಿ ಈ ಸಣ್ಣ ಕಾಡು ನಿರ್ಮಾಣ ಮಾಡಲಾಗಿದ್ದು, ಇಲ್ಲಿಗೆ ಭೇಟಿ ನೀಡುವ ಯಾವುದೇ ಜನರು ಬೋನ್ಸಾಯ್ ಕೃಷಿ ಪದ್ಧತಿ ಬಗ್ಗೆ ಉಚಿತವಾಗಿ ಮಾಹಿತಿ ಪಡೆಯಬಹುದಾಗಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more