'ಹೆಡಗೇವಾರ್‌ಗಿಂತ ಈ ರೋಹಿತ್ ಚಕ್ರತೀರ್ಥ ಒಂದು ಹೆಜ್ಜೆ ಮುಂದಿದ್ದಾನೆ': ಸಿದ್ದರಾಮಯ್ಯ ವಾಗ್ದಾಳಿ

'ಹೆಡಗೇವಾರ್‌ಗಿಂತ ಈ ರೋಹಿತ್ ಚಕ್ರತೀರ್ಥ ಒಂದು ಹೆಜ್ಜೆ ಮುಂದಿದ್ದಾನೆ': ಸಿದ್ದರಾಮಯ್ಯ ವಾಗ್ದಾಳಿ

Published : May 27, 2022, 06:03 PM ISTUpdated : May 27, 2022, 06:04 PM IST

"ನಮ್ಮ ದೇಶ ಎಲ್ಲಿಗೆ ಹೋಗುತ್ತಿದ ಎಂದು ಊಹಿಸಿಕೊಳ್ಳಿ, ಹೆಡ್ಗೆವಾರ್‌ಗಿಂತ ಈ ರೋಹಿತ್ ಚಕ್ರತೀರ್ಥ ಒಂದು ಹೆಜ್ಜೆ ಮುಂದಿದ್ದಾನೆ" ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ 

ಬೆಂಗಳೂರು (ಮೇ 27): ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಇದೀಗ ಹಲವು ಮಜಲುಗಳನ್ನು ಪಡೆದುಕೊಂಡಿದೆ. ಪರಿಷ್ಕರಣೆ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ಸಂಸ್ಥಾಪಕ ಹೆಡಗೇವಾರ್‌ (K  B Hedgewar) ಭಾಷಣವನ್ನು ಸೇರ್ಪಡೆ ಮಾಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಬೆನ್ನಲ್ಲೇ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) "ರೋಹಿತ್‌ನಂತ ವ್ಯಕ್ತಿ ಬಳಿ ಪಠ್ಯ ಪುಸ್ತಕ ರಚನೆ ಕೊಟ್ಟಿದ್ದಾರೆ, ಆತ ಪಠ್ಯಪುಸ್ತಕದಲ್ಲಿ ಏನಿರಬೇಕು ಎಂದು ತೀರ್ಮಾನ ಮಾಡುತ್ತಾನೆ, ನಮ್ಮ ದೇಶ ಎಲ್ಲಿಗೆ ಹೋಗುತ್ತಿದ ಎಂದು ಊಹಿಸಿಕೊಳ್ಳಿ, ಹೆಡ್ಗೆವಾರ್‌ಗಿಂತ ಈ ರೋಹಿತ್ ಚಕ್ರತೀರ್ಥ ಒಂದು ಹೆಜ್ಜೆ ಮುಂದಿದ್ದಾನೆ" ಎಂದಿದ್ದಾರೆ.

ಇದನ್ನೂ ಓದಿ: ಭುಗಿಲೆದ್ದ ಪಠ್ಯ ಪರಿಷ್ಕರಣೆ ವಿವಾದ: ರಾಜ್ಯ ಸರ್ಕಾರಕ್ಕೆ ಗಡವು ನೀಡಿದ ನಾರಾಯಣ ಗೌಡ

"ಗತ್‌ ಸಿಂಗ್‌ ಪಠ್ಯ ತೆಗೆದು ಹೆಡಗೇವಾರ್‌ ಭಾಷಣ ಸೇರಿಸಿದ್ದಾರೆ, ಚರಿತ್ರೆ ಇಲ್ಲಿವರೆಗೆ ತಿರುಚಿದ್ದಾರೆ ಮತ್ತೆ ತಿರುಚುತ್ತಿದ್ದಾರೆ, ಬಿಜೆಪಿ ಬಂದಮೇಲೆ ಯಾವ ಚರಿತ್ರೆ ಓದಬೇಕು ತಿಳಿತಿಲ್ಲ" ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಇನ್ನು ಪಠ್ಯ ಪರಿಷ್ಕರಣೆ ಬಳಿಕ ಕೆಲವು ಲೇಖಕರಿಗೆ ಸಂಬಂಧಿಸಿದ ಗದ್ಯವನ್ನು ಪಠ್ಯ ಪುಸ್ತಕ ರಚನಾ ಸಮಿತಿ ಸೇರ್ಪಡೆ ಮಾಡಿರುವುದರಿಂದ ಶಾಲಾ ಪಠ್ಯದಲ್ಲಿ ಕೇಸರೀಕರಣವಾಗಿದೆ ಎಂದು ಹಲವು ಸಂಘಟನೆಗಳು, ಎಡಪಂಥೀಯ ನಾಯಕರು ಹಾಗೂ ರಾಜಕೀಯ ಪಕ್ಷಗಳು ದೂರುತ್ತಿವೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more