Uttara Kannada: ನಿವೃತ್ತ ಅರಣ್ಯಾಧಿಕಾರಿಯಿಂದ ನೂತನ ಶೈಲಿಯಲ್ಲಿ ಪರಿಸರ ಸಂರಕ್ಷಣೆ..!

Uttara Kannada: ನಿವೃತ್ತ ಅರಣ್ಯಾಧಿಕಾರಿಯಿಂದ ನೂತನ ಶೈಲಿಯಲ್ಲಿ ಪರಿಸರ ಸಂರಕ್ಷಣೆ..!

Suvarna News   | Asianet News
Published : Feb 12, 2022, 01:10 PM IST

*  ನೂರಾರು ವರ್ಷ ಕಾಲ ಬಾಳುವ ಮರಗಳು, ಔಷಧಿ ಗುಣವುಳ್ಳ ಗಿಡಗಳ ಕಾಡು 
*  37 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಎಲ್.ಆರ್. ಹೆಗಡೆ 
*  ಇಳಿ ವಯಸ್ಸಿನಲ್ಲೂ ಕಾಡು ಸಂರಕ್ಷಣೆ ಮಾಡುವ, ಮರ ಬೆಳೆಸುವ ಆಸಕ್ತಿ
 

ಕಾರವಾರ(ಫೆ.12):  ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರುಕಲ್ಲಬ್ಬೆ ಗ್ರಾಮದ ನಿವಾಸಿಯಾಗಿರುವ ನಿವೃತ್ತ ಅರಣ್ಯಾಧಿಕಾರಿ ಎಲ್.ಆರ್. ಹೆಗಡೆ ವಿಶೇಷ ಪದ್ಧತಿಯ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಿದ್ದಾರೆ. ನೂರಾರು ವರ್ಷಗಳ ಕಾಲ ಬೆಳೆಯುವ ಮರಗಳು ಸೇರಿದಂತೆ ಹಲವು ಬಗೆಯ ಔಷಧೀಯ ಗಿಡಗಳನ್ನು ಬೋನ್ಸಾಯ್ ಪದ್ಧತಿಯ ಮೂಲಕ ಬೆಳೆಸಿರುವ ಅವರು ಮನೆಯ ಮುಂದೆ ಅರಣ್ಯವನ್ನೇ ಸೃಷ್ಠಿಸಿದ್ದಾರೆ. 

ಎಲ್.ಆರ್. ಹೆಗಡೆ ಅರಣ್ಯ ಇಲಾಖೆಯಲ್ಲಿ 37 ವರ್ಷಗಳ ಕಾಲ ಸೇವೆ ಸಲ್ಲಿಸಿ ಅರಣ್ಯ ವಲಯಾಧಿಕಾರಿಯಾಗಿ ನಿವೃತ್ತಿಯಾಗಿದ್ದರು. ತಾನು ನಿವೃತ್ತಿಯಾಗಿದ್ದರೂ ತನ್ನ ಅಭ್ಯಾಸ ಹಾಗೂ ಪ್ರಕೃತಿ ಮೇಲಿನ ಪ್ರೀತಿಗೆ ನಿವೃತ್ತಿಯಾಗದಂತೆ ಇಳಿ ವಯಸ್ಸಿನಲ್ಲೂ ಕಾಡು ಸಂರಕ್ಷಣೆ ಮಾಡುವ, ಮರ ಬೆಳೆಸುವ ಆಸಕ್ತಿ ಬೆಳೆಸಿಕೊಂಡಿದ್ದಾರೆ. ಕಳೆದ 7 ವರ್ಷದಿಂದ ಬೋನ್ಸಾಯ್ ಪದ್ಧತಿಯಲ್ಲಿ ಕೃಷಿ ಮಾಡುವ ಮೂಲಕ ಎಲ್ಲರ ಗಮನ ಸೆಳೆಯುತ್ತಿರುವ ಅವರು, ಭಾರತೀಯ ಪರಂಪರೆ ಮತ್ತು ಸಂಸ್ಕೃತಿಯನ್ನು ಅಳವಡಿಸಿಕೊಂಡು, ವರಹಾಮಿಹೀರ ಹಾಗೂ ಇತರ ಋಷಿಮುನಿಗಳು ಬರೆದಂತ ಗ್ರಂಥದ ಅನುಗುಣವಾಗಿ ವನ ನಿರ್ಮಾಣ ಮಾಡಿದ್ದಾರೆ. ಸಪ್ತರ್ಷಿ ವನ, ರಾಶಿ ವನ, ಪಂಚಫಲ ವನ, ನಕ್ಷತ್ರ ವನ, ನವಗ್ರಹವನ ಸೇರಿದಂತೆ ಸುಮಾರು 175ಕ್ಕೂ ಅಧಿಕ ಜಾತಿಯ ಔಷಧಿ ಗುಣವುಳ್ಳ ಹಾಗೂ ಬಹುವರ್ಷ ಬಾಳುವ ಮರಗಳನ್ನು, ಗಿಡಗಳನ್ನು ಬೆಳೆಸಿದ್ದಾರೆ. 

