Uttara Kannada: ನಿವೃತ್ತ ಅರಣ್ಯಾಧಿಕಾರಿಯಿಂದ ನೂತನ ಶೈಲಿಯಲ್ಲಿ ಪರಿಸರ ಸಂರಕ್ಷಣೆ..!

Uttara Kannada: ನಿವೃತ್ತ ಅರಣ್ಯಾಧಿಕಾರಿಯಿಂದ ನೂತನ ಶೈಲಿಯಲ್ಲಿ ಪರಿಸರ ಸಂರಕ್ಷಣೆ..!

Suvarna News   | Asianet News
Published : Feb 12, 2022, 01:10 PM IST

*  ನೂರಾರು ವರ್ಷ ಕಾಲ ಬಾಳುವ ಮರಗಳು, ಔಷಧಿ ಗುಣವುಳ್ಳ ಗಿಡಗಳ ಕಾಡು 
*  37 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಎಲ್.ಆರ್. ಹೆಗಡೆ 
*  ಇಳಿ ವಯಸ್ಸಿನಲ್ಲೂ ಕಾಡು ಸಂರಕ್ಷಣೆ ಮಾಡುವ, ಮರ ಬೆಳೆಸುವ ಆಸಕ್ತಿ
 

ಕಾರವಾರ(ಫೆ.12):  ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರುಕಲ್ಲಬ್ಬೆ ಗ್ರಾಮದ ನಿವಾಸಿಯಾಗಿರುವ ನಿವೃತ್ತ ಅರಣ್ಯಾಧಿಕಾರಿ ಎಲ್.ಆರ್. ಹೆಗಡೆ ವಿಶೇಷ ಪದ್ಧತಿಯ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಿದ್ದಾರೆ. ನೂರಾರು ವರ್ಷಗಳ ಕಾಲ ಬೆಳೆಯುವ ಮರಗಳು ಸೇರಿದಂತೆ ಹಲವು ಬಗೆಯ ಔಷಧೀಯ ಗಿಡಗಳನ್ನು ಬೋನ್ಸಾಯ್ ಪದ್ಧತಿಯ ಮೂಲಕ ಬೆಳೆಸಿರುವ ಅವರು ಮನೆಯ ಮುಂದೆ ಅರಣ್ಯವನ್ನೇ ಸೃಷ್ಠಿಸಿದ್ದಾರೆ. 

ಎಲ್.ಆರ್. ಹೆಗಡೆ ಅರಣ್ಯ ಇಲಾಖೆಯಲ್ಲಿ 37 ವರ್ಷಗಳ ಕಾಲ ಸೇವೆ ಸಲ್ಲಿಸಿ ಅರಣ್ಯ ವಲಯಾಧಿಕಾರಿಯಾಗಿ ನಿವೃತ್ತಿಯಾಗಿದ್ದರು. ತಾನು ನಿವೃತ್ತಿಯಾಗಿದ್ದರೂ ತನ್ನ ಅಭ್ಯಾಸ ಹಾಗೂ ಪ್ರಕೃತಿ ಮೇಲಿನ ಪ್ರೀತಿಗೆ ನಿವೃತ್ತಿಯಾಗದಂತೆ ಇಳಿ ವಯಸ್ಸಿನಲ್ಲೂ ಕಾಡು ಸಂರಕ್ಷಣೆ ಮಾಡುವ, ಮರ ಬೆಳೆಸುವ ಆಸಕ್ತಿ ಬೆಳೆಸಿಕೊಂಡಿದ್ದಾರೆ. ಕಳೆದ 7 ವರ್ಷದಿಂದ ಬೋನ್ಸಾಯ್ ಪದ್ಧತಿಯಲ್ಲಿ ಕೃಷಿ ಮಾಡುವ ಮೂಲಕ ಎಲ್ಲರ ಗಮನ ಸೆಳೆಯುತ್ತಿರುವ ಅವರು, ಭಾರತೀಯ ಪರಂಪರೆ ಮತ್ತು ಸಂಸ್ಕೃತಿಯನ್ನು ಅಳವಡಿಸಿಕೊಂಡು, ವರಹಾಮಿಹೀರ ಹಾಗೂ ಇತರ ಋಷಿಮುನಿಗಳು ಬರೆದಂತ ಗ್ರಂಥದ ಅನುಗುಣವಾಗಿ ವನ ನಿರ್ಮಾಣ ಮಾಡಿದ್ದಾರೆ. ಸಪ್ತರ್ಷಿ ವನ, ರಾಶಿ ವನ, ಪಂಚಫಲ ವನ, ನಕ್ಷತ್ರ ವನ, ನವಗ್ರಹವನ ಸೇರಿದಂತೆ ಸುಮಾರು 175ಕ್ಕೂ ಅಧಿಕ ಜಾತಿಯ ಔಷಧಿ ಗುಣವುಳ್ಳ ಹಾಗೂ ಬಹುವರ್ಷ ಬಾಳುವ ಮರಗಳನ್ನು, ಗಿಡಗಳನ್ನು ಬೆಳೆಸಿದ್ದಾರೆ. 

