Uttara Kannada: ಸುಮಾರು 1,500ಕ್ಕೂ ಹೆಚ್ಚು ಆಲಿವ್ ರಿಡ್ಲೇ ಸಮುದ್ರಕ್ಕೆ ಸೇರಿಸಿದ ಅರಣ್ಯ ಇಲಾಖೆ

Uttara Kannada: ಸುಮಾರು 1,500ಕ್ಕೂ ಹೆಚ್ಚು ಆಲಿವ್ ರಿಡ್ಲೇ ಸಮುದ್ರಕ್ಕೆ ಸೇರಿಸಿದ ಅರಣ್ಯ ಇಲಾಖೆ

Suvarna News   | Asianet News
Published : Mar 10, 2022, 03:46 PM IST

ಕಡಲಾಮೆಗಳು ಇತ್ತೀಚಿನ ದಿನಗಳಲ್ಲಿ ಅಳಿವಿನ ಅಂಚಿನಲ್ಲಿರುವ ಪ್ರಭೇದಗಳ ಸಾಲಿಗೆ ಸೇರಿವೆ. ಈ ಆಮೆಗಳ ಸಂತತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲೆಯ ಅರಣ್ಯ ಇಲಾಖೆ ಇವುಗಳ ಮೊಟ್ಟೆಗಳನ್ನು ಸಂರಕ್ಷಿಸುವ ಕೆಲಸವನ್ನ ಆರಂಭಿಸಿದೆ. 

ಕಡಲಾಮೆಗಳು ಇತ್ತೀಚಿನ ದಿನಗಳಲ್ಲಿ ಅಳಿವಿನ ಅಂಚಿನಲ್ಲಿರುವ ಪ್ರಭೇದಗಳ ಸಾಲಿಗೆ ಸೇರಿವೆ. ಈ ಆಮೆಗಳ ಸಂತತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲೆಯ ಅರಣ್ಯ ಇಲಾಖೆ ಇವುಗಳ ಮೊಟ್ಟೆಗಳನ್ನು ಸಂರಕ್ಷಿಸುವ ಕೆಲಸವನ್ನ ಆರಂಭಿಸಿದೆ. ಹೀಗೆ ಸಂರಕ್ಷಿಸಲಾಗಿದ್ದ ಮೊಟ್ಟೆಗಳು ಇದೀಗ ಮರಿಗಳಾಗಿ ಹೊರಬಂದಿದ್ದು, ಅವುಗಳನ್ನ ಇಂದು ಸಮುದ್ರಕ್ಕೆ ಸೇರಿಸುವ ಕಾರ್ಯವನ್ನು ಮಾಡಲಾಯಿತು.

ಕಾರವಾರ ತಾಲ್ಲೂಕಿನ ದೇವಭಾಗ್ ಕಡಲತೀರದಲ್ಲಿ. ಅರಣ್ಯ ಇಲಾಖೆ ವತಿಯಿಂದ ಇದೇ ಮೊದಲಬಾರಿಗೆ ದೇವಭಾಗ್ ಕಡಲತೀರದಲ್ಲಿ ಆಲಿವ್ ರಿಡ್ಲೇ ಪ್ರಭೇದದ ಆಮೆಯ ಮೊಟ್ಟೆಗಳನ್ನು ಸಂರಕ್ಷಿಸಿಡಲಾಗಿದ್ದು,  ಆ ಮೊಟ್ಟೆಗಳು ಒಡೆದು ಮರಿಗಳು ಹೊರಬಂದಿವೆ. ಈ ನಿಟ್ಟಿನಲ್ಲಿ ಸಂರಕ್ಷಿಸಲ್ಪಟ್ಟ ಆಮೆಯ ಮರಿಗಳನ್ನು ಸುರಕ್ಷಿತವಾಗಿ ಸಮುದ್ರಕ್ಕೆ ಸೇರಿಸುವ ಕೆಲಸವನ್ನು ಅರಣ್ಯ ಇಲಾಖೆ ಮಾಡಿದೆ. ದೇವಭಾಗ್ ಕಡಲತೀರದಲ್ಲಿ ಕಳೆದ ಜನವರಿಯಲ್ಲಿ ಆಲಿವ್ ರಿಡ್ಲೇ ಕಡಲಾಮೆ ಒಟ್ಟು 103 ಮೊಟ್ಟೆಗಳನ್ನು ಇಟ್ಟಿದ್ದು, ಅವುಗಳನ್ನು ಕಡಲತೀರದಲ್ಲಿಯೇ ಪಂಜರ ಹಾಕಿ ಸಂರಕ್ಷಿಸಲಾಗಿತ್ತು. 

