ಸಂವಿಧಾನ ಪುಸ್ತಕ ಅರವಿಂದ ಬೆಲ್ಲದ ಕಣ್ಣಿಗೆ ಬೈಬಲ್ ರೀತಿ ಕಾಣುತ್ತೆ ಅಂದ್ರೆ ಕಣ್ಣುಗಳ ತಪಾಸಣೆ ಮಾಡಿಸಬೇಕು: ಸಂತೋಷ ಲಾಡ್

ಸಂವಿಧಾನ ಪುಸ್ತಕ ಅರವಿಂದ ಬೆಲ್ಲದ ಕಣ್ಣಿಗೆ ಬೈಬಲ್ ರೀತಿ ಕಾಣುತ್ತೆ ಅಂದ್ರೆ ಕಣ್ಣುಗಳ ತಪಾಸಣೆ ಮಾಡಿಸಬೇಕು: ಸಂತೋಷ ಲಾಡ್

Published : Jun 24, 2024, 05:53 PM IST

ಅರವಿಂದ ಬೆಲ್ಲದ ಕಣ್ಣಿಗೆ ಸಂವಿಧಾನ ಪುಸ್ತಕ ಬೈಬಲ್ ರೀತಿ ಕಾಣುತ್ತೆ ಅಂದರೆ ಅವರ ಕಣ್ಣುಗಳನ್ನು ತಪಾಸಣೆ ಮಾಡಿಸಬೇಕು ಎಂದು ಧಾರವಾಡದಲ್ಲಿ ಸಂತೋಷ್‌ ಲಾಡ್‌ ಹೇಳಿದ್ದಾರೆ.

ರಾಹುಲ್ ಗಾಂಧಿ ಕೈಯಲ್ಲಿನ ಸಂವಿಧಾನ ಪುಸ್ತಕ(Constitution Book) ಬೈಬಲ್ ರೀತಿ ಕಾಣುತ್ತದೆ ಎಂಬ ಅರವಿಂದ ಬೆಲ್ಲದ(Aravinda Bellad) ಹೇಳಿಕೆಗೆ ಸಚಿವ ಸಂತೋಷ ಲಾಡ್(Santosh Lad) ತಿರುಗೇಟು ನೀಡಿದ್ದಾರೆ. ಧಾರವಾಡ(Dharwad) ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಂವಿಧಾನ ಪುಸ್ತಕ, ಅರವಿಂದ ಬೆಲ್ಲದ ಕಣ್ಣಿಗೆ ಬೈಬಲ್ ರೀತಿ ಕಾಣುತ್ತೆ ಅಂದರೆ ಅವರ ಕಣ್ಣುಗಳನ್ನು ತಪಾಸಣೆ ಮಾಡಿಸಬೇಕು ಎಂದು ಕಿಡಿಕಾರಿದರು. ಬಿಜೆಪಿಯವರು ಜೂನ್ 25 ರಂದು ತುರ್ತು ಪರಿಸ್ಥಿತಿ ಹೇರಿದ ವಿರೋಧಿ ದಿನ ಆಚರಣೆ ಮಾಡಲು ಅಧಿಕಾರ ಇದೆ ಮಾಡಲಿ. ಅದರ ಜೊತೆಗೆ  ಪ್ರಧಾನಮಂತ್ರಿ ನರೇಂದ್ರ ಮೋದಿ ಸಾಹೇಬರು ಸಂವಿಧಾನ ವಿರೋಧಿ ಚಟುವಟಿಕೆಯ ಕುರಿತು ಮಾತನಾಡುತ್ತಾರಾ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಸರ್ಕಾರದಿಂದ ಶಾಸಕರಿಗೆ ಅನುದಾನ ನೀಡುತ್ತಿಲ್ಲ ಎಂಬ ಆರೋಪ ಹೊಸದೇನಲ್ಲ, ಕೇಂದ್ರ ಸರ್ಕಾರ ಕಳೆದ 10 ವರ್ಷದಲ್ಲಿ ಎಷ್ಟು ಅನುದಾನ ನೀಡಿದೆ ಎಂಬುವುದನ್ನು ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಅವರನ್ನು ಕೇಳಿ ಎಂದರು.

ಇದನ್ನೂ ವೀಕ್ಷಿಸಿ:  ನಟೋರಿಯಸ್ ರೌಡಿ ಭೇಟಿಗೆ ದುಂಬಾಲು ಬಿದ್ದ ದರ್ಶನ್! ನಟನಿಗೂ ರೌಡಿ ನಾಗನಿಗೂ ಇರುವ ಲಿಂಕ್‌ ಏನು?

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more