Dharwad: ಕಾಮಗಾರಿ ಓಕೆ, ತೆರಿಗೆ ಕಟ್ಟಲ್ಲ ಯಾಕೆ?: ಟ್ಯಾಕ್ಸ್‌ ಕಟ್ಟದ ಕಂಪನಿಗೆ ಗ್ರಾಪಂ ನೋಟಿಸ್

ಬೋನ್ಸಾಯ್ ಕೃಷಿ ಪದ್ಧತಿಯಲ್ಲಿ ಮರವು ತನ್ನ ಮೂಲ ಗುಣದಲ್ಲಿಯೇ ಬೆಳೆಯುತ್ತಾದರೂ, ಕುಬ್ಜವಾಗಿರುತ್ತೆ. ಈ ಕಾರಣದಿಂದ ಇವುಗಳನ್ನು ಹುಂಡದಲ್ಲಿ ಬೆಳೆಸಲಾಗುತ್ತದೆ. ಈ ಮಾದರಿಯಲ್ಲಿ ಎಲ್.ಆರ್.ಹೆಗಡೆ ಅವರು ಕಲ್ಲಬ್ಬೆಯ ತಮ್ಮ ಮನೆ ಆವರಣದಲ್ಲೇ ಕಲಾನಿಕೇತನ ಕುಬ್ಜವನ ಎಂಬ ಅರಣ್ಯ ನಿರ್ಮಾಣ ಮಾಡಿದ್ದು, ನೂರಾರು ವರ್ಷಗಳ ಕಾಲ ಬದುಕುವ ಮರಗಳನ್ನು ಇಲ್ಲಿ ನೋಡಬಹುದಾಗಿದೆ. ಇನ್ನು ಇಲ್ಲಿ ಔಷಧೀಯ ಗುಣಗಳುಳ್ಳ ಗಿಡಗಳನ್ನು ಬೆಳೆಸಲಾಗಿದ್ದು, ಆಲ, ಅರಳಿ, ಅಶ್ವತ, ಬೀಟೆ, ರಕ್ತ ಚಂದನ, ರುದ್ರಾಕ್ಷಿ, ನೆಲ್ಲಿ, ಅಶ್ವಿನಿ, ದೇವವೃಕ್ಷ ಸೇರಿದಂತೆ ವಿವಿಧ ಜಾತಿಯ 400 ಗಿಡಗಳನ್ನು ಬೆಳೆಸಲಾಗಿದೆ. ಅತೀ ಕಡಿಮೆ ನೀರು ಹಾಗೂ ಕಡಿಮೆ ಜಾಗದಲ್ಲಿ ಈ ಸಣ್ಣ ಕಾಡು ನಿರ್ಮಾಣ ಮಾಡಲಾಗಿದ್ದು, ಇಲ್ಲಿಗೆ ಭೇಟಿ ನೀಡುವ ಯಾವುದೇ ಜನರು ಬೋನ್ಸಾಯ್ ಕೃಷಿ ಪದ್ಧತಿ ಬಗ್ಗೆ ಉಚಿತವಾಗಿ ಮಾಹಿತಿ ಪಡೆಯಬಹುದಾಗಿದೆ. 
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more