ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್: ಕ್ಲೀನ್ ಚಿಟ್ ಸಿಕ್ರೂ ಈಶ್ವರಪ್ಪಗೆ ಬಿಡದ ಸಂಕಷ್ಟ

ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್: ಕ್ಲೀನ್ ಚಿಟ್ ಸಿಕ್ರೂ ಈಶ್ವರಪ್ಪಗೆ ಬಿಡದ ಸಂಕಷ್ಟ

Published : Jan 06, 2023, 11:27 AM IST

ಸಚಿವ ಸಂಪುಟ ಸೇರಲು ತಯಾರಿಯಲ್ಲಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ, ಕ್ಲೀನ್ ಚಿಟ್​ ಪಡೆದುಕೊಂಡಿದ್ದ ಕೆ.ಎಸ್ ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಈ ಪ್ರಕರಣದ ಕುರಿತು ಸಾಕ್ಷ್ಯ ಹಾಜರುಪಡಿಸಲು ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚನೆ ನೀಡಿದೆ. ಕೇಸ್‌ ಸಂಬಂಧ ಸಲ್ಲಿಕೆ ಮಾಡಿದ್ದ ಬಿ ರಿಪೋರ್ಟ್‌ನಲ್ಲಿ ಉಲ್ಲೇಖಿಸಿದ ಸಾಕ್ಷ್ಯ ನೀಡುವಂತೆ ಕೋರ್ಟ್‌ ಆದೇಶ ಮಾಡಿದೆ. ಅಸಲಿ ಸಾಕ್ಷ್ಯಗಳನ್ನು ಮುಚ್ಚಿಟ್ಟಿದ್ದಾರೆ ಎಂದು ಆರೋಪ ಮಾಡಿ, ಖಾಕಿ ಸಲ್ಲಿಸಿದ್ದ ಬಿ ರಿಪೋರ್ಟ್‌ ಪ್ರಶ್ನಿಸಿ ಸಂತೋಷ್‌ ಸಹೋದರ ಅರ್ಜಿ ಸಲ್ಲಿಸಿದ್ದರು. ಕೋರ್ಟ್‌ ಮುಂದೆ ಸಾಕ್ಷಿ ಹಾಜರಿಗೆ ಸಹೋದರ ಪ್ರಶಾಂತ್‌ ಪಾಟೀಲ್‌ ಮನವಿ ಮಾಡಿದ್ದರು. ಪ್ರಶಾಂತ್‌ ಪಾಟೀಲ್‌ ಪರ ವಕೀಲ ಕೆಬಿಕೆ ಸ್ವಾಮಿ ವಾದ ಮಂಡಿಸಿದ್ದರು. ತನಿಖಾಧಿಕಾರಿಯೇ ಖುದ್ದು ಕೋರ್ಟ್‌ಗೆ ಹಾಜರು ಪಡಿಸಲು ಆದೇಶ ನೀಡಲಾಗಿದ್ದು, ಜನವರಿ 31ರಂದು ತನಿಖಾಧಿಕಾರಿ ಕೋರ್ಟ್‌ ಮುಂದೆ ಹಾಜರಿಗೆ ಸೂಚನೆ ನೀಡಲಾಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more