ಕಡಲ ನಗರಿಯಲ್ಲಿ ಹೆಚ್ಚಾಯ್ತು ಮರಳಿನ ಸಮಸ್ಯೆ: ಕೃತಕ ಅಭಾವಕ್ಕೆ ಗುತ್ತಿಗೆದಾರರು ಕಂಗಾಲು

ಕಡಲ ನಗರಿಯಲ್ಲಿ ಹೆಚ್ಚಾಯ್ತು ಮರಳಿನ ಸಮಸ್ಯೆ: ಕೃತಕ ಅಭಾವಕ್ಕೆ ಗುತ್ತಿಗೆದಾರರು ಕಂಗಾಲು

Published : Oct 28, 2023, 10:57 AM IST

ಮಂಗಳೂರಲ್ಲಿ ಮಳೆಗಾಲದಲ್ಲಿ ಉಕ್ಕಿ ಹರಿಯುವ ಪಂಚ ನದಿಗಳಿರುವ ಕಾರಣ ಅಲ್ಲಿ ಯಥೇಚ್ಚವಾಗಿ ಮರಳು ಸಂಗ್ರಹವಾಗುತ್ತದೆ. ಆದ್ರೆ ಕಟ್ಟಡ ಕಾಮಗಾರಿ ಆಗಬೇಕು ಅಂದ್ರೆ ಕಾಳ ಸಂತೆಯಲ್ಲೇ ಮರಳು ಖರೀದಿ ಮಾಡಬೇಕಾದ ಅನಿವಾರ್ಯತೆ ಎದುರುರಾಗಿದೆ.  

ನೇತ್ರಾವತಿ, ಕುಮಾರಧಾರ, ಪಲ್ಗುಣಿ, ನಂದಿನಿ, ಪಯಸ್ವಿನಿ... ಈ ಪಂಚ ನದಿಗಳು ಹರಿಯುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸದೊಂದು ಸಮಸ್ಯೆ ಶುರುವಾಗಿದೆ. ಜಿಲ್ಲೆಯ ಈ ಎಲ್ಲಾ ನದಿಗಳಲ್ಲೂ ಯಥೇಚ್ಚವಾಗಿ ಮರಳು ಸಂಗ್ರಹ ಇದ್ರೂ , ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯಲ್ಲಿ ಕಾಮಗಾರಿಗೆ ಮರಳು(Sand) ಸಿಗ್ತಾ ಇಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಸರ್ಕಾರಿ ಹಾಗೂ ಖಾಸಗಿಯಾಗಿ ನಡೆಯುತ್ತಿರುವ ಕಾಮಗಾರಿಗಳಿಗೆ ಮರಳು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಹೀಗೇ ಮುಂದುವರೆದ್ರೆ ಇನ್ನು ಹತ್ತು ದಿನಗಳಲ್ಲಿ ಸಂಪೂರ್ಣ ಕಾಮಗಾರಿಗಳು ಸ್ಥಗಿತಗೊಳ್ಳಲಿದ್ದು, ಗುತ್ತಿಗೆದಾರರು ಸಂಕಷ್ಟ ಎದುರಿಸಬೇಕಾದ ಆತಂಕ ಎದುರಾಗಿದೆ. ಕಾಮಗಾರಿ(Works) ಸ್ಥಗಿತಗೊಂಡ್ರೆ ಕಾರ್ಮಿಕರು, ಹಾಗೂ ಕಟ್ಟಡ ಕಾಮಗಾರಿಗೆ ಪೂರಕವಾಗಿ ಕೆಲಸ ಮಾಡುವ ಸಾವಿರಾರು ಜನರು ಕೆಲಸ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಲಿದೆ. ಅಕ್ಟೋಬರ್ ಮೊದಲ ವಾರದಲ್ಲೇ ಮರಳುಗಾರಿಕೆ ಆರಂಭವಾಗಬೇಕಿತ್ತಾದ್ರೂ, ಈ ಬಾರಿ ಮಳೆಗಾಲ ಮುಗಿದ ಬಳಿಕವೂ ಸರ್ಕಾರ ಮರಳುಗಾರಿಕೆಗೆ ಅವಕಾಶ ಕಲ್ಪಿಸಿಲ್ಲ. ಸಿಯಾರ್ಡ್ ವ್ಯಾಪ್ತಿಯಲ್ಲಿ ಮರಳು ದಿಬ್ಬಗಳನ್ನು ಗುರುತಿಸಿರೋ ಗಣಿ ಇಲಾಖೆ ಮರಳು ತೆಗೆಯಲು ಅನುಮತಿಗಾಗಿ ಸರ್ಕಾರಕ್ಕೆ ಕಳುಹಿಸಿಕೊಟ್ಟಿದೆಯಾದ್ರೂ ಸರ್ಕಾರ ಇನ್ನೂ ಉತ್ತರ ನೀಡಿಲ್ಲ. ಇನ್ನು ನದಿಗಳಲ್ಲಿ ಮರಳು ತೆಗೆಯುವ ಗುತ್ತಿಗೆ ಪಡೆದವರಿಗೆ ವೇ ಬ್ರಿಜ್ ನಿರ್ಮಾಣ ಮಾಡಬೇಕು ಅನ್ನೋ ಕಾನೂನು ತಂದ ಕಾರಣ ನದಿಯಲ್ಲೂ ಮರಳುಗಾರಿಕೆ ನಡೆಯುತ್ತಿಲ್ಲ. ಹಾಗಂತ ಕಾಳಸಂತೆಯಲ್ಲಿ ಮರಳು ಸಿಗ್ತಾ ಇರೋದು ಮಾತ್ರವಲ್ಲದೆ ಬೆಂಗಳೂರು , ಕೇರಳ ಕಡೆಗೆ ರವಾನೆಯಾಗುತ್ತಿದೆ. ಹೀಗಾಗಿ ಸರ್ಕಾರ ತಕ್ಷಣ ಜಿಲ್ಲೆಗೆ ಪ್ರತ್ಯೇಕ ಮರಳು ನೀತಿ ರೂಪಿಸಿ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  31 ವರ್ಷದ ಹಿಂದೆ ರೈತರ ಜಮೀನು ಭೂಸ್ವಾಧೀನ: ಏಕಾಏಕಿ ಬಡವರ ಮನೆ ನೆಲಸಮಗೊಳಿಸಿದ KIADB

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more