ವಿಜಯನಗರದಲ್ಲಿ ಸಿದ್ದರಾಮಯ್ಯ ಸೈಟ್ ಪಡೆದುಕೊಂಡಿದ್ದೇಕೆ? ಉದ್ದೇಶಪೂರ್ವಕವಾಗಿಯೇ ಜಮೀನು ಪಡೆದ್ರಾ?

ವಿಜಯನಗರದಲ್ಲಿ ಸಿದ್ದರಾಮಯ್ಯ ಸೈಟ್ ಪಡೆದುಕೊಂಡಿದ್ದೇಕೆ? ಉದ್ದೇಶಪೂರ್ವಕವಾಗಿಯೇ ಜಮೀನು ಪಡೆದ್ರಾ?

Published : Jul 14, 2024, 11:02 AM IST

ಮುಡಾದಿಂದ ಸಿಎಂ ಸಿದ್ದರಾಮಯ್ಯ ಪತ್ನಿಗೆ ಬದಲಿ ನಿವೇಶನ
ಜಮೀನಿದ್ದ ಬಡಾವಣೆಯಲ್ಲೇ ಸೈಟ್ ಇದ್ರೂ ಪಡೆಯದ ಸಿಎಂ
ದೇವನೂರು ಬಡಾವಣೆ 3ನೇ ಹಂತದಲ್ಲಿ ಸಿಎಂ ಪತ್ನಿ ಜಮೀನು

ಮುಡಾ ಹಗರಣದಲ್ಲಿ(Muda scam) ಸಿಎಂ ಸಿದ್ದರಾಮಯ್ಯ (Siddaramaiah) ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಚುನಾವಣಾ ಆಯೋಗಕ್ಕೆ ಮಾಹಿತಿ ಮುಚ್ಚಿಟ್ಟಿದ್ದಾರೆ ಎನ್ನಲಾಗ್ತಿದೆ. ಚುನಾವಣಾ ಅಫಿಡವಿಟ್‌ನಲ್ಲಿ(Election Affidavit) ಜಮೀನಿನ ಬಗ್ಗೆ ಪ್ರಸ್ತಾಪ ಮಾಡಿರಲಿಲ್ಲ. 2010ರಲ್ಲಿ ಸಿದ್ದರಾಮಯ್ಯ ಪತ್ನಿಗೆ ಸಹೋದರನಿಂದ ಜಮೀನು ಸಿಕ್ಕಿದ್ದು, 2013ರ ಚುನಾವಣಾ ಅಫಿಡವಿಟ್‌ನಲ್ಲಿ ಮಾಹಿತಿ ಮುಚ್ಚಿಟ್ಟಿದ್ದಾರೆ ಎನ್ನಲಾಗ್ತಿದೆ. 2018ರ ಚುನಾವಣೆ ಅಫಿಡವಿಟ್‌ನಲ್ಲಿ ಜಮೀನಿನ ಬಗ್ಗೆ ಉಲ್ಲೇಖ ಮಾಡಲಾಗಿದೆ. 3.16 ಎಕರೆ ಜಮೀನು ತಮ್ಮ ಪತ್ನಿ ಹೆಸರಲ್ಲಿದೆ ಅಂತಾ ಮಾಹಿತಿ ನೀಡಿದ್ದು, ಜಮೀನಿನ ಮೌಲ್ಯ 25 ಲಕ್ಷ ಅಂತಾ ಸಿದ್ದರಾಮಯ್ಯ ಉಲ್ಲೇಖಿಸಿದ್ರು. 2023ರ ಚುನಾವಣಾ ಅಫಿಡವಿಟ್‌ನಲ್ಲಿ ಬದಲಿ ನಿವೇಶನಗಳ ಘೋಷಣೆ ಮಾಡಲಾಗಿದೆ. 25 ರೂ. ಲಕ್ಷದ ಜಮೀನಿಗೆ ಬದಲಿಯಾಗಿ ₹8 ಕೋಟಿ ಮೌಲ್ಯದ ನಿವೇಶನ, ಸಿಎಂ ಸಿದ್ದರಾಮಯ್ಯಗೆ RTI ಕಾರ್ಯಕರ್ತ ಗಂಗರಾಜು(RTI activist Gangaraju) ಪ್ರಶ್ನೆ ಮಾಡಿದ್ದಾರೆ. ಸಿದ್ದರಾಮಯ್ಯ ಪತ್ನಿಗೆ ವಿಜಯನಗರದಲ್ಲಿ ಬದಲಿ ನಿವೇಶನ ನೀಡಿದ್ದು, ಮುಡಾದಿಂದ 37 ಸಾವಿರ ಚದರಡಿಗೂ ಹೆಚ್ಚು ಜಾಗ ಮಂಜೂರು ಮಾಡಲಾಗಿದೆ. ದೇವನೂರು ಬಡಾವಣೆಯಲ್ಲೇ ಖಾಲಿಯಿವೆ ಸಾಕಷ್ಟು ನಿವೇಶನ ಇವೆ. 4,538 ನಿವೇಶನಗಳ ಪೈಕಿ 565 ನಿವೇಶನಗಳು ಈಗಲೂ ಖಾಲಿ ಇವೆ. ಸಿದ್ದರಾಮಯ್ಯ ಪತ್ನಿ ನೀಡಿರುವ ಭೂಮಿಯಲ್ಲೇ 18 ಸೈಟ್ ಖಾಲಿ ಇದ್ದು, ವಿಜಯನಗರದಲ್ಲಿ ಸಿದ್ದರಾಮಯ್ಯ ಸೈಟ್ ಪಡೆದುಕೊಂಡಿದ್ದೇಕೆ?, ಉದ್ದೇಶಪೂರ್ವಕವಾಗಿಯೇ ವಿಜಯನಗರದಲ್ಲಿ ಸೈಟ್ ಪಡೆದ್ರಾ? ಸಿಎಂ ಸಿದ್ದರಾಮಯ್ಯಗೆ ಸೈಟ್ ಹಂಚಿಕೆ ಬಗ್ಗೆ ಇದೀಗ ಅನುಮಾನ ಹೆಚ್ಚಿದೆ.

ಇದನ್ನೂ ವೀಕ್ಷಿಸಿ:  ಇಡಿ ಬಲೆಗೆ ಬಿದ್ದಿರುವ ನಾಗೇಂದ್ರಗೆ ಮತ್ತಷ್ಟು ಸಂಕಷ್ಟ..! ಡೀಲ್‌ನಲ್ಲಿ ಕೈಜೋಡಿಸಿದ್ದವರೇ ಮಾಜಿ ಸಚಿವನಿಗೆ ಮುಳುವಾದ್ರಾ..?

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್