ಸ್ಟಾಲಿನ್ VS ಸನಾತನ ಧರ್ಮ ದಂಗಲ್: ಗಣೇಶ ಪೆಂಡಾಲ್‌ಗೆ ಸನಾತನ ಧರ್ಮ ಹೆಸರಿಡಲು ಸೂಚನೆ..!

ಸ್ಟಾಲಿನ್ VS ಸನಾತನ ಧರ್ಮ ದಂಗಲ್: ಗಣೇಶ ಪೆಂಡಾಲ್‌ಗೆ ಸನಾತನ ಧರ್ಮ ಹೆಸರಿಡಲು ಸೂಚನೆ..!

Published : Sep 14, 2023, 10:21 AM IST

ಸಚಿವ ಸ್ಟಾಲಿನ್ ಸನಾತನ ಧರ್ಮವನ್ನ ನಿಂದಿಸಿದ್ದೆ ಬಂತು, ಈಗ ಸ್ಟಾಲಿನ್ VS ಸನಾತನ ಧರ್ಮ ದಂಗಲ್ ಶುರುವಾಗಿದೆ. ಅದ್ರಲ್ಲು ಗುಮ್ಮಟನಗರಿ ವಿಜಯಪುರದಲ್ಲಿ ಯುವಕರಲ್ಲಿ ಸನಾತನ ಧರ್ಮದ ಕಿಚ್ಚು ಹೊತ್ತಿಸಲು ಶಾಸಕ ಯತ್ನಾಳ್ ಹೊಸ ಪ್ಲಾನ್ ಮಾಡಿದ್ದಾರೆ. 
 


ಸ್ಟಾಲಿನ್ ಪುತ್ರ ಕೊಟ್ಟ ಸನಾತನ(sanatana) ಧರ್ಮ ನಿರ್ಮೂಲನೆ ಹೇಳಿಕೆ ಹಿಂದೂಗಳನ್ನ ಕೆರಳಿಸಿದೆ. ಈಗಾಗಲೇ ಉದಯನಿಧಿ(Udayanidhi) ಹೇಳಿಕೆ ವಿರುದ್ಧ ಪ್ರತಿಭಟನೆ, ಆಕ್ರೋಶ, ದೂರುಗಳು ದಾಖಲಾಗಿವೆ.. ಈಗ ವಿಜಯಪುರ(vijayapur) ಶಾಸಕರು ಸ್ಟಾಲಿನ್ ಪುತ್ರನಿಗೆ ವಿಭಿನ್ನ ರೀತಿ ತಿರುಗೇಟು ನೀಡಲು ಮುಂದಾಗಿದ್ದಾರೆ. ಗಣೇಶನ ಹಬ್ಬದಲ್ಲಿ ಸನಾತನ ಧರ್ಮ ಪ್ರಚಾರ ಕಾರ್ಯಕ್ಕೆ ಮುಂದಾಗಿದ್ದಾರೆ. ವಿಜಯಪುರ ನಗರದ 35 ವಾರ್ಡ್ ಗಳಲ್ಲಿರುವ 415ಕ್ಕೂ ಅಧಿಕ ಗಜಾನನ ಉತ್ಸವ ಮಂಡಳಿಗಳಿವೆ. ಈ ಮಂಡಳಿಗಳಿಗೆ ಸ್ವಾಮಿ ವಿವೇಕಾನಂದ ಸೇನೆಯ ಮೂಲಕ ತಲಾ 5ಸಾವಿರ ರೂಪಾಯಿ ನೀಡಿ ಹಿಂದೂಗಳ ಹಬ್ಬಕ್ಕೆ ಯತ್ನಾಳ (Basanagowda Patil Yatnal)ಸಪೋರ್ಟ್ ಮಾಡಿದ್ದಾರೆ. ಅಷ್ಟೆ ಅಲ್ಲದೆ ಎಲ್ಲಾ ಗಣೇಶೋತ್ಸವ ಮಂಟಪದಲ್ಲೂ ಸನಾತನ ಹಿಂದೂ ವೇದಿಕೆ ಎಂದು ನಾಮಕರಣ ಮಾಡುವಂತೆ ಕರೆ ಕೊಟ್ಟಿದ್ದಾರೆ. 5 ಸಾವಿರ ನಗದು ಜೊತೆಗೆ ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್ ಭಾವಚಿತ್ರವನ್ನೂ ಉಡುಗೊರೆಯಾಗಿ ನೀಡುತ್ತಿದ್ದಾರೆ. ಇದಕ್ಕಾಗಿ ಸುಮಾರು 25ಲಕ್ಷ ರೂಪಾಯಿಗಳ ವರೆಗೆ ಶಾಸಕರು ಖರ್ಚು ಮಾಡುತ್ತಿದ್ದಾರೆ.  ಈ ಮೂಲಕ ಸತಾನದ ಧರ್ಮ ವಿರೋಧೀಗಳಿಗೆ ಗಣೇಶೋತ್ಸವ ಮೂಲಕ ಟಕ್ಕರ್ ಕೊಡಲು ಸಜ್ಜಾಗಿದ್ದಾರೆ. ಇನ್ನು ವೀರ್ ಸಾವರ್ಕರ್ ಬಗ್ಗೆಯೂ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ಹೀಗಾಗಿ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಜೊತೆಗೆ ಸ್ಥಳದಲ್ಲಿ ವೀರ್ ಸಾವರ್ಕರ್(Veer Savarkar) ಭಾವಚಿತ್ರ ಇಡುವಂತೆ ಪ್ರೇರೇಪಿಸುತ್ತಿದ್ದಾರೆ. ಸನಾತನಕ್ಕೆ ಆದ ಅವಮಾನವನ್ನ ಚಾಲೆಂಜ್ ಆಗಿ ತೆಗೆದುಕೊಂಡಿರುವ ಶಾಸಕ ಯತ್ನಾಳ್ ಹಾಗೂ ವಿವೇಕಾನಂದ ಸೇನೆ ಗಣೇಶ ಹಬ್ಬಕ್ಕೆ ಬೇಕಾದ ಸಹಾಯ, ಸಹಕಾರವನ್ನು ಮಾಡುತ್ತಿದೆ. ಜೊತೆಗೆ ಸನಾತನ ಧರ್ಮದ ಬಗ್ಗೆ ಯುವ ಸಮುದಾಯದಲ್ಲಿ ಹೊಸ ಕಿಚ್ಚು ಹಬ್ಬಿಸುತ್ತಿದೆ.

ಇದನ್ನೂ ವೀಕ್ಷಿಸಿ:  ಅನ್ನದಾತರಿಗೆ ಕಂಟಕವಾಗಿವೆ ಕೆಮಿಕಲ್ ಫ್ಯಾಕ್ಟರಿ! ಕೆಮಿಕಲ್ ತ್ಯಾಜ್ಯದಿಂದ ರೈತರ ಬದುಕೇ ಬರ್ಬಾದ್

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