ಸ್ಟಾಲಿನ್ VS ಸನಾತನ ಧರ್ಮ ದಂಗಲ್: ಗಣೇಶ ಪೆಂಡಾಲ್‌ಗೆ ಸನಾತನ ಧರ್ಮ ಹೆಸರಿಡಲು ಸೂಚನೆ..!

ಸ್ಟಾಲಿನ್ VS ಸನಾತನ ಧರ್ಮ ದಂಗಲ್: ಗಣೇಶ ಪೆಂಡಾಲ್‌ಗೆ ಸನಾತನ ಧರ್ಮ ಹೆಸರಿಡಲು ಸೂಚನೆ..!

Published : Sep 14, 2023, 10:21 AM IST

ಸಚಿವ ಸ್ಟಾಲಿನ್ ಸನಾತನ ಧರ್ಮವನ್ನ ನಿಂದಿಸಿದ್ದೆ ಬಂತು, ಈಗ ಸ್ಟಾಲಿನ್ VS ಸನಾತನ ಧರ್ಮ ದಂಗಲ್ ಶುರುವಾಗಿದೆ. ಅದ್ರಲ್ಲು ಗುಮ್ಮಟನಗರಿ ವಿಜಯಪುರದಲ್ಲಿ ಯುವಕರಲ್ಲಿ ಸನಾತನ ಧರ್ಮದ ಕಿಚ್ಚು ಹೊತ್ತಿಸಲು ಶಾಸಕ ಯತ್ನಾಳ್ ಹೊಸ ಪ್ಲಾನ್ ಮಾಡಿದ್ದಾರೆ. 
 


ಸ್ಟಾಲಿನ್ ಪುತ್ರ ಕೊಟ್ಟ ಸನಾತನ(sanatana) ಧರ್ಮ ನಿರ್ಮೂಲನೆ ಹೇಳಿಕೆ ಹಿಂದೂಗಳನ್ನ ಕೆರಳಿಸಿದೆ. ಈಗಾಗಲೇ ಉದಯನಿಧಿ(Udayanidhi) ಹೇಳಿಕೆ ವಿರುದ್ಧ ಪ್ರತಿಭಟನೆ, ಆಕ್ರೋಶ, ದೂರುಗಳು ದಾಖಲಾಗಿವೆ.. ಈಗ ವಿಜಯಪುರ(vijayapur) ಶಾಸಕರು ಸ್ಟಾಲಿನ್ ಪುತ್ರನಿಗೆ ವಿಭಿನ್ನ ರೀತಿ ತಿರುಗೇಟು ನೀಡಲು ಮುಂದಾಗಿದ್ದಾರೆ. ಗಣೇಶನ ಹಬ್ಬದಲ್ಲಿ ಸನಾತನ ಧರ್ಮ ಪ್ರಚಾರ ಕಾರ್ಯಕ್ಕೆ ಮುಂದಾಗಿದ್ದಾರೆ. ವಿಜಯಪುರ ನಗರದ 35 ವಾರ್ಡ್ ಗಳಲ್ಲಿರುವ 415ಕ್ಕೂ ಅಧಿಕ ಗಜಾನನ ಉತ್ಸವ ಮಂಡಳಿಗಳಿವೆ. ಈ ಮಂಡಳಿಗಳಿಗೆ ಸ್ವಾಮಿ ವಿವೇಕಾನಂದ ಸೇನೆಯ ಮೂಲಕ ತಲಾ 5ಸಾವಿರ ರೂಪಾಯಿ ನೀಡಿ ಹಿಂದೂಗಳ ಹಬ್ಬಕ್ಕೆ ಯತ್ನಾಳ (Basanagowda Patil Yatnal)ಸಪೋರ್ಟ್ ಮಾಡಿದ್ದಾರೆ. ಅಷ್ಟೆ ಅಲ್ಲದೆ ಎಲ್ಲಾ ಗಣೇಶೋತ್ಸವ ಮಂಟಪದಲ್ಲೂ ಸನಾತನ ಹಿಂದೂ ವೇದಿಕೆ ಎಂದು ನಾಮಕರಣ ಮಾಡುವಂತೆ ಕರೆ ಕೊಟ್ಟಿದ್ದಾರೆ. 5 ಸಾವಿರ ನಗದು ಜೊತೆಗೆ ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್ ಭಾವಚಿತ್ರವನ್ನೂ ಉಡುಗೊರೆಯಾಗಿ ನೀಡುತ್ತಿದ್ದಾರೆ. ಇದಕ್ಕಾಗಿ ಸುಮಾರು 25ಲಕ್ಷ ರೂಪಾಯಿಗಳ ವರೆಗೆ ಶಾಸಕರು ಖರ್ಚು ಮಾಡುತ್ತಿದ್ದಾರೆ.  ಈ ಮೂಲಕ ಸತಾನದ ಧರ್ಮ ವಿರೋಧೀಗಳಿಗೆ ಗಣೇಶೋತ್ಸವ ಮೂಲಕ ಟಕ್ಕರ್ ಕೊಡಲು ಸಜ್ಜಾಗಿದ್ದಾರೆ. ಇನ್ನು ವೀರ್ ಸಾವರ್ಕರ್ ಬಗ್ಗೆಯೂ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ಹೀಗಾಗಿ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಜೊತೆಗೆ ಸ್ಥಳದಲ್ಲಿ ವೀರ್ ಸಾವರ್ಕರ್(Veer Savarkar) ಭಾವಚಿತ್ರ ಇಡುವಂತೆ ಪ್ರೇರೇಪಿಸುತ್ತಿದ್ದಾರೆ. ಸನಾತನಕ್ಕೆ ಆದ ಅವಮಾನವನ್ನ ಚಾಲೆಂಜ್ ಆಗಿ ತೆಗೆದುಕೊಂಡಿರುವ ಶಾಸಕ ಯತ್ನಾಳ್ ಹಾಗೂ ವಿವೇಕಾನಂದ ಸೇನೆ ಗಣೇಶ ಹಬ್ಬಕ್ಕೆ ಬೇಕಾದ ಸಹಾಯ, ಸಹಕಾರವನ್ನು ಮಾಡುತ್ತಿದೆ. ಜೊತೆಗೆ ಸನಾತನ ಧರ್ಮದ ಬಗ್ಗೆ ಯುವ ಸಮುದಾಯದಲ್ಲಿ ಹೊಸ ಕಿಚ್ಚು ಹಬ್ಬಿಸುತ್ತಿದೆ.

ಇದನ್ನೂ ವೀಕ್ಷಿಸಿ:  ಅನ್ನದಾತರಿಗೆ ಕಂಟಕವಾಗಿವೆ ಕೆಮಿಕಲ್ ಫ್ಯಾಕ್ಟರಿ! ಕೆಮಿಕಲ್ ತ್ಯಾಜ್ಯದಿಂದ ರೈತರ ಬದುಕೇ ಬರ್ಬಾದ್

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!