ಸ್ಟಾಲಿನ್ VS ಸನಾತನ ಧರ್ಮ ದಂಗಲ್: ಗಣೇಶ ಪೆಂಡಾಲ್‌ಗೆ ಸನಾತನ ಧರ್ಮ ಹೆಸರಿಡಲು ಸೂಚನೆ..!

ಸ್ಟಾಲಿನ್ VS ಸನಾತನ ಧರ್ಮ ದಂಗಲ್: ಗಣೇಶ ಪೆಂಡಾಲ್‌ಗೆ ಸನಾತನ ಧರ್ಮ ಹೆಸರಿಡಲು ಸೂಚನೆ..!

Published : Sep 14, 2023, 10:21 AM IST

ಸಚಿವ ಸ್ಟಾಲಿನ್ ಸನಾತನ ಧರ್ಮವನ್ನ ನಿಂದಿಸಿದ್ದೆ ಬಂತು, ಈಗ ಸ್ಟಾಲಿನ್ VS ಸನಾತನ ಧರ್ಮ ದಂಗಲ್ ಶುರುವಾಗಿದೆ. ಅದ್ರಲ್ಲು ಗುಮ್ಮಟನಗರಿ ವಿಜಯಪುರದಲ್ಲಿ ಯುವಕರಲ್ಲಿ ಸನಾತನ ಧರ್ಮದ ಕಿಚ್ಚು ಹೊತ್ತಿಸಲು ಶಾಸಕ ಯತ್ನಾಳ್ ಹೊಸ ಪ್ಲಾನ್ ಮಾಡಿದ್ದಾರೆ. 
 


ಸ್ಟಾಲಿನ್ ಪುತ್ರ ಕೊಟ್ಟ ಸನಾತನ(sanatana) ಧರ್ಮ ನಿರ್ಮೂಲನೆ ಹೇಳಿಕೆ ಹಿಂದೂಗಳನ್ನ ಕೆರಳಿಸಿದೆ. ಈಗಾಗಲೇ ಉದಯನಿಧಿ(Udayanidhi) ಹೇಳಿಕೆ ವಿರುದ್ಧ ಪ್ರತಿಭಟನೆ, ಆಕ್ರೋಶ, ದೂರುಗಳು ದಾಖಲಾಗಿವೆ.. ಈಗ ವಿಜಯಪುರ(vijayapur) ಶಾಸಕರು ಸ್ಟಾಲಿನ್ ಪುತ್ರನಿಗೆ ವಿಭಿನ್ನ ರೀತಿ ತಿರುಗೇಟು ನೀಡಲು ಮುಂದಾಗಿದ್ದಾರೆ. ಗಣೇಶನ ಹಬ್ಬದಲ್ಲಿ ಸನಾತನ ಧರ್ಮ ಪ್ರಚಾರ ಕಾರ್ಯಕ್ಕೆ ಮುಂದಾಗಿದ್ದಾರೆ. ವಿಜಯಪುರ ನಗರದ 35 ವಾರ್ಡ್ ಗಳಲ್ಲಿರುವ 415ಕ್ಕೂ ಅಧಿಕ ಗಜಾನನ ಉತ್ಸವ ಮಂಡಳಿಗಳಿವೆ. ಈ ಮಂಡಳಿಗಳಿಗೆ ಸ್ವಾಮಿ ವಿವೇಕಾನಂದ ಸೇನೆಯ ಮೂಲಕ ತಲಾ 5ಸಾವಿರ ರೂಪಾಯಿ ನೀಡಿ ಹಿಂದೂಗಳ ಹಬ್ಬಕ್ಕೆ ಯತ್ನಾಳ (Basanagowda Patil Yatnal)ಸಪೋರ್ಟ್ ಮಾಡಿದ್ದಾರೆ. ಅಷ್ಟೆ ಅಲ್ಲದೆ ಎಲ್ಲಾ ಗಣೇಶೋತ್ಸವ ಮಂಟಪದಲ್ಲೂ ಸನಾತನ ಹಿಂದೂ ವೇದಿಕೆ ಎಂದು ನಾಮಕರಣ ಮಾಡುವಂತೆ ಕರೆ ಕೊಟ್ಟಿದ್ದಾರೆ. 5 ಸಾವಿರ ನಗದು ಜೊತೆಗೆ ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್ ಭಾವಚಿತ್ರವನ್ನೂ ಉಡುಗೊರೆಯಾಗಿ ನೀಡುತ್ತಿದ್ದಾರೆ. ಇದಕ್ಕಾಗಿ ಸುಮಾರು 25ಲಕ್ಷ ರೂಪಾಯಿಗಳ ವರೆಗೆ ಶಾಸಕರು ಖರ್ಚು ಮಾಡುತ್ತಿದ್ದಾರೆ.  ಈ ಮೂಲಕ ಸತಾನದ ಧರ್ಮ ವಿರೋಧೀಗಳಿಗೆ ಗಣೇಶೋತ್ಸವ ಮೂಲಕ ಟಕ್ಕರ್ ಕೊಡಲು ಸಜ್ಜಾಗಿದ್ದಾರೆ. ಇನ್ನು ವೀರ್ ಸಾವರ್ಕರ್ ಬಗ್ಗೆಯೂ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ಹೀಗಾಗಿ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಜೊತೆಗೆ ಸ್ಥಳದಲ್ಲಿ ವೀರ್ ಸಾವರ್ಕರ್(Veer Savarkar) ಭಾವಚಿತ್ರ ಇಡುವಂತೆ ಪ್ರೇರೇಪಿಸುತ್ತಿದ್ದಾರೆ. ಸನಾತನಕ್ಕೆ ಆದ ಅವಮಾನವನ್ನ ಚಾಲೆಂಜ್ ಆಗಿ ತೆಗೆದುಕೊಂಡಿರುವ ಶಾಸಕ ಯತ್ನಾಳ್ ಹಾಗೂ ವಿವೇಕಾನಂದ ಸೇನೆ ಗಣೇಶ ಹಬ್ಬಕ್ಕೆ ಬೇಕಾದ ಸಹಾಯ, ಸಹಕಾರವನ್ನು ಮಾಡುತ್ತಿದೆ. ಜೊತೆಗೆ ಸನಾತನ ಧರ್ಮದ ಬಗ್ಗೆ ಯುವ ಸಮುದಾಯದಲ್ಲಿ ಹೊಸ ಕಿಚ್ಚು ಹಬ್ಬಿಸುತ್ತಿದೆ.

ಇದನ್ನೂ ವೀಕ್ಷಿಸಿ:  ಅನ್ನದಾತರಿಗೆ ಕಂಟಕವಾಗಿವೆ ಕೆಮಿಕಲ್ ಫ್ಯಾಕ್ಟರಿ! ಕೆಮಿಕಲ್ ತ್ಯಾಜ್ಯದಿಂದ ರೈತರ ಬದುಕೇ ಬರ್ಬಾದ್

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