Dharwad: ಕಾಮಗಾರಿ ಓಕೆ, ತೆರಿಗೆ ಕಟ್ಟಲ್ಲ ಯಾಕೆ?: ಟ್ಯಾಕ್ಸ್‌ ಕಟ್ಟದ ಕಂಪನಿಗೆ ಗ್ರಾಪಂ ನೋಟಿಸ್

ಬೋನ್ಸಾಯ್ ಕೃಷಿ ಪದ್ಧತಿಯಲ್ಲಿ ಮರವು ತನ್ನ ಮೂಲ ಗುಣದಲ್ಲಿಯೇ ಬೆಳೆಯುತ್ತಾದರೂ, ಕುಬ್ಜವಾಗಿರುತ್ತೆ. ಈ ಕಾರಣದಿಂದ ಇವುಗಳನ್ನು ಹುಂಡದಲ್ಲಿ ಬೆಳೆಸಲಾಗುತ್ತದೆ. ಈ ಮಾದರಿಯಲ್ಲಿ ಎಲ್.ಆರ್.ಹೆಗಡೆ ಅವರು ಕಲ್ಲಬ್ಬೆಯ ತಮ್ಮ ಮನೆ ಆವರಣದಲ್ಲೇ ಕಲಾನಿಕೇತನ ಕುಬ್ಜವನ ಎಂಬ ಅರಣ್ಯ ನಿರ್ಮಾಣ ಮಾಡಿದ್ದು, ನೂರಾರು ವರ್ಷಗಳ ಕಾಲ ಬದುಕುವ ಮರಗಳನ್ನು ಇಲ್ಲಿ ನೋಡಬಹುದಾಗಿದೆ. ಇನ್ನು ಇಲ್ಲಿ ಔಷಧೀಯ ಗುಣಗಳುಳ್ಳ ಗಿಡಗಳನ್ನು ಬೆಳೆಸಲಾಗಿದ್ದು, ಆಲ, ಅರಳಿ, ಅಶ್ವತ, ಬೀಟೆ, ರಕ್ತ ಚಂದನ, ರುದ್ರಾಕ್ಷಿ, ನೆಲ್ಲಿ, ಅಶ್ವಿನಿ, ದೇವವೃಕ್ಷ ಸೇರಿದಂತೆ ವಿವಿಧ ಜಾತಿಯ 400 ಗಿಡಗಳನ್ನು ಬೆಳೆಸಲಾಗಿದೆ. ಅತೀ ಕಡಿಮೆ ನೀರು ಹಾಗೂ ಕಡಿಮೆ ಜಾಗದಲ್ಲಿ ಈ ಸಣ್ಣ ಕಾಡು ನಿರ್ಮಾಣ ಮಾಡಲಾಗಿದ್ದು, ಇಲ್ಲಿಗೆ ಭೇಟಿ ನೀಡುವ ಯಾವುದೇ ಜನರು ಬೋನ್ಸಾಯ್ ಕೃಷಿ ಪದ್ಧತಿ ಬಗ್ಗೆ ಉಚಿತವಾಗಿ ಮಾಹಿತಿ ಪಡೆಯಬಹುದಾಗಿದೆ. 
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more