ಪಾಲಿಕೆ ಯಡವಟ್ಟಿಗೆ ಜನ ಜೀವನ ಅಸ್ತವ್ಯಸ್ತ: ರಸ್ತೆಯನ್ನೇ ಪಾರ್ಕ್ ಮಾಡಲು ಮುಂದಾದ ಪಾಲಿಕೆ

ಪಾಲಿಕೆ ಯಡವಟ್ಟಿಗೆ ಜನ ಜೀವನ ಅಸ್ತವ್ಯಸ್ತ: ರಸ್ತೆಯನ್ನೇ ಪಾರ್ಕ್ ಮಾಡಲು ಮುಂದಾದ ಪಾಲಿಕೆ

Published : Sep 13, 2023, 10:25 AM IST

ಮಕ್ಕಳು ಶಾಲೆಗೆ ಹೋಗಲು ಪರದಾಡುತ್ತಿರುವ ದೃಶ್ಯ. ಮತ್ತೊಂದೆಡೆ ರಸ್ತೆ ಇಲ್ಲದೆ ಬೇಸತ್ತ ಸಾರ್ವಜನಿಕರು. ಅಷ್ಟಕ್ಕೂ ಇಲ್ಲಿ ರಸ್ತೆಯೇ ಇರಲಿಲ್ಲ ಅಂತಲ್ಲ. ಕಳೆದ ಹತ್ತಾರು ವರ್ಷಗಳಿಂದ ಈ ಜನರು ಓಡಾಡುತ್ತಿದ್ದ ರಸ್ತೆ ಈಗ ಇದ್ದಕ್ಕಿದ್ದ ಹಾಗೆ ಮಾಯವಾಗಿಬಿಟ್ಟಿದೆ.
 

ರಸ್ತೆ ಎಲ್ಲಿ ಹೋಯ್ತು ಅಂತೀರಾ.. ಇದು ತುಮಕೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಮಾಡಿದ ಯಡವಟ್ಟು. ಪಾಲಿಕೆ ವ್ಯಾಪ್ತಿಯ 28ನೇ ವಾರ್ಡ್‌ಗೆ ಸೇರುವ ಸರಸ್ವತಿಪುರಂನ 10ನೇ A ಕ್ರಾಸ್‌ನ ಜನರಿಗೆ ರಸ್ತೆಯಿತ್ತು. ಸುಮಾರು 200ಕ್ಕೂ ಹೆಚ್ಚು ಮನೆಗಳಿಗೆ (houses)ಅನುಕೂಲವಾಗಿದ್ದ ಈ ರಸ್ತೆ ಜಾಗದಲ್ಲಿಯೇ ಹೊಸ ಪಾರ್ಕ್(Park) ನಿರ್ಮಾಣಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. ಹೀಗಾಗಿ ಇಲ್ಲಿನ ಜನ ಐದು ನಿಮಿಷ‌ದ ದಾರಿ ಬದಲು ಈಗ ಒಂದೂವರೆ ಕಿಲೋಮೀಟರ್ ಸುತ್ತಿ ಬಳಸಿ ಮನೆ ಸೇರುವಂತಾಗಿದೆ. 30 ವರ್ಷದ ಹಿಂದೆ ಸೂಕ್ತ ರಸ್ತೆ ಇಲ್ಲದ ಬಡಾವಣೆ ನಕ್ಷೆಗೆ  ಟೂಡಾ ಹಾಗೂ ಪಾಲಿಕೆ ಅಧಿಕಾರಿಗಳು ಎನ್‌ಒಸಿ ನೀಡಿದ್ದಾರೆ. ಈ ವಿಚಾರ ಕೋರ್ಟ್ ಗಮನಕ್ಕೆ ತರದೆ, ವಾಸ್ತವ ಪರಿಸ್ಥಿತಿ ಮುಚ್ಚಿಟ್ಟ  ಪರಿಣಾಮ, ಕೋರ್ಟ್ ನಿಂದ ವ್ಯತಿರಿಕ್ತ ತೀರ್ಪು ಬಂದಿದೆ. ವಾಸ್ತವಿಕವಾಗಿ ಈ ಬಡಾವಣೆಗೆ ಸೂಕ್ತ ರಸ್ತೆ ಇಲ್ಲದೆ ಇರುವುದು ಹಾಗೂ ಬಡಾವಣೆಯ ಬೇರೆ ಕಡೆ ಪಾರ್ಕ್ ಜಾಗ ಇರುವುದನ್ನು ಅಧಿಕಾರಿಗಳು ಕೋರ್ಟ್ ಗಮನಕ್ಕೆ ತಂದಿಲ್ಲ, ತಮ್ಮ ಯಡವಟ್ಟು ಮುಚ್ಚಿ ಹಾಕೊಳ್ಳಲು ಹಾಗೂ ಹೈ ಕೋರ್ಟ್(High court) ನಿಂದ ಛೀಮಾರಿ ಹಾಕಿಸಿಕೊಳ್ಳೋದನ್ನು ತಪ್ಪಿಸಿಕೊಳ್ಳಲು ಹೀಗೆ ಮಾಡಿದೆ.


ಸದ್ಯ ಇಲ್ಲಿನ ರಸ್ತೆ‌ ಮುಚ್ಚಿ‌ ಪಾರ್ಕ್ ನಿರ್ಮಾಣ ಮಾಡುವಂತೆ ಹೈ ಕೋರ್ಟ್ ಆದೇಶ ನೀಡಿದೆ. ಇದರ ವಿರುದ್ಧ 2022ರಲ್ಲೇ ಬಡಾವಣೆಯ ನಿವಾಸಿಗಳಾದ ಗಂಗಯ್ಯ, ಬಸವರಾಜು, ನರಸಪ್ಪ, ಲಕ್ಕಪ್ಪಗೌಡ, ರಂಗಮ್ಮ, ದೇವಿಕಾ ಎಂಬುವರು ತುಮಕೂರು ಪಾಲಿಕೆ ಕಮಿಷನರ್,‌ ಡೆಪ್ಯೂಟಿ ಕಮಿಷನರ್, ಟೂಡಾ ಕಮಿಷನರ್, ಸ್ಮಾರ್ಟ್ ಸಿಟಿ ಎಂಡಿ, ಟೂಡಾ ಅಧ್ಯಕ್ಷರ ವಿರುದ್ದ ಕೋರ್ಟ್ ನಲ್ಲಿ ಕೇಸ್ ದಾಖಲಿಸಿದ್ರು. ಆದ್ರೆ ಪ್ರಯೋಜನವಾಗಿಲ್ಲ. 

ಇದನ್ನೂ ವೀಕ್ಷಿಸಿ:  ಮಚ್ಚಿನಿಂದ ಪತ್ನಿ ಕೊಚ್ಚಿ ಕೊಂದ ಪತಿ: ಮಾವನ ಮೇಲೂ ಮಾರಣಾಂತಿಕ ಹಲ್ಲೆ

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