ಸ್ಟಾಲಿನ್ VS ಸನಾತನ ಧರ್ಮ ದಂಗಲ್: ಗಣೇಶ ಪೆಂಡಾಲ್‌ಗೆ ಸನಾತನ ಧರ್ಮ ಹೆಸರಿಡಲು ಸೂಚನೆ..!

ಸ್ಟಾಲಿನ್ VS ಸನಾತನ ಧರ್ಮ ದಂಗಲ್: ಗಣೇಶ ಪೆಂಡಾಲ್‌ಗೆ ಸನಾತನ ಧರ್ಮ ಹೆಸರಿಡಲು ಸೂಚನೆ..!

Published : Sep 14, 2023, 10:21 AM IST

ಸಚಿವ ಸ್ಟಾಲಿನ್ ಸನಾತನ ಧರ್ಮವನ್ನ ನಿಂದಿಸಿದ್ದೆ ಬಂತು, ಈಗ ಸ್ಟಾಲಿನ್ VS ಸನಾತನ ಧರ್ಮ ದಂಗಲ್ ಶುರುವಾಗಿದೆ. ಅದ್ರಲ್ಲು ಗುಮ್ಮಟನಗರಿ ವಿಜಯಪುರದಲ್ಲಿ ಯುವಕರಲ್ಲಿ ಸನಾತನ ಧರ್ಮದ ಕಿಚ್ಚು ಹೊತ್ತಿಸಲು ಶಾಸಕ ಯತ್ನಾಳ್ ಹೊಸ ಪ್ಲಾನ್ ಮಾಡಿದ್ದಾರೆ. 
 


ಸ್ಟಾಲಿನ್ ಪುತ್ರ ಕೊಟ್ಟ ಸನಾತನ(sanatana) ಧರ್ಮ ನಿರ್ಮೂಲನೆ ಹೇಳಿಕೆ ಹಿಂದೂಗಳನ್ನ ಕೆರಳಿಸಿದೆ. ಈಗಾಗಲೇ ಉದಯನಿಧಿ(Udayanidhi) ಹೇಳಿಕೆ ವಿರುದ್ಧ ಪ್ರತಿಭಟನೆ, ಆಕ್ರೋಶ, ದೂರುಗಳು ದಾಖಲಾಗಿವೆ.. ಈಗ ವಿಜಯಪುರ(vijayapur) ಶಾಸಕರು ಸ್ಟಾಲಿನ್ ಪುತ್ರನಿಗೆ ವಿಭಿನ್ನ ರೀತಿ ತಿರುಗೇಟು ನೀಡಲು ಮುಂದಾಗಿದ್ದಾರೆ. ಗಣೇಶನ ಹಬ್ಬದಲ್ಲಿ ಸನಾತನ ಧರ್ಮ ಪ್ರಚಾರ ಕಾರ್ಯಕ್ಕೆ ಮುಂದಾಗಿದ್ದಾರೆ. ವಿಜಯಪುರ ನಗರದ 35 ವಾರ್ಡ್ ಗಳಲ್ಲಿರುವ 415ಕ್ಕೂ ಅಧಿಕ ಗಜಾನನ ಉತ್ಸವ ಮಂಡಳಿಗಳಿವೆ. ಈ ಮಂಡಳಿಗಳಿಗೆ ಸ್ವಾಮಿ ವಿವೇಕಾನಂದ ಸೇನೆಯ ಮೂಲಕ ತಲಾ 5ಸಾವಿರ ರೂಪಾಯಿ ನೀಡಿ ಹಿಂದೂಗಳ ಹಬ್ಬಕ್ಕೆ ಯತ್ನಾಳ (Basanagowda Patil Yatnal)ಸಪೋರ್ಟ್ ಮಾಡಿದ್ದಾರೆ. ಅಷ್ಟೆ ಅಲ್ಲದೆ ಎಲ್ಲಾ ಗಣೇಶೋತ್ಸವ ಮಂಟಪದಲ್ಲೂ ಸನಾತನ ಹಿಂದೂ ವೇದಿಕೆ ಎಂದು ನಾಮಕರಣ ಮಾಡುವಂತೆ ಕರೆ ಕೊಟ್ಟಿದ್ದಾರೆ. 5 ಸಾವಿರ ನಗದು ಜೊತೆಗೆ ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್ ಭಾವಚಿತ್ರವನ್ನೂ ಉಡುಗೊರೆಯಾಗಿ ನೀಡುತ್ತಿದ್ದಾರೆ. ಇದಕ್ಕಾಗಿ ಸುಮಾರು 25ಲಕ್ಷ ರೂಪಾಯಿಗಳ ವರೆಗೆ ಶಾಸಕರು ಖರ್ಚು ಮಾಡುತ್ತಿದ್ದಾರೆ.  ಈ ಮೂಲಕ ಸತಾನದ ಧರ್ಮ ವಿರೋಧೀಗಳಿಗೆ ಗಣೇಶೋತ್ಸವ ಮೂಲಕ ಟಕ್ಕರ್ ಕೊಡಲು ಸಜ್ಜಾಗಿದ್ದಾರೆ. ಇನ್ನು ವೀರ್ ಸಾವರ್ಕರ್ ಬಗ್ಗೆಯೂ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ಹೀಗಾಗಿ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಜೊತೆಗೆ ಸ್ಥಳದಲ್ಲಿ ವೀರ್ ಸಾವರ್ಕರ್(Veer Savarkar) ಭಾವಚಿತ್ರ ಇಡುವಂತೆ ಪ್ರೇರೇಪಿಸುತ್ತಿದ್ದಾರೆ. ಸನಾತನಕ್ಕೆ ಆದ ಅವಮಾನವನ್ನ ಚಾಲೆಂಜ್ ಆಗಿ ತೆಗೆದುಕೊಂಡಿರುವ ಶಾಸಕ ಯತ್ನಾಳ್ ಹಾಗೂ ವಿವೇಕಾನಂದ ಸೇನೆ ಗಣೇಶ ಹಬ್ಬಕ್ಕೆ ಬೇಕಾದ ಸಹಾಯ, ಸಹಕಾರವನ್ನು ಮಾಡುತ್ತಿದೆ. ಜೊತೆಗೆ ಸನಾತನ ಧರ್ಮದ ಬಗ್ಗೆ ಯುವ ಸಮುದಾಯದಲ್ಲಿ ಹೊಸ ಕಿಚ್ಚು ಹಬ್ಬಿಸುತ್ತಿದೆ.

ಇದನ್ನೂ ವೀಕ್ಷಿಸಿ:  ಅನ್ನದಾತರಿಗೆ ಕಂಟಕವಾಗಿವೆ ಕೆಮಿಕಲ್ ಫ್ಯಾಕ್ಟರಿ! ಕೆಮಿಕಲ್ ತ್ಯಾಜ್ಯದಿಂದ ರೈತರ ಬದುಕೇ ಬರ್ಬಾದ್

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!