ವಿಜಯನಗರದಲ್ಲಿ ಸಿದ್ದರಾಮಯ್ಯ ಸೈಟ್ ಪಡೆದುಕೊಂಡಿದ್ದೇಕೆ? ಉದ್ದೇಶಪೂರ್ವಕವಾಗಿಯೇ ಜಮೀನು ಪಡೆದ್ರಾ?

ವಿಜಯನಗರದಲ್ಲಿ ಸಿದ್ದರಾಮಯ್ಯ ಸೈಟ್ ಪಡೆದುಕೊಂಡಿದ್ದೇಕೆ? ಉದ್ದೇಶಪೂರ್ವಕವಾಗಿಯೇ ಜಮೀನು ಪಡೆದ್ರಾ?

Published : Jul 14, 2024, 11:02 AM IST

ಮುಡಾದಿಂದ ಸಿಎಂ ಸಿದ್ದರಾಮಯ್ಯ ಪತ್ನಿಗೆ ಬದಲಿ ನಿವೇಶನ
ಜಮೀನಿದ್ದ ಬಡಾವಣೆಯಲ್ಲೇ ಸೈಟ್ ಇದ್ರೂ ಪಡೆಯದ ಸಿಎಂ
ದೇವನೂರು ಬಡಾವಣೆ 3ನೇ ಹಂತದಲ್ಲಿ ಸಿಎಂ ಪತ್ನಿ ಜಮೀನು

ಮುಡಾ ಹಗರಣದಲ್ಲಿ(Muda scam) ಸಿಎಂ ಸಿದ್ದರಾಮಯ್ಯ (Siddaramaiah) ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಚುನಾವಣಾ ಆಯೋಗಕ್ಕೆ ಮಾಹಿತಿ ಮುಚ್ಚಿಟ್ಟಿದ್ದಾರೆ ಎನ್ನಲಾಗ್ತಿದೆ. ಚುನಾವಣಾ ಅಫಿಡವಿಟ್‌ನಲ್ಲಿ(Election Affidavit) ಜಮೀನಿನ ಬಗ್ಗೆ ಪ್ರಸ್ತಾಪ ಮಾಡಿರಲಿಲ್ಲ. 2010ರಲ್ಲಿ ಸಿದ್ದರಾಮಯ್ಯ ಪತ್ನಿಗೆ ಸಹೋದರನಿಂದ ಜಮೀನು ಸಿಕ್ಕಿದ್ದು, 2013ರ ಚುನಾವಣಾ ಅಫಿಡವಿಟ್‌ನಲ್ಲಿ ಮಾಹಿತಿ ಮುಚ್ಚಿಟ್ಟಿದ್ದಾರೆ ಎನ್ನಲಾಗ್ತಿದೆ. 2018ರ ಚುನಾವಣೆ ಅಫಿಡವಿಟ್‌ನಲ್ಲಿ ಜಮೀನಿನ ಬಗ್ಗೆ ಉಲ್ಲೇಖ ಮಾಡಲಾಗಿದೆ. 3.16 ಎಕರೆ ಜಮೀನು ತಮ್ಮ ಪತ್ನಿ ಹೆಸರಲ್ಲಿದೆ ಅಂತಾ ಮಾಹಿತಿ ನೀಡಿದ್ದು, ಜಮೀನಿನ ಮೌಲ್ಯ 25 ಲಕ್ಷ ಅಂತಾ ಸಿದ್ದರಾಮಯ್ಯ ಉಲ್ಲೇಖಿಸಿದ್ರು. 2023ರ ಚುನಾವಣಾ ಅಫಿಡವಿಟ್‌ನಲ್ಲಿ ಬದಲಿ ನಿವೇಶನಗಳ ಘೋಷಣೆ ಮಾಡಲಾಗಿದೆ. 25 ರೂ. ಲಕ್ಷದ ಜಮೀನಿಗೆ ಬದಲಿಯಾಗಿ ₹8 ಕೋಟಿ ಮೌಲ್ಯದ ನಿವೇಶನ, ಸಿಎಂ ಸಿದ್ದರಾಮಯ್ಯಗೆ RTI ಕಾರ್ಯಕರ್ತ ಗಂಗರಾಜು(RTI activist Gangaraju) ಪ್ರಶ್ನೆ ಮಾಡಿದ್ದಾರೆ. ಸಿದ್ದರಾಮಯ್ಯ ಪತ್ನಿಗೆ ವಿಜಯನಗರದಲ್ಲಿ ಬದಲಿ ನಿವೇಶನ ನೀಡಿದ್ದು, ಮುಡಾದಿಂದ 37 ಸಾವಿರ ಚದರಡಿಗೂ ಹೆಚ್ಚು ಜಾಗ ಮಂಜೂರು ಮಾಡಲಾಗಿದೆ. ದೇವನೂರು ಬಡಾವಣೆಯಲ್ಲೇ ಖಾಲಿಯಿವೆ ಸಾಕಷ್ಟು ನಿವೇಶನ ಇವೆ. 4,538 ನಿವೇಶನಗಳ ಪೈಕಿ 565 ನಿವೇಶನಗಳು ಈಗಲೂ ಖಾಲಿ ಇವೆ. ಸಿದ್ದರಾಮಯ್ಯ ಪತ್ನಿ ನೀಡಿರುವ ಭೂಮಿಯಲ್ಲೇ 18 ಸೈಟ್ ಖಾಲಿ ಇದ್ದು, ವಿಜಯನಗರದಲ್ಲಿ ಸಿದ್ದರಾಮಯ್ಯ ಸೈಟ್ ಪಡೆದುಕೊಂಡಿದ್ದೇಕೆ?, ಉದ್ದೇಶಪೂರ್ವಕವಾಗಿಯೇ ವಿಜಯನಗರದಲ್ಲಿ ಸೈಟ್ ಪಡೆದ್ರಾ? ಸಿಎಂ ಸಿದ್ದರಾಮಯ್ಯಗೆ ಸೈಟ್ ಹಂಚಿಕೆ ಬಗ್ಗೆ ಇದೀಗ ಅನುಮಾನ ಹೆಚ್ಚಿದೆ.

ಇದನ್ನೂ ವೀಕ್ಷಿಸಿ:  ಇಡಿ ಬಲೆಗೆ ಬಿದ್ದಿರುವ ನಾಗೇಂದ್ರಗೆ ಮತ್ತಷ್ಟು ಸಂಕಷ್ಟ..! ಡೀಲ್‌ನಲ್ಲಿ ಕೈಜೋಡಿಸಿದ್ದವರೇ ಮಾಜಿ ಸಚಿವನಿಗೆ ಮುಳುವಾದ್ರಾ..?

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್