ಸ್ಟಾಲಿನ್ VS ಸನಾತನ ಧರ್ಮ ದಂಗಲ್: ಗಣೇಶ ಪೆಂಡಾಲ್‌ಗೆ ಸನಾತನ ಧರ್ಮ ಹೆಸರಿಡಲು ಸೂಚನೆ..!

ಸ್ಟಾಲಿನ್ VS ಸನಾತನ ಧರ್ಮ ದಂಗಲ್: ಗಣೇಶ ಪೆಂಡಾಲ್‌ಗೆ ಸನಾತನ ಧರ್ಮ ಹೆಸರಿಡಲು ಸೂಚನೆ..!

Published : Sep 14, 2023, 10:21 AM IST

ಸಚಿವ ಸ್ಟಾಲಿನ್ ಸನಾತನ ಧರ್ಮವನ್ನ ನಿಂದಿಸಿದ್ದೆ ಬಂತು, ಈಗ ಸ್ಟಾಲಿನ್ VS ಸನಾತನ ಧರ್ಮ ದಂಗಲ್ ಶುರುವಾಗಿದೆ. ಅದ್ರಲ್ಲು ಗುಮ್ಮಟನಗರಿ ವಿಜಯಪುರದಲ್ಲಿ ಯುವಕರಲ್ಲಿ ಸನಾತನ ಧರ್ಮದ ಕಿಚ್ಚು ಹೊತ್ತಿಸಲು ಶಾಸಕ ಯತ್ನಾಳ್ ಹೊಸ ಪ್ಲಾನ್ ಮಾಡಿದ್ದಾರೆ. 
 


ಸ್ಟಾಲಿನ್ ಪುತ್ರ ಕೊಟ್ಟ ಸನಾತನ(sanatana) ಧರ್ಮ ನಿರ್ಮೂಲನೆ ಹೇಳಿಕೆ ಹಿಂದೂಗಳನ್ನ ಕೆರಳಿಸಿದೆ. ಈಗಾಗಲೇ ಉದಯನಿಧಿ(Udayanidhi) ಹೇಳಿಕೆ ವಿರುದ್ಧ ಪ್ರತಿಭಟನೆ, ಆಕ್ರೋಶ, ದೂರುಗಳು ದಾಖಲಾಗಿವೆ.. ಈಗ ವಿಜಯಪುರ(vijayapur) ಶಾಸಕರು ಸ್ಟಾಲಿನ್ ಪುತ್ರನಿಗೆ ವಿಭಿನ್ನ ರೀತಿ ತಿರುಗೇಟು ನೀಡಲು ಮುಂದಾಗಿದ್ದಾರೆ. ಗಣೇಶನ ಹಬ್ಬದಲ್ಲಿ ಸನಾತನ ಧರ್ಮ ಪ್ರಚಾರ ಕಾರ್ಯಕ್ಕೆ ಮುಂದಾಗಿದ್ದಾರೆ. ವಿಜಯಪುರ ನಗರದ 35 ವಾರ್ಡ್ ಗಳಲ್ಲಿರುವ 415ಕ್ಕೂ ಅಧಿಕ ಗಜಾನನ ಉತ್ಸವ ಮಂಡಳಿಗಳಿವೆ. ಈ ಮಂಡಳಿಗಳಿಗೆ ಸ್ವಾಮಿ ವಿವೇಕಾನಂದ ಸೇನೆಯ ಮೂಲಕ ತಲಾ 5ಸಾವಿರ ರೂಪಾಯಿ ನೀಡಿ ಹಿಂದೂಗಳ ಹಬ್ಬಕ್ಕೆ ಯತ್ನಾಳ (Basanagowda Patil Yatnal)ಸಪೋರ್ಟ್ ಮಾಡಿದ್ದಾರೆ. ಅಷ್ಟೆ ಅಲ್ಲದೆ ಎಲ್ಲಾ ಗಣೇಶೋತ್ಸವ ಮಂಟಪದಲ್ಲೂ ಸನಾತನ ಹಿಂದೂ ವೇದಿಕೆ ಎಂದು ನಾಮಕರಣ ಮಾಡುವಂತೆ ಕರೆ ಕೊಟ್ಟಿದ್ದಾರೆ. 5 ಸಾವಿರ ನಗದು ಜೊತೆಗೆ ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್ ಭಾವಚಿತ್ರವನ್ನೂ ಉಡುಗೊರೆಯಾಗಿ ನೀಡುತ್ತಿದ್ದಾರೆ. ಇದಕ್ಕಾಗಿ ಸುಮಾರು 25ಲಕ್ಷ ರೂಪಾಯಿಗಳ ವರೆಗೆ ಶಾಸಕರು ಖರ್ಚು ಮಾಡುತ್ತಿದ್ದಾರೆ.  ಈ ಮೂಲಕ ಸತಾನದ ಧರ್ಮ ವಿರೋಧೀಗಳಿಗೆ ಗಣೇಶೋತ್ಸವ ಮೂಲಕ ಟಕ್ಕರ್ ಕೊಡಲು ಸಜ್ಜಾಗಿದ್ದಾರೆ. ಇನ್ನು ವೀರ್ ಸಾವರ್ಕರ್ ಬಗ್ಗೆಯೂ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ಹೀಗಾಗಿ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಜೊತೆಗೆ ಸ್ಥಳದಲ್ಲಿ ವೀರ್ ಸಾವರ್ಕರ್(Veer Savarkar) ಭಾವಚಿತ್ರ ಇಡುವಂತೆ ಪ್ರೇರೇಪಿಸುತ್ತಿದ್ದಾರೆ. ಸನಾತನಕ್ಕೆ ಆದ ಅವಮಾನವನ್ನ ಚಾಲೆಂಜ್ ಆಗಿ ತೆಗೆದುಕೊಂಡಿರುವ ಶಾಸಕ ಯತ್ನಾಳ್ ಹಾಗೂ ವಿವೇಕಾನಂದ ಸೇನೆ ಗಣೇಶ ಹಬ್ಬಕ್ಕೆ ಬೇಕಾದ ಸಹಾಯ, ಸಹಕಾರವನ್ನು ಮಾಡುತ್ತಿದೆ. ಜೊತೆಗೆ ಸನಾತನ ಧರ್ಮದ ಬಗ್ಗೆ ಯುವ ಸಮುದಾಯದಲ್ಲಿ ಹೊಸ ಕಿಚ್ಚು ಹಬ್ಬಿಸುತ್ತಿದೆ.

ಇದನ್ನೂ ವೀಕ್ಷಿಸಿ:  ಅನ್ನದಾತರಿಗೆ ಕಂಟಕವಾಗಿವೆ ಕೆಮಿಕಲ್ ಫ್ಯಾಕ್ಟರಿ! ಕೆಮಿಕಲ್ ತ್ಯಾಜ್ಯದಿಂದ ರೈತರ ಬದುಕೇ ಬರ್ಬಾದ್

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!