ಕಡಲ ನಗರಿಯಲ್ಲಿ ಹೆಚ್ಚಾಯ್ತು ಮರಳಿನ ಸಮಸ್ಯೆ: ಕೃತಕ ಅಭಾವಕ್ಕೆ ಗುತ್ತಿಗೆದಾರರು ಕಂಗಾಲು

ಕಡಲ ನಗರಿಯಲ್ಲಿ ಹೆಚ್ಚಾಯ್ತು ಮರಳಿನ ಸಮಸ್ಯೆ: ಕೃತಕ ಅಭಾವಕ್ಕೆ ಗುತ್ತಿಗೆದಾರರು ಕಂಗಾಲು

Published : Oct 28, 2023, 10:57 AM IST

ಮಂಗಳೂರಲ್ಲಿ ಮಳೆಗಾಲದಲ್ಲಿ ಉಕ್ಕಿ ಹರಿಯುವ ಪಂಚ ನದಿಗಳಿರುವ ಕಾರಣ ಅಲ್ಲಿ ಯಥೇಚ್ಚವಾಗಿ ಮರಳು ಸಂಗ್ರಹವಾಗುತ್ತದೆ. ಆದ್ರೆ ಕಟ್ಟಡ ಕಾಮಗಾರಿ ಆಗಬೇಕು ಅಂದ್ರೆ ಕಾಳ ಸಂತೆಯಲ್ಲೇ ಮರಳು ಖರೀದಿ ಮಾಡಬೇಕಾದ ಅನಿವಾರ್ಯತೆ ಎದುರುರಾಗಿದೆ.  

ನೇತ್ರಾವತಿ, ಕುಮಾರಧಾರ, ಪಲ್ಗುಣಿ, ನಂದಿನಿ, ಪಯಸ್ವಿನಿ... ಈ ಪಂಚ ನದಿಗಳು ಹರಿಯುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸದೊಂದು ಸಮಸ್ಯೆ ಶುರುವಾಗಿದೆ. ಜಿಲ್ಲೆಯ ಈ ಎಲ್ಲಾ ನದಿಗಳಲ್ಲೂ ಯಥೇಚ್ಚವಾಗಿ ಮರಳು ಸಂಗ್ರಹ ಇದ್ರೂ , ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯಲ್ಲಿ ಕಾಮಗಾರಿಗೆ ಮರಳು(Sand) ಸಿಗ್ತಾ ಇಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಸರ್ಕಾರಿ ಹಾಗೂ ಖಾಸಗಿಯಾಗಿ ನಡೆಯುತ್ತಿರುವ ಕಾಮಗಾರಿಗಳಿಗೆ ಮರಳು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಹೀಗೇ ಮುಂದುವರೆದ್ರೆ ಇನ್ನು ಹತ್ತು ದಿನಗಳಲ್ಲಿ ಸಂಪೂರ್ಣ ಕಾಮಗಾರಿಗಳು ಸ್ಥಗಿತಗೊಳ್ಳಲಿದ್ದು, ಗುತ್ತಿಗೆದಾರರು ಸಂಕಷ್ಟ ಎದುರಿಸಬೇಕಾದ ಆತಂಕ ಎದುರಾಗಿದೆ. ಕಾಮಗಾರಿ(Works) ಸ್ಥಗಿತಗೊಂಡ್ರೆ ಕಾರ್ಮಿಕರು, ಹಾಗೂ ಕಟ್ಟಡ ಕಾಮಗಾರಿಗೆ ಪೂರಕವಾಗಿ ಕೆಲಸ ಮಾಡುವ ಸಾವಿರಾರು ಜನರು ಕೆಲಸ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಲಿದೆ. ಅಕ್ಟೋಬರ್ ಮೊದಲ ವಾರದಲ್ಲೇ ಮರಳುಗಾರಿಕೆ ಆರಂಭವಾಗಬೇಕಿತ್ತಾದ್ರೂ, ಈ ಬಾರಿ ಮಳೆಗಾಲ ಮುಗಿದ ಬಳಿಕವೂ ಸರ್ಕಾರ ಮರಳುಗಾರಿಕೆಗೆ ಅವಕಾಶ ಕಲ್ಪಿಸಿಲ್ಲ. ಸಿಯಾರ್ಡ್ ವ್ಯಾಪ್ತಿಯಲ್ಲಿ ಮರಳು ದಿಬ್ಬಗಳನ್ನು ಗುರುತಿಸಿರೋ ಗಣಿ ಇಲಾಖೆ ಮರಳು ತೆಗೆಯಲು ಅನುಮತಿಗಾಗಿ ಸರ್ಕಾರಕ್ಕೆ ಕಳುಹಿಸಿಕೊಟ್ಟಿದೆಯಾದ್ರೂ ಸರ್ಕಾರ ಇನ್ನೂ ಉತ್ತರ ನೀಡಿಲ್ಲ. ಇನ್ನು ನದಿಗಳಲ್ಲಿ ಮರಳು ತೆಗೆಯುವ ಗುತ್ತಿಗೆ ಪಡೆದವರಿಗೆ ವೇ ಬ್ರಿಜ್ ನಿರ್ಮಾಣ ಮಾಡಬೇಕು ಅನ್ನೋ ಕಾನೂನು ತಂದ ಕಾರಣ ನದಿಯಲ್ಲೂ ಮರಳುಗಾರಿಕೆ ನಡೆಯುತ್ತಿಲ್ಲ. ಹಾಗಂತ ಕಾಳಸಂತೆಯಲ್ಲಿ ಮರಳು ಸಿಗ್ತಾ ಇರೋದು ಮಾತ್ರವಲ್ಲದೆ ಬೆಂಗಳೂರು , ಕೇರಳ ಕಡೆಗೆ ರವಾನೆಯಾಗುತ್ತಿದೆ. ಹೀಗಾಗಿ ಸರ್ಕಾರ ತಕ್ಷಣ ಜಿಲ್ಲೆಗೆ ಪ್ರತ್ಯೇಕ ಮರಳು ನೀತಿ ರೂಪಿಸಿ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  31 ವರ್ಷದ ಹಿಂದೆ ರೈತರ ಜಮೀನು ಭೂಸ್ವಾಧೀನ: ಏಕಾಏಕಿ ಬಡವರ ಮನೆ ನೆಲಸಮಗೊಳಿಸಿದ KIADB

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more