ಪಾಲಿಕೆ ಯಡವಟ್ಟಿಗೆ ಜನ ಜೀವನ ಅಸ್ತವ್ಯಸ್ತ: ರಸ್ತೆಯನ್ನೇ ಪಾರ್ಕ್ ಮಾಡಲು ಮುಂದಾದ ಪಾಲಿಕೆ

ಪಾಲಿಕೆ ಯಡವಟ್ಟಿಗೆ ಜನ ಜೀವನ ಅಸ್ತವ್ಯಸ್ತ: ರಸ್ತೆಯನ್ನೇ ಪಾರ್ಕ್ ಮಾಡಲು ಮುಂದಾದ ಪಾಲಿಕೆ

Published : Sep 13, 2023, 10:25 AM IST

ಮಕ್ಕಳು ಶಾಲೆಗೆ ಹೋಗಲು ಪರದಾಡುತ್ತಿರುವ ದೃಶ್ಯ. ಮತ್ತೊಂದೆಡೆ ರಸ್ತೆ ಇಲ್ಲದೆ ಬೇಸತ್ತ ಸಾರ್ವಜನಿಕರು. ಅಷ್ಟಕ್ಕೂ ಇಲ್ಲಿ ರಸ್ತೆಯೇ ಇರಲಿಲ್ಲ ಅಂತಲ್ಲ. ಕಳೆದ ಹತ್ತಾರು ವರ್ಷಗಳಿಂದ ಈ ಜನರು ಓಡಾಡುತ್ತಿದ್ದ ರಸ್ತೆ ಈಗ ಇದ್ದಕ್ಕಿದ್ದ ಹಾಗೆ ಮಾಯವಾಗಿಬಿಟ್ಟಿದೆ.
 

ರಸ್ತೆ ಎಲ್ಲಿ ಹೋಯ್ತು ಅಂತೀರಾ.. ಇದು ತುಮಕೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಮಾಡಿದ ಯಡವಟ್ಟು. ಪಾಲಿಕೆ ವ್ಯಾಪ್ತಿಯ 28ನೇ ವಾರ್ಡ್‌ಗೆ ಸೇರುವ ಸರಸ್ವತಿಪುರಂನ 10ನೇ A ಕ್ರಾಸ್‌ನ ಜನರಿಗೆ ರಸ್ತೆಯಿತ್ತು. ಸುಮಾರು 200ಕ್ಕೂ ಹೆಚ್ಚು ಮನೆಗಳಿಗೆ (houses)ಅನುಕೂಲವಾಗಿದ್ದ ಈ ರಸ್ತೆ ಜಾಗದಲ್ಲಿಯೇ ಹೊಸ ಪಾರ್ಕ್(Park) ನಿರ್ಮಾಣಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. ಹೀಗಾಗಿ ಇಲ್ಲಿನ ಜನ ಐದು ನಿಮಿಷ‌ದ ದಾರಿ ಬದಲು ಈಗ ಒಂದೂವರೆ ಕಿಲೋಮೀಟರ್ ಸುತ್ತಿ ಬಳಸಿ ಮನೆ ಸೇರುವಂತಾಗಿದೆ. 30 ವರ್ಷದ ಹಿಂದೆ ಸೂಕ್ತ ರಸ್ತೆ ಇಲ್ಲದ ಬಡಾವಣೆ ನಕ್ಷೆಗೆ  ಟೂಡಾ ಹಾಗೂ ಪಾಲಿಕೆ ಅಧಿಕಾರಿಗಳು ಎನ್‌ಒಸಿ ನೀಡಿದ್ದಾರೆ. ಈ ವಿಚಾರ ಕೋರ್ಟ್ ಗಮನಕ್ಕೆ ತರದೆ, ವಾಸ್ತವ ಪರಿಸ್ಥಿತಿ ಮುಚ್ಚಿಟ್ಟ  ಪರಿಣಾಮ, ಕೋರ್ಟ್ ನಿಂದ ವ್ಯತಿರಿಕ್ತ ತೀರ್ಪು ಬಂದಿದೆ. ವಾಸ್ತವಿಕವಾಗಿ ಈ ಬಡಾವಣೆಗೆ ಸೂಕ್ತ ರಸ್ತೆ ಇಲ್ಲದೆ ಇರುವುದು ಹಾಗೂ ಬಡಾವಣೆಯ ಬೇರೆ ಕಡೆ ಪಾರ್ಕ್ ಜಾಗ ಇರುವುದನ್ನು ಅಧಿಕಾರಿಗಳು ಕೋರ್ಟ್ ಗಮನಕ್ಕೆ ತಂದಿಲ್ಲ, ತಮ್ಮ ಯಡವಟ್ಟು ಮುಚ್ಚಿ ಹಾಕೊಳ್ಳಲು ಹಾಗೂ ಹೈ ಕೋರ್ಟ್(High court) ನಿಂದ ಛೀಮಾರಿ ಹಾಕಿಸಿಕೊಳ್ಳೋದನ್ನು ತಪ್ಪಿಸಿಕೊಳ್ಳಲು ಹೀಗೆ ಮಾಡಿದೆ.


ಸದ್ಯ ಇಲ್ಲಿನ ರಸ್ತೆ‌ ಮುಚ್ಚಿ‌ ಪಾರ್ಕ್ ನಿರ್ಮಾಣ ಮಾಡುವಂತೆ ಹೈ ಕೋರ್ಟ್ ಆದೇಶ ನೀಡಿದೆ. ಇದರ ವಿರುದ್ಧ 2022ರಲ್ಲೇ ಬಡಾವಣೆಯ ನಿವಾಸಿಗಳಾದ ಗಂಗಯ್ಯ, ಬಸವರಾಜು, ನರಸಪ್ಪ, ಲಕ್ಕಪ್ಪಗೌಡ, ರಂಗಮ್ಮ, ದೇವಿಕಾ ಎಂಬುವರು ತುಮಕೂರು ಪಾಲಿಕೆ ಕಮಿಷನರ್,‌ ಡೆಪ್ಯೂಟಿ ಕಮಿಷನರ್, ಟೂಡಾ ಕಮಿಷನರ್, ಸ್ಮಾರ್ಟ್ ಸಿಟಿ ಎಂಡಿ, ಟೂಡಾ ಅಧ್ಯಕ್ಷರ ವಿರುದ್ದ ಕೋರ್ಟ್ ನಲ್ಲಿ ಕೇಸ್ ದಾಖಲಿಸಿದ್ರು. ಆದ್ರೆ ಪ್ರಯೋಜನವಾಗಿಲ್ಲ. 

ಇದನ್ನೂ ವೀಕ್ಷಿಸಿ:  ಮಚ್ಚಿನಿಂದ ಪತ್ನಿ ಕೊಚ್ಚಿ ಕೊಂದ ಪತಿ: ಮಾವನ ಮೇಲೂ ಮಾರಣಾಂತಿಕ ಹಲ್ಲೆ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!