ಇಂದು ಆ ಮೊಟ್ಟೆಗಳು ಮರಿಗಳಾಗಿ ಹೊರಬಂದಿವೆ. ಕಡಲಾಮೆ ಮೊಟ್ಟೆಗಳು 45 ರಿಂದ 60 ದಿನಗಳಲ್ಲಿ ಮರಿಗಳಾಗಿ ಹೊರಬರುತ್ತವೆ. ಹೀಗಾಗಿ ಆಮೆಗಳು ಮೊಟ್ಟೆ ಇಟ್ಟ ಸ್ಥಳದಲ್ಲಿಯೇ ಅವುಗಳ ಗೂಡಿಗೆ ಪಂಜರ ಹಾಕಿ ನಾಯಿ ಇಲ್ಲವೇ ಇತರೆ ಪ್ರಾಣಿಗಳಿಗೆ ಸಿಗದಂತೆ ರಕ್ಷಣೆ ಮಾಡಲಾಗುತ್ತದೆ. ಬಳಿಕ ಅವುಗಳು ಮರಿಯಾದ ಬಳಿಕ ಸಮುದ್ರಕ್ಕೆ ಬಿಡಲಾಗುತ್ತದೆ. ಈ ಮೂಲಕ ಅಳಿವಿನ ಅಂಚಿನಲ್ಲಿರುವ ಕಡಲಾಮೆ ಸಂತತಿಯನ್ನು ಸಂರಕ್ಷಿಸಲು ಅರಣ್ಯ ಇಲಾಖೆ ಕಾರ್ಯಪ್ರವೃತ್ತವಾಗಿದೆ. 

 ಇನ್ನು ಕಡಲಾಮೆಗಳಲ್ಲಿ 7 ಪ್ರಭೇದಗಳಿದ್ದು, ರಾಜ್ಯದ ಕಡಲತೀರದಲ್ಲಿ 3 ಬಗೆಯ ಕಡಲಾಮೆಗಳನ್ನು ಗುರುತಿಸಲಾಗಿದೆ. ಅವುಗಳಲ್ಲಿ ಆಲಿವ್ ರಿಡ್ಲೇ ಕಡಲಾಮೆ ಮಾತ್ರ ಕಡಲತೀರದಲ್ಲಿ ಮೊಟ್ಟೆ ಇಡುವ ಪ್ರಭೇದವಾಗಿದೆ. ಕಡಲಾಮೆಗಳ ಸಂತತಿ ಅಳಿವಿನ ಅಂಚಿನಲ್ಲಿರುವ ಕಾರಣದಿಂದ ಜಿಲ್ಲೆಯ ಅರಣ್ಯ ಇಲಾಖೆ ಅವುಗಳ ರಕ್ಷಣೆಗೆ ಕೋಸ್ಟಲ್ ಮರೈನ್ ಆ್ಯಂಡ್ ಇಕೋ ಸಿಸ್ಟಮ್ ಎನ್ನುವ ವಿಭಾಗವನ್ನು ರೂಪಿಸಿದೆ. ಇದರಡಿಯಲ್ಲಿ ಈಗಾಗಲೇ ಕಾರವಾರ ವಿಭಾಗದ ದೇವಭಾಗ್ ಹಾಗೂ ಅಂಕೋಲಾದ ಖೇಣಿ ಕಡಲತೀರದಲ್ಲಿ ಒಟ್ಟು 14 ಕಡೆ ಆಮೆಯ ಗೂಡುಗಳನ್ನು ಪತ್ತೆ ಹಚ್ಚಲಾಗಿದ್ದು, ಸರಿಸುಮಾರು 1,500ಕ್ಕೂ ಅಧಿಕ ಆಮೆಯ ಮೊಟ್ಟೆಗಳನ್ನು ಸಂರಕ್ಷಿಸಲಾಗಿದೆ. 
ಅಲ್ಲದೇ, ಆಮೆಯ ಗೂಡುಗಳ ಕುರಿತು ಮಾಹಿತಿ ನೀಡುವ ಸಾರ್ವಜನಿಕರಿಗೆ ಒಂದು ಸಾವಿರ ರೂಪಾಯಿ ಸಹಾಯಧನ ನೀಡುತ್ತಿದ್ದು, ಇದರಿಂದ ಸಾರ್ವಜನಿಕರಿಂದಲೂ ಇದೀಗ ಕಡಲಾಮೆ ಸಂತತಿ ರಕ್ಷಣೆಗೆ ಸಹಕಾರಿಯಾಗಿದೆ. ಇನ್ನು, ಕಡಲಾಮೆಗಳು ಕಡಲ ಪರಿಸರದ ಸಮತೋಲನ ಕಾಯ್ದುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುವುದರಿಂದ ಅವುಗಳ ರಕ್ಷಣೆ ಅತ್ಯಗತ್ಯವಾಗಿದೆ. 
 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more