Dec 9, 2022, 3:41 PM IST
ಗುಜರಾತ್ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ರಾಜ್ಯ ಬಿಜೆಪಿಯಲ್ಲಿ ಚುನಾವಣೆ ಚಟುವಟಿಕೆಗಳು ಗರಿಗೆದರಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಆರ್ಎಸ್ಎಸ್ನ ಸಹ ಸರಕಾರ್ಯವಾಹ ಮುಕುಂದ್ ಭೇಟಿಯಾಗಿದ್ದು, ಇಬ್ಬರೇ ಚರ್ಚೆ ನಡೆಸಿದ್ದಾರೆ. ಇದು ಭಾರೀ ಕುತೂಹಲ ಮೂಡಿಸಿದೆ. ರೇಸ್ಕೋರ್ಸ್ ನಿವಾಸದಲ್ಲಿ ಇಂದು ಬೆಳಗ್ಗೆ ಸಿಎಂ ಭೇಟಿಯಾಗಿ ಮುಕುಂದ್ ಚರ್ಚೆ ನಡೆಸಿದ್ದಾರೆ.